ಒಂದು ದೇಶ, ಒಂದು ಪಡಿತರ
ದೇಶದ ಯಾವುದೇ ಮೂಲೆಯಲ್ಲೂ ಪಡಿತರ ಸಿಗಬೇಕು ಎಂಬ ಉದ್ದೇಶ
Team Udayavani, Jun 29, 2019, 6:00 AM IST
ನವದೆಹಲಿ: ದೇಶದ ಬಡವರು ಯಾವುದೇ ರಾಜ್ಯಕ್ಕೆ ಹೋಗಲಿ, ಅವರಿಗೆ ಸುಲಭವಾಗಿ ಪಡಿತರ ಸಿಗುವಂಥ ಅನುಕೂಲ ಕಲ್ಪಿಸುವ ಉದ್ದೇಶದಿಂದ ‘ಒಂದು ರಾಷ್ಟ್ರ, ಒಂದು ರೇಷನ್ ಕಾರ್ಡ್’ ಎಂಬ ವಿಶಿಷ್ಟ ಯೋಜನೆಯನ್ನು ಜಾರಿಗೊಳಿಸಲು ಕೇಂದ್ರ ಸರ್ಕಾರ ಉದ್ದೇಶಿಸಿದೆ.
ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ರಾಮ್ ವಿಲಾಸ್ ಪಾಸ್ವಾನ್ ಅವರು ಶುಕ್ರವಾರ ರಾಜ್ಯಸಭೆಗೆ ಈ ಮಾಹಿತಿ ನೀಡಿದ್ದಾರೆ. ಬಡವರು ದೇಶದ ಯಾವುದೇ ಮೂಲೆಗೆ ಹೋದರೂ ಅವರಿಗೆ ಪಡಿತರ ಸಮಸ್ಯೆ ಎದುರಾಗಬಾರದು ಎಂಬ ಮಹತ್ವಾಕಾಂಕ್ಷೆಯಿಂದ ಈ ಯೋಜನೆ ಜಾರಿಗೊಳಿಸಲು ಚಿಂತನೆ ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.
ದೇಶಾದ್ಯಂತ ಆಹಾರ ಸಬ್ಸಿಡಿ ಯೋಜನೆಯನ್ವಯ ರಾಜ್ಯಗಳು ಬೇಡಿಕೆಯ ಪಟ್ಟಿ ಸಲ್ಲಿಸಿದರೆ, ಕೇಂದ್ರ ಸರ್ಕಾರವು ಆಹಾರಧಾನ್ಯಗಳನ್ನು ಪೂರೈಸುತ್ತದೆ. ನಂತರ ಪಡಿತರ ಅಂಗಡಿಗಳ ಮೂಲಕ ಪಡಿತರ ಕಾರ್ಡ್ ಹೊಂದಿರುವವರಿಗೆ ಆಹಾರ ಧಾನ್ಯಗಳನ್ನು ಒದಗಿಸಲಾಗುತ್ತಿದೆ ಎಂದೂ ಅವರು ಹೇಳಿದ್ದಾರೆ.
ಭ್ರಷ್ಟಾಚಾರ ಮುಕ್ತಕ್ಕೆ ಸಹಕಾರಿ: ಈ ಯೋಜನೆಯನ್ನು ಬಡವರಿಗೆ, ಅದರಲ್ಲೂ ಪ್ರಮುಖವಾಗಿ ವಲಸೆ ಕಾರ್ಮಿಕರ ಅನುಕೂಲಕ್ಕಾಗಿ ಮಾಡಲು ಚಿಂತನೆ ನಡೆದಿದೆ. ಅಂದರೆ, ಇವರು ತಾವು ಹೋದ ಕಡೆಯಲ್ಲೆಲ್ಲಾ, ಒಂದೊಂದು ಕಾರ್ಡ್ ಮಾಡಿಸಿಕೊಳ್ಳುತ್ತಾರೆ. ಹೊಸ ಮಾದರಿಯಲ್ಲಿ ವಲಸೆ ಕಾರ್ಮಿಕರು, ತಮ್ಮ ಮೂಲ ಸ್ಥಳದ ಕಾರ್ಡ್ ಅನ್ನೇ ಬಳಸಿ ಪಡಿತರ ಪಡೆದುಕೊಳ್ಳಬಹುದು. ಇದರಿಂದ ನಕಲು ತಪ್ಪಿ, ಭ್ರಷ್ಟಾಚಾರ ಕಡಿಮೆಯಾಗುತ್ತದೆ ಎಂಬ ಚಿಂತನೆ ಇದೆ.
ಜಾರಿ ಹೇಗೆ?: ಐಎಂಪಿಡಿಎಸ್(ಪಡಿತರ ವಿತರಣೆ ಸೇವೆಯ ಸಮಗ್ರ ನಿರ್ವಹಣೆ) ತಂತ್ರಜ್ಞಾನಬಳಸಿಕೊಳ್ಳಲಾಗುತ್ತದೆ. ಈಗಾಗಲೇ ಕರ್ನಾಟಕ ಸೇರಿ ಹಲವಾರು ರಾಜ್ಯಗಳಲ್ಲಿ ಜಾರಿಯಲ್ಲಿದೆ. ಆನ್ಲೈನ್ ಮೂಲಕವೇ ಎಲ್ಲ ಪಡಿತರದಾರರ ಮಾಹಿತಿಯನ್ನು ಇದರಲ್ಲಿ ತುಂಬಲಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ferozepur; ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು
Crime: ಮೊಬೈಲ್ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ
Poonch; ವಾಯುಸೇನೆ ವಾಹನದ ಮೇಲೆ ಉಗ್ರ ದಾಳಿ; ಓರ್ವ ಹುತಾತ್ಮ, ನಾಲ್ವರಿಗೆ ಗಾಯ
Temple; ಎಪ್ರಿಲ್ನಲ್ಲಿ ತಿರುಪತಿ ಹುಂಡಿಗೆ ಬಿದ್ದ ಕಾಣಿಕೆ ಎಷ್ಟು ಗೊತ್ತೇ?
Wife ಜತೆ ಅಸ್ವಾಭಾವಿಕ ಲೈಂಗಿಕಕ್ರಿಯೆಯು ರೇಪ್ ಅಲ್ಲ: ಹೈಕೋರ್ಟ್
MUST WATCH
ಹೊಸ ಸೇರ್ಪಡೆ
Pen Drive ಹಗರಣದ ನಡುವೆ ರಾಜ್ಯದ ಎರಡನೇ ಹಂತದ ಬಹಿರಂಗ ಪ್ರಚಾರ ಅಂತ್ಯ
Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ
Basangouda Patil Yatnal ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ
Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್
Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್