ಮಣಿಪುರಕ್ಕೆ ಪಿಎಂ ನೀರಿನ ಕೊಡುಗೆ; ಮಹಿಳೆಯರಿಗೆ ರಕ್ಷಾ ಬಂಧನದ ಕೊಡುಗೆ: ಮೋದಿ ಬಣ್ಣನೆ
ಸ್ಥಳೀಯ ಜನರ ನೆರವಿನಿಂದ, ಪಂಚಾಯತ್ ನೆರವಿನಿಂದ ಯೋಜನೆ ವಿನ್ಯಾಸ
Team Udayavani, Jul 24, 2020, 6:39 AM IST
ವೀಡಿಯೋ ಕಾನ್ಫರೆನ್ಸ್ ಮೂಲಕ ಯೋಜನೆ ಉದ್ಘಾಟಿಸಿದ ಪ್ರಧಾನಿ ಮೋದಿ.
ಹೊಸದಿಲ್ಲಿ: ಗ್ರೇಟರ್ ಇಂಫಾಲ್ ಮತ್ತು ಮಣಿಪುರದ 1700 ಗ್ರಾಮಗಳಿಗೆ ಶುದ್ಧ ಕುಡಿಯುವ ನೀರು ಪೂರೈಸುವ ಬೃಹತ್ ಯೋಜನೆಗೆ ಚಾಲನೆ ನೀಡಿದ ಪ್ರಧಾನಿ ನರೇಂದ್ರ ಮೋದಿ, ಇದನ್ನು ಮಣಿಪುರದ ಮಹಿಳೆಯರಿಗೆ ರಕ್ಷಾಬಂಧನ ಉಡುಗೊರೆ ಅಂತಲೇ ಬಣ್ಣಿಸಿದ್ದಾರೆ.
ವೀಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿದರು.
‘ಕುಡಿಯುವ ನೀರಿನ ಯೋಜನೆಯಿಂದ ಒಂದು ಲಕ್ಷ ಕುಟುಂಬಗಳಿಗೆ ಪ್ರಯೋಜನವಾಗಲಿದೆ. ಸ್ಥಳೀಯ ಪಂಚಾಯತ್ಗಳು, ಮಣಿಪುರ ಹಳ್ಳಿಗಳ ಜನರ ಸಹಾಯದಿಂದ ಈ ಯೋಜನೆ ವಿನ್ಯಾಸಗೊಂಡಿದೆ. ಇದು ವಿಕೇಂದ್ರೀಕರಣದ ಉತ್ತಮ ನಿದರ್ಶನ’ ಎಂದು ವ್ಯಾಖ್ಯಾನಿಸಿದ್ದಾರೆ.
ದೇಶ ನಿಲ್ಲಲಿಲ್ಲ!: ಕೋವಿಡ್ 19 ಕಾರಣಕ್ಕಾಗಿ ದೇಶ ನಿಲ್ಲಲಿಲ್ಲ. ಲಾಕ್ಡೌನ್ ಸಮಯದಲ್ಲೂ ಪೈಪ್ಲೈನ್ ಹಾಕುವ ಕೆಲಸ ಮುಂದುವರಿದಿದೆ. ಮಣಿಪುರ ನೀರು ಸರಬರಾಜು ಯೋಜನೆ ಸಾವಿರಾರು ಜನರಿಗೆ ಉದ್ಯೋಗ ನೀಡಿದೆ’ ಎಂದು ವಿವರಿಸಿದ್ದಾರೆ. ‘ಹರ್ ಘರ್ ಜಲ್’ ಪರಿಕಲ್ಪನೆಯಡಿ ಯೋಜನೆ ಕೈಗೆತ್ತಿಕೊಳ್ಳಲಾಗಿದೆ.
ಅವಳಿ ಸವಾಲು: ಈಶಾನ್ಯ ರಾಜ್ಯಗಳು ಅವಳಿ ಸವಾಲುಗಳನ್ನು ಎದುರಿಸುತ್ತಿವೆ. ಒಂದೆಡೆ ಕೋವಿಡ್ 19, ಮತ್ತೂಂದೆಡೆ ಪ್ರವಾಹದಿಂದ ಸಾಕಷ್ಟು ನಷ್ಟ ಸಂಭವಿಸಿದೆ. ಇಂಥ ಸಂಕಷ್ಟದ ಸಮಯದಲ್ಲಿ ನಾವೆಲ್ಲರೂ ನಿಮ್ಮೊಂದಿಗಿದ್ದೇವೆ ಎಂದು ಭರವಸೆ ನೀಡಿದರು.
ಈಶಾನ್ಯವು ಭಾರತದ ಎಂಜಿನ್: ಈಶಾನ್ಯವು ಭಾರತದ ಪ್ರಗತಿಗೆ ಎಂಜಿನ್ ಆಗುವ ಎಲ್ಲ ಸಾಮರ್ಥ್ಯ ಹೊಂದಿದೆ. ಇತ್ತೀಚಿನ ದಿನಗಳಲ್ಲಿ ಈಶಾನ್ಯ ರಾಜ್ಯಗಳಲ್ಲಿ ಶಾಂತಿ ಸ್ಥಾಪನೆಯಾಗುತ್ತಿದೆ. ಬಂಡುಕೋರರ ಬಂಡಾಯಗಳು ಕೊನೆಗೊಳ್ಳುತ್ತಿವೆ ಎಂದು ಮೋದಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ