ಸಚಿನ್ ಪೈಲಟ್ ಕುಶಾಗ್ರಮತಿ, ಉತ್ತಮ ವ್ಯಕ್ತಿತ್ವದ ನಾಯಕ: ಶಶಿ ತರೂರ್ ಟ್ವೀಟ್
ಸಚಿನ್ ಪೈಲಟ್ ಅವರನ್ನು ಉಪಮುಖ್ಯಮಂತ್ರಿ ಹಾಗೂ ಪಿಸಿಸಿ ಹುದ್ದೆಯಿಂದ ಹೈಕಮಾಂಡ್ ವಜಾಗೊಳಿಸಿತ್ತು.
Team Udayavani, Jul 15, 2020, 10:04 AM IST
ನವದೆಹಲಿ:ರಾಜಸ್ಥಾನದ ರಾಜಕೀಯ ಬಿಕ್ಕಟ್ಟಿನಿಂದಾಗಿ ಸಚಿನ್ ಪೈಲಟ್ ಅವರಂತಹ ಯುವ ನಾಯಕ ಕಾಂಗ್ರೆಸ್ ಪಕ್ಷದಿಂದ ಹೊರಹೋಗಿರುವುದು ಬೇಸರದ ವಿಚಾರವಾಗಿದೆ. ಅವರೊಬ್ಬ ಉತ್ತಮ ಹಾಗೂ ಕುಶಾಗ್ರಮತಿ ವ್ಯಕ್ತಿತ್ವ ಹೊಂದಿರುವ ರಾಜಕೀಯ ಪಟು ಎಂದು ನಾನು ಪರಿಗಣಿಸುತ್ತೇನೆ ಎಂಬುದಾಗಿ ಸಂಸದ ಶಶಿ ತರೂರ್ ಟ್ವೀಟ್ ಮೂಲಕ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ರಾಜಸ್ಥಾನ್ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮತ್ತು ಸಚಿನ್ ಪೈಲಟ್ ನಡುವಿನ ರಾಜಕೀಯ ಜಿದ್ದಾಜಿದ್ದಿ ತಾರಕಕ್ಕೇರಿದ್ದ ಹಿನ್ನೆಲೆಯಲ್ಲಿ ಬಿಕ್ಕಟ್ಟು ಸೃಷ್ಟಿಯಾಗಿತ್ತು. ಏತನ್ಮಧ್ಯೆ ಸಚಿನ್ ಪೈಲಟ್ ಅವರನ್ನು ಉಪಮುಖ್ಯಮಂತ್ರಿ ಹಾಗೂ ಪಿಸಿಸಿ ಹುದ್ದೆಯಿಂದ ಹೈಕಮಾಂಡ್ ವಜಾಗೊಳಿಸಿತ್ತು.
ಪೈಲಟ್ ಕುರಿತು ಟ್ವೀಟ್ ಮಾಡಿರುವ ತರೂರ್ “ಪೈಲಟ್ ಕಾಂಗ್ರೆಸ್ ನಿಂದ ಹೊರಹೋಗಿರುವುದು ಬೇಸರದ ಸಂಗತಿ. ಅವರೊಬ್ಬ ಉತ್ತಮ ಹಾಗೂ ಕುಶಾಗ್ರಮತಿ ನಾಯಕರಾಗಿದ್ದರು. ಇಂತಹ ನಿರ್ಧಾರ ಕೈಗೊಳ್ಳುವ ಮುನ್ನ ಅವರು ಈ ಪಕ್ಷವನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಬಲಪಡಿಸಲು ನಮ್ಮೊಂದಿಗೆ ಕೈಜೋಡಿಸಬೇಕಾಗಿತ್ತು ” ಎಂದು ತಿಳಿಸಿದ್ದಾರೆ.
I am sad to see @SachinPilot leave @INCIndia. I consider him one of our best & brightest, and wish it had not come to this. Instead of parting, he should have joined the effort to make the Party a better& more effective instrument for his, and our, dreams.
— Shashi Tharoor (@ShashiTharoor) July 14, 2020
ಇದನ್ನೂ ಓದಿ: ನಾನು ಚುನಾವಣೆ ಗೆಲ್ಲಿಸಿಕೊಟ್ಟೆ, ಗೆಹ್ಲೋಟ್ ಸಿಎಂ ಆದರು! ಬೇಜಾರಿದೆ ಆದರೆ ಬಿಜೆಪಿ ಸೇರಲ್ಲ
ಶಾಸಕಾಂಗ ಪಕ್ಷದ ಎರಡು ಸಭೆಗೆ ಸಚಿನ್ ಪೈಲಟ್ ಗೈರು ಹಾಜರಾಗಿದ್ದರಿಂದ ಅವರನ್ನು ಡಿಸಿಎಂ ಮತ್ತು ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸುವ ನಿರ್ಧಾರ ತೆಗೆದುಕೊಳ್ಳಲಾಗಿತ್ತು ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ