ಓಮಿಕ್ರಾನ್ಗೆ ಜನತೆ ಹೆದರುವ ಅಗತ್ಯವಿಲ್ಲ: ಪ್ರಮೋದ ಸಾವಂತ್
Team Udayavani, Dec 7, 2021, 4:46 PM IST
ಪಣಜಿ: ಕೋವಿಡ್-19 ರೂಪಾಂತರಿ ಓಮಿಕ್ರಾನ್ಗೆ ಜನತೆ ಹೆದರುವ ಅಗತ್ಯವಿಲ್ಲ, ಎಲ್ಲರೂ ಕೂಡ ಅಗತ್ಯ ಕಾಳಜಿ ತೆಗೆದುಕೊಳ್ಳಬೇಕು ಎಂದು ಮುಖ್ಯಮಂತ್ರಿ ಪ್ರಮೋದ ಸಾವಂತ್ ಹೇಳಿದ್ದಾರೆ.
ಪಣಜಿಯಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು- ಗೋವಾದಲ್ಲಿ ಓಮಿಕ್ರಾನ್ ಶಂಕಿತರು ಪತ್ತೆಯಾಗಿದ್ದು, ಅವರ ತಪಾಸಣಾ ವರದಿ ಇನ್ನೂ ಬಂದಿಲ್ಲ. ಇದರಿಂದಾಗಿ ಖಚಿತ ವರದಿ ಬರುವ ಮುನ್ನವೇ ರಾಜ್ಯದಲ್ಲಿ ಯಾರೂ ಕೂಡ ಭಯದ ವಾತಾವರಣ ಸೃಷ್ಠಿಸಬಾರದು. ನಾನು ಪರಿಸ್ಥಿತಿಯನ್ನು ಗಮನಿಸುತ್ತಿದ್ದೇನೆ ಎಂದು ನುಡಿದರು.
ರಾಜ್ಯದಲ್ಲಿ 1.20 ಲಕ್ಷ ಜನರು ಎರಡನೇಯ ಡೋಸ್ ಲಸಿಕೆ ಪಡೆದುಕೊಂಡಿಲ್ಲ, ಅವರು ಕೂಡಲೆ ಲಸಿಕೆ ಪಡೆದುಕೊಳ್ಳಬೇಕು ಎಂದು ಮಾಡಿದ್ದಾರೆ.
ನಾವು ಅಗತ್ಯ ಮುನ್ನೆಚ್ಚರಿಕೆ ತೆಗೆದುಕೊಳ್ಳಬೇಕು, ಆದರೆ ಜನತೆ ಭಯಭೀತರಾಗುವ ಅಗತ್ಯವಿಲ್ಲ. ಡಿಸೆಂಬರ್ 19 ರ ಒಳಗೆ ಗೋವಾದಲ್ಲಿ ಎಲ್ಲರಿಗೂ 2 ನೇಯ ಡೋಸ್ ಲಸಿಕೆ ಪೂರ್ಣಗೊಳಿಸುವ ಉದ್ದೇಶ ನಾವು ಹೊಂದಿದ್ದೇವೆ. ಜನತೆ ನಮಗೆ ಸಹಕಾರ ನೀಡಬೇಕು. ಡಿಸೆಂಬರ್ 19 ರಂದು ಪ್ರಧಾನಿ ನರೇಂದ್ರ ಮೋದಿಯವರು ಗೋವಾಕ್ಕೆ ಆಗಮಿಸುತ್ತಿದ್ದಾರೆ. ಅದಕ್ಕೂ ಮುನ್ನ ರಾಜ್ಯದಲ್ಲಿ ಶೇ 100 ರಷ್ಟು ಜನರು ಕೋವಿಡ್ ಎರಡನೇಯ ಲಸಿಕೆ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ