ಸಾವರ್ಕರ್ ಹೆಸರನ್ನು ಹೊಂದಬೇಕಾದರೆ “ಅವರು ಧೈರ್ಯಶಾಲಿಯಾಗಿರಬೇಕು”: ಚೌಹಾಣ್
Team Udayavani, Dec 15, 2019, 8:15 AM IST
ನವದೆಹಲಿ: ರಾಹುಲ್ ಗಾಂಧಿ ತನ್ನ ಹೆಸರಿನ ಜೊತೆಗೆ ಸಾವರ್ಕರ್ ಹೆಸರು ಸೇರಿಸಿಕೊಳ್ಳಬೇಕಾದರೆ “ವೀರ್ ಸಾವರ್ಕರ್ ಅವರಂತೆಯೇ ಧೈರ್ಯಶಾಲಿಯಾಗಿರಬೇಕೆಂದು” ಬಿಜೆಪಿ ಮುಖಂಡ, ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ವ್ಯಂಗ್ಯವಾಡಿದ್ದಾರೆ.
ರೇಪ್ ಇನ್ ಇಂಡಿಯಾ ವಿವಾದಾತ್ಮಕ ಹೇಳಿಕೆ ನೀಡಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಕ್ಷಮೆಯಾಚಿಸುವಂತೆ ಬಿಜೆಪಿ ಆಗ್ರಹಿಸಿತ್ತು. ಇದನ್ನು ತಳ್ಳಿ ಹಾಕಿದ್ದ ರಾಹುಲ್ ಗಾಂಧಿ ದೆಹಲಿಯಲ್ಲಿ ನಡೆದ ಭಾರತ್ ಬಚಾವೋ ರ್ಯಾಲಿಯಲ್ಲಿ ಕ್ಷಮೆ ಕೇಳಲು ನಾನು ರಾಹುಲ್ ಸಾವರ್ಕರ್ ಅಲ್ಲ, ರಾಹುಲ್ ಗಾಂಧಿ. ನಾನು ಸತ್ಯ ಹೇಳಿದ್ದು ಕ್ಷಮೆಯಾಚಿಸುವುದಿಲ್ಲ ಎಂದು ಹೇಳಿದ್ದರು.
ಇದಕ್ಕೆ ಟ್ವಿಟ್ಟರ್ ನಲ್ಲಿ ಕಿಡಿಕಾರಿದ ಶಿವರಾಜ್ ಸಿಂಗ್ ಚೌಹಾಣ್ ಮೊದಲು ಧೈರ್ಯಶಾಲಿಯಾಗಿ, ನಂತರ ವೀರ್ ಸಾವರ್ಕರ್ ಹೆಸರು ಸೇರಿಸಿಕೊಳ್ಳಿ ಎಂದಿದ್ದಾರೆ.
ಹಲವು ಬಿಜೆಪಿ ನಾಯಕರು ಕೂಡ ರಾಹುಲ್ ಗಾಂಧಿ ಹೇಳಿಕೆಗೆ ತಿರುಗೇಟು ನೀಡಿದ್ದು ಇದು ಸಾರ್ವಕರ್ ಅವರ ದೇಶಪ್ರೇಮಕ್ಕೆ ಮಸಿ ಬಳಿಯುವ ಪ್ರಯತ್ನ ನಡೆಯುತ್ತಿದೆ. “ರಾಹುಲ್ ಹೆಸರಿನ ಜೊತೆಗೆ ಸಾವರ್ಕರ್ ಹೆಸರು ಸೂಕ್ತವಾಗಿಲ್ಲ. ಯಾವಾಗಲೂ ಮುಸ್ಲಿಮರ ಪರವಾಗಿಯೇ ಮಾತನಾಡು ವುದರಿಂದ ಅವರಿಗೆ “ರಾಹುಲ್ ಜಿನ್ನಾ’ ಎನ್ನುವುದೇ ಹೆಚ್ಚು ಸೂಕ್ತ ಎಂಧು ಬಿಜೆಪಿ ವಕ್ತಾರ ಜಿ.ವಿ.ಎಲ್. ನರಸಿಂಹ ರಾವ್ ತಿಳಿಸಿದ್ದಾರೆ.
ಬಿಜೆಪಿಯ ಮತ್ತೊಬ್ಬ ವಕ್ತಾರ ಸಂಬಿತ್ ಪಾತ್ರಾ “”ರಾಹುಲ್ ಎಂದಿಗೂ ಸಾವರ್ಕರ್ ಆಗಲು ಸಾಧ್ಯವಿಲ್ಲ” ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
MUST WATCH
ಹೊಸ ಸೇರ್ಪಡೆ
Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ