ಮಸೀದಿ ಉರುಳಿದ ಮೇಲೆ…


Team Udayavani, Nov 10, 2019, 4:04 AM IST

masidi-uru

1992ರ ಡಿ.6ರಂದು ರಾತ್ರಿ ಟಿವಿಗೆ ನೀಡಿದ ಸಂದರ್ಶನದಲ್ಲಿ ಅಂದಿನ ಪ್ರಧಾನಿ ಪಿ.ವಿ. ನರಸಿಂಹರಾವ್‌ ಮಾತನಾಡುತ್ತಾ, “ಮಸೀದಿ ಉರುಳಿಸಿದ್ದು ರಾಷ್ಟ್ರೀಯ ಅವಮಾನ. ಅದೇ ಸ್ಥಳದಲ್ಲಿ ಪುನಃ ಮಸೀದಿ ನಿರ್ಮಿಸಲಾಗುವುದು’ ಎಂದು ಹೇಳಿದರು. ಕುತೂಹಲದ ಸಂಗತಿ ಎಂದರೆ, ಕಲ್ಯಾಣ ಸಿಂಗ್‌ ರಾಜೀನಾಮೆ ಬಳಿಕ ಅದೇ ದಿನ (ಡಿ. 6ರಂದು ) ರಾಷ್ಟ್ರಪತಿ ಆಡಳಿತ ಜಾರಿಯಾಗುತ್ತಿದ್ದಂತೆ ಕರ ಸೇವಕರು ಅದೇ ಸ್ಥಳದಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ತೊಡಗಿ, 1992ರ ಡಿ. 8ರಂದು ಬೆಳಗ್ಗೆ ತಾತ್ಕಾಲಿಕ ಮಂದಿರ ನಿರ್ಮಿಸಿ, ರಾಮನ ಮೂರ್ತಿ ಪ್ರತಿ ಷ್ಠಾಪಿಸಿ ಪೂಜೆ ನಡೆಸಿ ಪ್ರಸಾದ ವಿತರಣೆ ಮಾಡಿದರು.

ಇನ್ನೊಂದು ಸ್ವಾರಸ್ಯಕರ ಸಂಗತಿ ಎಂದರೆ, ತಾತ್ಕಾಲಿಕ ರಾಮ ಮಂದಿರ ನಿರ್ಮಾಣ ಪೂರ್ತಿಯಾದ ಅನಂತರ ಡಿ. 8ರಂದು ಕೇಂದ್ರ ಪೊಲೀಸ್‌ ಪಡೆ ರಾಮ ಜನ್ಮಭೂಮಿ ಪ್ರದೇಶವನ್ನು ತನ್ನ ನಿಯಂತ್ರಣಕ್ಕೆ ತೆಗೆದುಕೊಂಡಿತು. ರಾಮನ ತಾತ್ಕಾಲಿಕ ಮಂದಿರ ನಿರ್ಮಾಣವಾದ ಎರಡೇ ದಿನಗಳಲ್ಲಿ (ಡಿ. 10) ಆರ್‌ಎಸ್ಸೆಸ್‌, ವಿಶ್ವ ಹಿಂದೂ ಪರಿಷತ್‌, ಬಜರಂಗದಳ, ಜಮಾತ್‌-ಎ-ಇಸ್ಲಾಮಿ ಹಿಂದ್‌ ಹಾಗೂ ಇಸ್ಲಾಮಿಕ್‌ ಸೇವಕ ಸಂಘಗಳನ್ನು ಕೇಂದ್ರ ಸರಕಾರ ನಿಷೇಧಿಸಿತು. ಜತೆಗೆ ಡಿಸೆಂಬರ್‌ 15ರಂದು ರಾಜಸ್ಥಾನ, ಹಿಮಾಚಲ ಪ್ರದೇಶ, ಮಧ್ಯ ಪ್ರದೇಶಗಳಲ್ಲಿ ಆಡಳಿತ ನಡೆಸುತ್ತಿದ್ದ ಬಿಜೆಪಿ ಸರ್ಕಾರಗಳನ್ನು ವಜಾಗೊಳಿಸಿ, ರಾಷ್ಟ್ರಪತಿ ಆಡಳಿತ ಘೋಷಿಸಲಾಯಿತು.

ಅದರ ಮರುದಿನವೇ ಅಂದರೆ ಡಿ.16ರಂದು ರಾಮ ಜನ್ಮ ಭೂಮಿಯಲ್ಲಿದ್ದ ವಿವಾದಾತ್ಮಕ ಕಟ್ಟಡ ಉರುಳಲು ಕಾರಣವಾದ ಘಟನೆಗಳ ತನಿಖೆ ನಡೆಸಲು ಕೇಂದ್ರ, ಲಿಬರ್ಹಾನ್‌ ಆಯೋಗ ನೇಮಿ ಸಿತು. ಇವೆಲ್ಲ ಬೆಳವಣಿಗೆಗಳ ನಡುವೆ ಅಯೋಧ್ಯೆಯಲ್ಲಿ ಕರ ಸೇವಕ ರಿಂದ ನಿರ್ಮಾಣಗೊಂಡ ರಾಮ ಮಂದಿರದಲ್ಲಿ ಪ್ರತಿಷ್ಠಾಪಿತ ರಾಮ ಲಲ್ಲಾನ ದರ್ಶನ ಪಡೆಯಲು ವಿವಿಧ ಭಾಗಗಳಿಂದ ಭಕ್ತರು ಬರಲಾ ರಂಭಿಸಿದರು. ದಿನದಿಂದ ದಿನಕ್ಕೆ ಜನಸಂದಣಿ ಹೆಚ್ಚುತ್ತ ಹೋಯಿತು. ಸ್ಥಳೀಯ ಆಡಳಿತ ಭಕ್ತರಿಗೆ ರಾಮನ ದರ್ಶನಕ್ಕೆ ಅನು ಮತಿ ನೀಡಿತು. ಆದರೆ, ಇದಕ್ಕೆ ಕೇಂದ್ರ ಸರ್ಕಾರ ತಡೆಯೊಡ್ಡಿತು. ಇದ ರಿಂದ ಜನರಲ್ಲಿ ಅಸಂತೋಷ ಹೆಚ್ಚಾಗಿ ವಾತಾವರಣ ಪ್ರಕ್ಷುಬ್ಧವಾಯಿತು.

ಭಕ್ತರಿಗೆ ರಾಮ ದರ್ಶನಕ್ಕೆ ತಡೆಯೊಡ್ಡಬಾರದೆಂದು ಅಲಹಾಬಾದ್‌ ಹೈಕೋರ್ಟ್‌ ತೀರ್ಪು ನೀಡಿದ ಬಳಿಕ ವಾತಾವರಣ ತಿಳಿಯಾಯಿತು. ಪರಿಸ್ಥಿತಿ ಕೈಮೀರಿ ಹೋಗುತ್ತಿರುವುದನ್ನು ಮನಗಂಡ ಸರ್ಕಾರ ಉಭಯ ಸಮುದಾಯಗಳನ್ನು ತೃಪ್ತಿಪಡಿಸುವ ಇನ್ನೊಂದು ಪ್ರಯತ್ನ ನಡೆಸಿತು. ನರಸಿಂಹರಾವ್‌ ಸರ್ಕಾರ 1993ರ ಜ.8ರಂದು ವಿಶೇಷ ಆಜ್ಞೆ ಮೂಲಕ ರಾಮ ಜನ್ಮಭೂಮಿ ಪ್ರದೇಶವನ್ನು ತನ್ನ ವಶಕ್ಕೆ ತೆಗೆದು ಕೊಂಡಿತು. ಜತೆಗೆ, ಒಂದು ಟ್ರಸ್ಟ್‌ ಮೂಲಕ ರಾಮ ಮಂದಿರ ಹಾಗೂ ಇನ್ನೊಂದು ಟ್ರಸ್ಟ್‌ನಿಂದ ಮಸೀದಿ ನಿರ್ಮಿಸುವ ಪ್ರಸ್ತಾವ ಮಂಡಿಸಿತು. ಆದರೆ, ಉಭಯ ಸಮುದಾಯದ ಮುಖಂಡರು ತಿರಸ್ಕರಿಸಿದರು.

ಮಸೀದಿ ಬಿತ್ತು, ಸರ್ಕಾರಗಳೂ ಬಿದ್ದವು!
* ಅಯೋಧ್ಯೆಯ ವಿವಾದಿತ ಕಟ್ಟಡದ ಕೊನೆಯ ಗುಮ್ಮಟ ಉರುಳಿದ ಒಂದು ತಾಸಿನಲ್ಲಿ ಉತ್ತರ ಪ್ರದೇಶದ ಅಂದಿನ ಮುಖ್ಯಮಂತ್ರಿ ಕಲ್ಯಾಣ ಸಿಂಗ್‌ ಸಂಜೆ 5.30ಕ್ಕೆ ರಾಜೀನಾಮೆ ನೀಡಿದರು.

* ಇದರ ಬೆನ್ನಿಗೆ ಕೇಂದ್ರ ಸರ್ಕಾರ ಉತ್ತರ ಪ್ರದೇಶದ ಬಿಜೆಪಿ ಸರ್ಕಾರವನ್ನು ವಜಾಗೊಳಿಸಿ ರಾಷ್ಟ್ರ ಪತಿ ಆಡಳಿತ ಜಾರಿಗೊಳಿಸಿತು.

* ಡಿ.7ರಿಂದ 11ರ ವರೆಗೆ ದೇಶದ ವಿವಿಧ ಕಡೆಗಳಲ್ಲಿ ಕೋಮು ಗಲಭೆ ನಡೆದು, ಸುಮಾರು 900 ಮಂದಿ ಬಲಿಯಾದರು.

* ಇದನ್ನು ಆಧಾರವಾಗಿಟ್ಟುಕೊಂಡ ಕೇಂದ್ರ ಸರ್ಕಾರ‌, ಕೋಮು ಗಲಭೆ ನಿಯಂ ತ್ರಿಸುವಲ್ಲಿ ವಿಫಲವಾದವು ಎಂಬ ಕಾರಣ ನೀಡಿ, ಡಿ.15ರಂದು ಮಧ್ಯ ಪ್ರದೇಶ, ರಾಜಸ್ಥಾನ ಹಾಗೂ ಹಿಮಾಚಲ ಪ್ರದೇಶಗಳಲ್ಲಿ ಆಡಳಿತ ನಡೆಸುತ್ತಿದ್ದ ಬಿಜೆಪಿ ಸರ್ಕಾರಗಳನ್ನು ವಜಾಗೊಳಿಸಿ, ಅಲ್ಲಿ ರಾಷ್ಟ್ರಪತಿ ಆಡಳಿತ ಜಾರಿಗೆ ತಂದಿತು.

* ಇದಾದ ಒಂದು ವರ್ಷದಲ್ಲಿ ಅಂದರೆ 1993ರ ನವೆಂಬರ್‌ನಲ್ಲಿ ಈ ನಾಲ್ಕೂ ರಾಜ್ಯಗಳಲ್ಲಿ ಚುನಾವಣೆ ನಡೆದು ರಾಜಸ್ಥಾನದಲ್ಲಿ ಮಾತ್ರ ಬಿಜೆಪಿ ಪುನಃ ಅಧಿಕಾರ ಹಿಡಿಯಿತು. ಮೇಲ್ನೋಟಕ್ಕೆ ಚುನಾವಣೆಯಲ್ಲಿ ಬಿಜೆಪಿಗೆ ಹಿನ್ನಡೆ ಎಂಬಂತೆ ಕಂಡುಬಂದರೂ ಹಿಂದೂ ಮತಗಳ ಕ್ರೋಡೀಕರಣ, ಹಾಗೆಯೇ ಕಾಂಗ್ರೆಸ್‌ನಿಂದ ಮುಸ್ಲಿಂ ಸಮುದಾಯ ದೂರ ಸರಿಯುತ್ತಿರುವ ಸೂಚನೆಗಳು ಕಂಡುಬಂದವು. ಇದು ಮುಂದೆ ರಾಜ ಕೀ ಯವಾಗಿ ಬಿಜೆಪಿಗೆ ಅನುಕೂಲವಾಯಿತು.

ಟಾಪ್ ನ್ಯೂಸ್

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

1-asasa

Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

kejriwal 2

Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.