ಸ್ತನ ಕ್ಯಾನ್ಸರ್ ಬಗ್ಗೆ ಮುಜುಗರ ಬೇಡ: ಮಹಿಳೆಯರಿಗೆ ಅಮಿತಾಭ್ ಧೈರ್ಯ
Team Udayavani, Mar 16, 2017, 12:21 PM IST
ಮುಂಬಯಿ : ಸ್ತನ ಕ್ಯಾನ್ಸರ್ ಪೀಡಿತ ಮಹಿಳೆಯರು ತಮ್ಮ ವ್ಯಾದಿಯ ಬಗ್ಗೆ ಯಾವುದೇ ಮುಜುಗರಪಟ್ಟು ಕೊಳ್ಳಬಾರದು ಮತ್ತು ಕೀಳರಿಮೆಯನ್ನು ಬೆಳೆಸಿಕೊಳ್ಳಬಾರದು; ಇತರ ಯಾವುದೇ ಬಗೆಯ ಅನಾರೋಗ್ಯಕ್ಕೆ ಚಿಕಿತ್ಸೆ ಪಡೆಯುವ ಹಾಗೆ ಸ್ತನ ಕ್ಯಾನ್ಸರ್ಗೂ ಸ್ವಸ್ಥ ಮನೋಭಾವದಿಂದ ಮಹಿಳೆಯರು ಸಕಾಲದಲ್ಲಿ ಚಿಕಿತ್ಸೆ ಪಡೆದುಕೊಳ್ಳಬೇಕು ಎಂದು 74ರ ಹರೆಯದ ಬಾಲಿವುಡ್ ಬಿಗ್ ಬಿ ಅಮಿತಾಭ್ ಬಚ್ಚನ್ ಮಹಿಳೆಯರಲ್ಲಿ ಧೈರ್ಯ ತುಂಬಿದ್ದಾರೆ.
“ಎಬಿಸಿ ಆಫ್ ಬ್ರೆಸ್ಟ್ ಕ್ಯಾನ್ಸರ್’ ಎಂಬ ಮೊಬೈಲ್ ಆ್ಯಪ್ಲಿಕೇಶನ್ ಬಿಡುಗಡೆ ಮಾಡಿ ಮಾತನಾಡುತ್ತಿದ್ದ ಅವರು “ಸ್ತನ ಕ್ಯಾನ್ಸರ್ನಂತಹ ವ್ಯಾದಿಗಳು ಸಮಾಜದಲ್ಲಿ ಕೆಲವೊಮ್ಮೆ ಸೂಕ್ಷ್ಮ ಸಂವೇದನೆಯ ವಿಷಯವಾಗಬಹುದು; ಹಾಗಾಗಿ ಮಹಿಳೆಯರು ಆ ಬಗ್ಗೆ ಮುಜುಗರ ಪಟ್ಟುಕೊಂಡು ಕೀಳರಿಮೆಯನ್ನು ಬೆಳೆಸಿಕೊಳ್ಳುತ್ತಾರೆ; ಇದರಿಂದಾಗಿ ಅವರಲ್ಲಿನ ಆತ್ಮವಿಶ್ವಾಸ ಕುಗ್ಗುತ್ತದೆ; ಹೀಗಾಗದಂತೆ ಮಹಿಳೆಯರು ಧೈರ್ಯದಿಂದ ಇರಬೇಕು’ ಎಂದು ಹೇಳಿದರು.
“ಎಬಿಸಿ ಆಫ್ ಬ್ರೆಸ್ಟ್ ಕ್ಯಾನ್ಸರ್’ ಮೊಬೈಲ್ ಆ್ಯಪ್ಲಿಕೇಶನ್ ಈ ರೋಗದ ಬಗೆಗಿನ ಮಾಹಿತಿಗಳನ್ನು ಆಮೂಲಾಗ್ರವಾಗಿ ಒದಗಿಸುತ್ತದೆ.
ಅಮಿತಾಭ್ ಈ ಹಿಂದೆಯೂ ಟಿಬಿ, ಪೋಲಿಯೋ ವಿರುದ್ಧದ ಅಭಿಯಾನದಲ್ಲೂ ತಮ್ಮನ್ನು ತೊಡಗಿಸಿಕೊಂಡಿದ್ದರು .
ಕ್ಯಾನ್ಸರ್ ನಂತಹ ರೋಗಗಳ ಬಗ್ಗೆ ಪೀಡಿತರು ಪೂರ್ಣ ಮಾಹಿತಿ ಹೊಂದಿರುವುದು ಅಗತ್ಯ. ತಾವು ವೈದ್ಯರನ್ನು ಕಾಣಬೇಕಾದ ಅಗತ್ಯವಿಲ್ಲ ತಮಗೆ ವೈದ್ಯರ ಸಮಾಲೋಚನೆ ಬೇಕಾಗಿಲ್ಲ ಎಂದು ಹಲವರು ಭಾವಿಸುತ್ತಾರೆ. ಆದರೆ ಸಕಾಲದಲ್ಲಿ ವೈದ್ಯಕೀಯ ನೆರವು ಪಡೆದುಕೊಂಡರೆ ಎಷ್ಟೋ ವ್ಯಾದಿಗಳನ್ನು ಆರಂಭಿಕ ಹಂತದಲ್ಲೇ ಗುಣಪಡಿಸಲು ಸಾಧ್ಯವಿದೆ ಎಂದು ಅಮಿತಾಭ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
Loksabha election; ಕಾಂಗ್ರೆಸ್ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ
Lok Sabha Election; ಕೇಜ್ರಿವಾಲ್ ಸೆರೆ ಆಪ್ಗೆ ವರವೇ? ಶಾಪವೇ?
Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್ ಗೆ ಸುಪ್ರೀಂ
MUST WATCH
ಹೊಸ ಸೇರ್ಪಡೆ
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Dakshina Kannada; ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ