3ರ ಪೈಕಿ ಒಂದು ಪ್ರೆಗ್ನೆನ್ಸಿ ಗರ್ಭಪಾತದಲ್ಲಿ ಕೊನೆ
Team Udayavani, Dec 13, 2017, 6:20 AM IST
ನವದೆಹಲಿ: ಗರ್ಭಿಣಿಯರ ಆರೋಗ್ಯದ ಬಗ್ಗೆ ಯಾವ ಯೋಜನೆ ಜಾರಿಗೊಳಿಸಿದರೂ ಸಮರ್ಪಕವಾಗಿ ಜಾರಿಯಾಗುತ್ತಿಲ್ಲ ಎನ್ನುವುದು ಮತ್ತೂಮ್ಮೆ ಸಾಬೀತಾಗಿದೆ. ದೇಶದಲ್ಲಿ 4.81 ಕೋಟಿ ಗರ್ಭಿಣಿಯರಿದ್ದರೆ, ಅವರಲ್ಲಿ ಮೂರರ ಪೈಕಿ ಒಂದು ಪ್ರಕರಣ ಗರ್ಭಪಾತದಲ್ಲಿ ಕೊನೆಯಾಗುತ್ತದೆ ಎಂಬ ಆಘಾತಕಾರಿ ಅಂಶವು “ದ ಲಾನ್ಸೆಟ್’ ಎಂಬ ವೈದ್ಯಕೀಯ ನಿಯತಕಾಲಿಕ ನಡೆಸಿದ ಅಧ್ಯಯನದಲ್ಲಿ ಸಾಬೀತಾಗಿದೆ.
2015ನೇ ವರ್ಷಕ್ಕೆ ಸಂಬಂಧಿಸಿ ಈ ಅಧ್ಯಯನ ನಡೆದಿದೆ. ಇದೇ ಮೊದಲ ಬಾರಿಗೆ ಗರ್ಭಿಣಿಯರ ಆರೋಗ್ಯದ ಬಗ್ಗೆ ದೊಡ್ಡ ಪ್ರಮಾಣದಲ್ಲಿ ನಡೆಸಲಾಗಿರುವ ಅಧ್ಯಯನ ಇದಾಗಿದೆ. 15-49 ವಯೋಮಿತಿಯ ಪ್ರತಿ 1 ಸಾವಿರ ಮಹಿಳೆಯರಿಗೆ 47 ಮಂದಿ ಗರ್ಭಪಾತಕ್ಕೆ ಒಳಗಾಗುತ್ತಾರೆ. ಇದು ಪಾಕಿಸ್ತಾನಕ್ಕೆ ಹೋಲಿಕೆ ಮಾಡಿದರೆ ಕಡಿಮೆ ಮತ್ತು ನೇಪಾಳ ಮತ್ತು ಬಾಂಗ್ಲಾಗೆ ಹೋಲಿಸಿದರೆ ಹೆಚ್ಚು.
2015ರಲ್ಲಿ 1.56 ಕೋಟಿ ಗರ್ಭಪಾತಗಳು ನಡೆದಿವೆ. ಅದರಲ್ಲಿ ಅರ್ಧದಷ್ಟು ಅಂದರೆ ಶೇ.48ರಷ್ಟು ಪ್ರಕರಣಗಳು ಉದ್ದೇಶಪೂರ್ಕವಲ್ಲದ ಗರ್ಭಪಾತವಾಗಿವೆ. 80 ಲಕ್ಷ ಮಹಿಳೆಯರು ಗರ್ಭಪಾತಕ್ಕಾಗಿ ಸುರಕ್ಷಿತವಲ್ಲದ ವಿಧಾನಗಳನ್ನು ಬಳಸಿದ್ದಾರೆ. ಹೀಗಾಗಿ, ಅವರ ಆರೋಗ್ಯದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ ಎಂದು ಅಧ್ಯಯನ ಹೇಳಿದೆ.
ಈ ಬಗ್ಗೆ ಮಾತನಾಡಿರುವ ಅಧ್ಯಯನದ ಸಹ ಸಂಯೋಜಕ ಚಂದ್ರಶೇಖರ್, 2015ರಲ್ಲಿ ಸರ್ಕಾರದ ಗಮನಕ್ಕೆ ಬಂದಿರುವ ಪ್ರಕರಣಗಳಿಗಿಂತ ಐದು ಪಟ್ಟು ಹೆಚ್ಚು ಕೇಸುಗಳು ನಮಗೆ ಸಿಕ್ಕಿವೆ ಎಂದಿದ್ದಾರೆ. ಸರ್ಕಾರಿ ಆಸ್ಪತ್ರೆಗಳಲ್ಲಿ ನುರಿತ ವೈದ್ಯರು ಮತ್ತು ದಾದಿಯರು, ವ್ಯವಸ್ಥೆಗಳನ್ನು ಒದಗಿಸಿದರೆ ಗರ್ಭಪಾತ ತಡೆಯಬಹುದು ಎಂದು ಚಂದ್ರಶೇಖರ್ ಹೇಳಿದ್ದಾರೆ. ಗರ್ಭಪಾತ ವಿರೋಧಿ ಕಾನೂನು ದೇಶದಲ್ಲಿ ಕಠಿಣವಾಗಿದ್ದು, 20 ವಾರಗಳಿಗಿಂತ ಮೇಲ್ಪಟ್ಟ ಗರ್ಭವನ್ನು ಮಾತ್ರ ಅದೂ ತಾಯಿಯ ಜೀವಕ್ಕೆ ತೊಂದರೆಯಾಗಲಿದೆ ಎಂದು ದೃಢಪಟ್ಟರೆ ಮಾತ್ರ ತೆಗೆಯುವ ಅವಕಾಶ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ