ಎತ್ತಿನಗಾಡಿಗೆ ಟ್ರಕ್ ಢಿಕ್ಕಿ: ರೈತ ಸಾವು, ಮೂವರಿಗೆ ಗಂಭೀರ ಗಾಯ
Team Udayavani, Apr 4, 2018, 12:14 PM IST
ಮುಜಫರನಗರ : ದಿಲ್ಲಿ – ಡೆಹರಾಡೂನ್ ಹೆದ್ದಾರಿಯಲ್ಲಿ ಇಂದು ಬುಧವಾರ ನಸುಕಿನ ವೇಳೆ ಟ್ರಕ್ ಒಂದು ಎತ್ತಿನ ಗಾಡಿಗೆ ಢಿಕ್ಕಿ ಹೊಡೆದ ಭೀಕರ ಅಪಘಾತದಲ್ಲಿ 32ರ ಹರೆಯದ ಓರ್ವ ರೈತ ಮೃತಪಟ್ಟು ಇತರ ಮೂವರು ಗಂಭೀರವಾಗಿ ಗಾಯಗೊಂಡರೆಂದು ಪೊಲೀಸರು ತಿಳಿಸಿದ್ದಾರೆ.
ಉತ್ತರ ಪ್ರದೇಶದ ನವ್ಲಾ ಗ್ರಾಮದಲ್ಲಿನ ಸಕ್ಕರೆ ಕಾರ್ಖಾನೆಯಲ್ಲಿ ತಮ್ಮ ಕೃಷಿ ಉತ್ಪನ್ನಗಳನ್ನು ಇಳಿಸಿ ನಾಲ್ಕು ಎತ್ತಿನ ಗಾಡಿಗಳಲ್ಲಿ ರೈತರು ಮರಳುತ್ತಿದ್ದಾಗ ಈ ದುರಂತ ಸಂಭವಿಸಿತು.
ಮೃತ ರೈತನನ್ನು ಇಕ್ರಾಂ ಎಂದು ಗುರುತಿಸಲಾಗಿದೆ. ಪೊಲೀಸರು ಟ್ರಕ್ ಚಾಲಕನನ್ನು ಶೋಧಿಸುತ್ತಿದ್ದಾರೆ.
ಘಟನೆಯನ್ನು ಅನುಸರಿಸಿ ರೈತರು ಕೆಲ ಕಾಲ ರಾಷ್ಟ್ರೀಯ ಹೆದ್ದಾರಿಯನ್ನು ತಡೆದು ಪ್ರತಿಭಟನೆ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್