ಸಾಮಾಜಿಕ ಜಾಲತಾಣಗಳ ಮೂಲಕ ಸುಳ್ಳು ವದಂತಿ ಹಬ್ಬಿಸಿದ್ದರೆ ಜೈಲು ಗ್ಯಾರಂಟಿ
Team Udayavani, Mar 11, 2020, 9:49 PM IST
ಹೈದರಾಬಾದ್(ತೆಲಂಗಾಣ): ದಿನದಿಂದ ದಿನಕ್ಕೆ ಸಾಮಾಜಿಕ ಜಾಲತಾಣಗಳ ಮೂಲಕ ಸಮಾಜದ ಸ್ವಾಸ್ತ್ಯವನ್ನು ಕೆಡಿಸುವಂತಹ ಘಟನೆಗಳು ಹೆಚ್ಚುತ್ತಿದ್ದು, ಹೈದರಾಬಾದ್ ಮೂಲದ ವ್ಯಕ್ತಿ ಒರ್ವನನ್ನು ಈ ವಿಷಯಕ್ಕೆ ಸಂಬಂಧಪಟ್ಟಂತೆ ಹೈದರಾಬಾದ್ ಪೊಲೀಸರು ಬಂಧಿಸಿದ್ದಾರೆ.
ಸಮಾಜದಲ್ಲಿ ಇಲ್ಲ ಸಲ್ಲದ ವದಂತಿಗಳನ್ನು ಹಬ್ಬಿಸಿ, ನೆಮ್ಮದಿಯ ನೆಲದಲ್ಲಿ ಮತೀಯ ವಿಷ ಬೀಜವನ್ನು ಸಾಮಾಜಿಕ ಜಾಲತಣದ ಮೂಲಕ ಹಬ್ಬಿಸುವವರ ಬಗ್ಗೆ ನಿಗಾ ಇಡಿ ಹಾಗೂ ಅವರನ್ನು ನಂಬಬೇಡಿ ಎಂದು ತೆಲಂಗಾಣ ಪೊಲೀಸರು ಈ ಹಿಂದೆ ಒಮ್ಮೆ ಸಂದೇಶ ನೀಡಿದರು. ಆದರೆ ಇದೀಗ ರಾಜ್ಯ ಇಂತಹ ಒಂದು ಘಟನೆಗೆ ಸಾಕ್ಷಿಯಾಗಿದ್ದು, ಅಂತವರ ವಿರುದ್ದ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಎಚ್ಚರಿಕೆ ಘಂಟೆ ಬಾರಿಸಿದೆ.
ಈ ಬಗ್ಗೆ ಹೈದರಾಬಾದ್ನ ಪೊಲೀಸ್ ಕಮೀಷನರ್ ಅಂಜನಿ ಕುಮಾರ್ ಸ್ಪಷ್ಟನೆ ನೀಡಿದ್ದು, ಸಾಮಾಜಿಕ ಜಾಲತಾಣದ ಮೂಲಕ ಸಮಾಜದ ಸ್ವಾಸ್ಥ್ಯ ಹಾಳು ಮಾಡುವವರು ಯಾರಾದರೂ ಸರಿಯೇ ಅಂತವರ ವಿರುದ್ದ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು ಎಂದಿದ್ದಾರೆ.
ಸದ್ಯ ಒಬ್ಬ ಆರೋಪಿಯನ್ನು ಬಂಜಾರ ಹಿಲ್ಸ… ವ್ಯಾಪ್ತಿಯಲ್ಲಿರುವ ಠಾಣೆಯಲ್ಲಿ ಬಂಧಿಸಿ ಆತನ ವಿರುದ್ದ ಐಪಿಸಿ ಸೆಕ್ಷನ್ ಹಾಗೂ ಐಟಿ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದಿದ್ದಾರೆ.
ಪೊಲೀಸ್ ಇಲಾಖೆ ವತಿಯಿಂದ ಸಾಮಾಜಿಕ ಜಾಲತಾಣದ ಗ್ರೂಪ್ ಅಡ್ಮಿನ್ಗಳಿಗೆ ಎಚ್ಚರಿಕೆ ನೀಡಲಾಗಿದ್ದು, ಗುಂಪಿನಲ್ಲಿ ಬರುವ ಸಂದೇಶಗಳು ಯಾವುದೇ ಕೋಮಿನ ಹಿಂಸಾಚಾರಕ್ಕೆ ಕಾರಣವಾಗಬಾರದು ಎಂದು ಸೂಚನೆ ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!
Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್ ಮಧ್ವರಾಜ್
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ