ಜಮ್ಮು-ಕಾಶ್ಮೀರದ ಬೆಳವಣಿಗೆಯಿಂದ ಪಾಕ್ ನ ಯೋಜನೆ ಬುಡಮೇಲಾಗುತ್ತಿದೆ: ಎಸ್. ಜಯಶಂಕರ್
Team Udayavani, Oct 2, 2019, 8:10 AM IST
ವಾಷಿಂಗ್ಟನ್: ಜಮ್ಮು ಕಾಶ್ಮೀರದಲ್ಲಿನ ಅಭಿವೃದ್ದಿಯನ್ನು ಭಾರತ ಉನ್ನತ ಮಟ್ಟಕ್ಕೇರಿಸಿದರೆ, 70 ವರ್ಷಗಳಿಂದ ಪಾಕಿಸ್ಥಾನ ಮಾಡುತ್ತಿರುವ ಎಲ್ಲಾ ಯೋಜನೆಗಳು ತಲೆಕೆಳಗಾಗುತ್ತವೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜಯಶಂಕರ್ ಅಭಿಪ್ರಾಯಪಟ್ಟಿದ್ದಾರೆ.
ವಾಷಿಂಗ್ಟನ್ ನಲ್ಲಿ ಮಾಧ್ಯಮವನ್ನು ಉದ್ದೇಶಿಸಿ ಮಾತನಾಡಿದ ಅವರು, ಕಾಶ್ಮೀರ ಕಣಿವೆಯಲ್ಲಿ ಮೊಬೈಲ್ ನೆಟ್ ವರ್ಕ್ ಗಳನ್ನು ಸ್ಥಗಿತಗೊಳಿಸಿರುವುದು ಅಂತರ್ಜಾಲ ಮತ್ತು ಸಾಮಾಜಿಕ ಜಾಲತಾಣಗಳ ದುರುಪಯೋಗವನ್ನು ತಡೆಗಟ್ಟಲು ಮತ್ತು ಯಾವುದೇ ರೀತಿಯ ಪ್ರಾಣ ಹಾನಿಯಾಗದಂತೆ ನೋಡಿಕೊಳ್ಳಲು. ಕಾಶ್ಮೀರದಲ್ಲಿ 70 ವರ್ಷಗಳಿಂದ ಪಾಕ್ ಪಟ್ಟಾಭದ್ರಾ ಹಿತಾಸಕ್ತಿಯನ್ನು ಬೆಳೆಸಲು ಯತ್ನಿಸುತ್ತಿದೆ. ಯಾವುದೇ ವಿಷಯದಲ್ಲಿ ಯಥಾ ಸ್ಥಿತಿಯನ್ನು ಬದಲಾಯಿಸಿದಾಗ ಬಹಳಷ್ಟು ಅಪಾಯ ಉಂಟಾಗುತ್ತದೆ. ಅದರ ಜೊತೆಗೆ ಅಪಾರ ಪ್ರತಿಕ್ರೀಯೆಗಳು ಬರುತ್ತವೆ ಎಂದು 370 ನೇ ವಿಧಿಯ ರದ್ದತಿಯನ್ನು ಉಲ್ಲೇಖಿಸಿ ಮಾತನಡಿದರು.
ಕಾಶ್ಮೀರವನ್ನು ಅಭಿವೃದ್ಧಿಯತ್ತ ಕೊಂಡೊಯ್ಯಲು ಎಲ್ಲಾ ರೀತಿಯಲ್ಲೂ ಶ್ರಮಿಸಿಲಾಗುತ್ತಿದೆ. ಪಾಕಿಸ್ಥಾನ ಆಕ್ರಮಿತ ಕಾಶ್ಮೀರದ ಜನರು ಒಂದಲ್ಲಾ ಒಂದು ದಿನ ಭಾರತದತ್ತ ಮುಖ ಮಾಡುತ್ತಾರೆ. ಗಡಿರೇಖೆಯಯಲ್ಲಿ ನಡೆಯುತ್ತಿರುವ ಭಯೋತ್ಪಾದನೆಯನ್ನು ನಿಯಂತ್ರಿಸಲು ಭಾರತ ತಕ್ಕ ಕ್ರಮ ಕೈಗೊಳ್ಳುತ್ತಿದೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ
ತಂಗಿ ಮದುವೆಗೆ ಟಿವಿ ಗಿಫ್ಟ್ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Amit Shah: 2024ರ ಚುನಾವಣೆಯಲ್ಲಿ ಎನ್ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ