ಒಮಿಕ್ರಾನ್ ಸಾವು ತರದು, ಆದರೂ ಎಚ್ಚರವಿರಲಿ!
Team Udayavani, Dec 5, 2021, 6:40 AM IST
ಹೈದರಾಬಾದ್: ಕೊರೊನಾದ ಹೊಸ ರೂಪಾಂತರಿಯಾದ ಒಮಿಕ್ರಾನ್ನ ಮಾರಣಾಂತಿಕವಲ್ಲ. ಅದರ ಸೋಂಕು ತಗಲಿ ದವರು ಖಂಡಿತವಾಗಿಯೂ ಸಾಯುತ್ತಾರೆ ಎಂಬುದು ಸತ್ಯಕ್ಕೆ ದೂರವಾದ ವಿಚಾರ. ಆದರೆ ಆ ಬಗ್ಗೆ ನಿರ್ಲಕ್ಷ್ಯ ಧೋರಣೆ ಬೇಡ. ಜನರು ಆ ರೂಪಾಂತರಿ ಕುರಿತಂತೆ ಹುಷಾರಾಗಿರಬೇಕು ಎಂದು ಹೈದರಾಬಾದ್ನಲ್ಲಿರುವ ಆಲ್ ಇಂಡಿಯಾ ಮೆಡಿಕಲ್ ಸೈನ್ಸಸ್ (ಏಮ್ಸ್ನ) ಡಾ| ವಿಕಾಸ್ ಭಾಟಿಯಾ ತಿಳಿಸಿದ್ದಾರೆ.
ಈ ಹೊತ್ತಿಗೆ ಜಗತ್ತಿನ ಸುಮಾರು 30 ದೇಶಗಳಲ್ಲಿ ಒಮಿ ಕ್ರಾನ್ ಪ್ರಕರಣಗಳು ಕಾಣಿಸಿಕೊಂಡಿವೆ. ಆದರೆ ಅವುಗಳಲ್ಲಿ ಯಾವ ಸೋಂಕಿತರ ಪರಿಸ್ಥಿತಿಯೂ ಗಂಭೀರವಾಗಿಲ್ಲ. ಆದರೂ ಈ ರೂಪಾಂತರಿ ಯಾವ ಮಟ್ಟದಲ್ಲಿ ಘಾಸಿ ಮಾಡ ಬಲ್ಲದು ಎಂಬುದಿನ್ನೂ ಖಚಿತವಾಗಿಲ್ಲ. ಆದ್ದರಿಂದ ಇದು ಅಪಾಯಕಾರಿಯಲ್ಲ ಎಂದು ಸದ್ಯದ ಮಟ್ಟಿಗೆ ಸ್ಪಷ್ಟವಾಗಿ ಹೇಳಬಹುದು ಎಂದು ಅವರು ಹೇಳಿದ್ದಾರೆ.
ನೆಗಡಿ ವೈರಾಣುವಿನಂತಿದೆ!:
ಕೊರೊನಾ ಡೆಲ್ಟಾ ರೂಪಾಂ ತರಿಯು, ಶೀತ ಉಂಟು ಮಾಡುವ ಯಾವುದೋ ಒಂದು ವೈರಾಣುವಿನೊಡನೆ ಸಂಪರ್ಕ ಹೊಂದಿದ ಪರಿಣಾಮ ಒಮಿ ಕ್ರಾನ್ ರೂಪಾಂತರಿ ಸೃಷ್ಟಿಯಾಗಿರಬಹುದು. ಹಾಗಾಗಿಯೇ ಒಮಿಕ್ರಾನ್ ಸೋಂಕಿತರಲ್ಲಿ ಕೇವಲ ಶೀತ, ಅಲ್ಪ ಪ್ರಮಾಣದ ಜ್ವರವಷ್ಟೇ ಕಾಣಿಸಿಕೊಳ್ಳುತ್ತಿದ್ದು, ಕೊರೊನಾ ಮೂಲ ವೈರಾಣುವಿನಿಂದ ಉಂಟಾಗುವಂಥ ಯಾವುದೇ ಗಂಭೀರ ಲಕ್ಷಣಗಳು ಕಾಣುತ್ತಿಲ್ಲ ಎಂದು ಎಂದು ಮೆಚ್ಯುಸ್ಯಾಟ್ನ ಎನ್ಫರ್ಮ್ ಎಂಬ ಸಂಶೋಧನ ಸಂಸ್ಥೆಯಲ್ಲಿ ಸೇವೆ ಸಲ್ಲಿಸುತ್ತಿರುವ ಭಾರತ ಮೂಲದ ವೆಂಕಿ ಸುಂದರರಾಜನ್ ತಿಳಿಸಿದ್ದಾರೆ.
6 ರಾಜ್ಯಗಳಿಗೆ ಕೇಂದ್ರ ಆರೋಗ್ಯ ಇಲಾಖೆಯ ಪತ್ರ :
ಹಲವು ರಾಜ್ಯಗಳಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಶನಿವಾರ ಕರ್ನಾಟಕ ಸೇರಿದಂತೆ 6 ರಾಜ್ಯಗಳಿಗೆ ಕೇಂದ್ರ ಸರಕಾರವು ಪತ್ರ ಬರೆದಿದೆ. ಅಂತಾರಾಷ್ಟ್ರೀಯ ಪ್ರಯಾಣಿಕರ ಮೇಲೆ ನಿಗಾ ಇಡಿ, ಹೊಸ ಹಾಟ್ಸ್ಪಾಟ್ಗಳ ಮೇಲೆ ಕಣ್ಣಿಡಿ, ಪಾಸಿಟಿವ್ ಬಂದವರ ಸಂಪರ್ಕಿತರ ಪತ್ತೆಗೆ ಕ್ರಮ ಕೈಗೊಳ್ಳಿ, ಎಲ್ಲ ಪಾಸಿಟಿವ್ ಸ್ಯಾಂಪಲ್ಗಳನ್ನೂ ವಂಶವಾಹಿ ಪರೀಕ್ಷೆಗೆ ಕಳುಹಿಸಿಕೊಡಿ, ಆರೋಗ್ಯ ಮೂಲಸೌಕರ್ಯಗಳನ್ನು ಸನ್ನದ್ಧವಾಗಿಡಿ. ಎಲ್ಲದಕ್ಕಿಂತಲೂ ಹೆಚ್ಚಾಗಿ ಸಮುದಾಯಗಳಲ್ಲಿ ಜಾಗೃತಿ ಮೂಡಿಸಿ ಎಂದು ಪತ್ರದಲ್ಲಿ ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಸೂಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ