Lockdown ಗೆ ಡೋಂಟ್ ಕೇರ್! ದೇಶದಲ್ಲಿ ಕೇವಲ 27% ಮಂದಿ ಮಾತ್ರ ಹೋಮ್ ಸ್ಟೇ: ಸಮೀಕ್ಷೆ
ಬರೋಬ್ಬರಿ 22 ಸಾವಿರ ಮಂದಿಯ ಎಕ್ಸ್ ಕ್ಲೂಸಿವ್ ಸಂದರ್ಶನ ನಡೆಸಿ ಮಾಹಿತಿಯನ್ನು ಕಲೆ ಹಾಕಿರುವುದಾಗಿ ವರದಿ ವಿವರಿಸಿದೆ.
Team Udayavani, Mar 24, 2020, 3:08 PM IST
ನವದೆಹಲಿ: ಕೋವಿಡ್ 19 ಮಹಾಮಾರಿ ಜಗತ್ತನ್ನೇ ಬೆಚ್ಚಿ ಬೀಳಿಸಿದೆ. ಅಮೆರಿಕ, ಸ್ಪೇನ್, ಇಟಲಿ, ಇರಾನ್ ದೇಶಗಳು ಕಂಗಾಲಾಗಿವೆ. ಭಾರತದಲ್ಲಿಯೂ ಕೋವಿಡ್ 19 ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇದ್ದು, ಸೋಂಕು ತಡೆಗಾಗಿ ಲಾಕ್ ಡೌನ್ ಜಾರಿಗೊಳಿಸಿದರೂ ಕೂಡಾ ಜನರು ಸ್ವಯಂ ಪ್ರೇರಿತರಾಗಿ ಮುತುವರ್ಜಿ ವಹಿಸದೇ ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂಬುದು ಸಮೀಕ್ಷೆಯಿಂದ ಬಯಲಾಗಿದೆ.
ಭಾರತದಲ್ಲಿ ಕೋವಿಡ್ 19 ಸೋಂಕು ಪೀಡಿತರ ಸಂಖ್ಯೆ 433ಕ್ಕೆ ಏರಿದೆ. ಏತನ್ಮಧ್ಯೆ ಇಂತಹ ತುರ್ತು ಸ್ಥಿತಿಯಲ್ಲಿಯೂ ದೇಶದ ಶೇ.27ರಷ್ಟು ಜನರು ಮಾತ್ರ ಮನೆಯಲ್ಲಿ ಉಳಿದಿದ್ದು, ಶೇ.73ರಷ್ಟು ಜನರು ಯಾವುದೇ ಮುಂಜಾಗ್ರತಾ ಕ್ರಮ ವಹಿಸಿಲ್ಲ ಎಂಬುದು ಸಮೀಕ್ಷೆಯಿಂದ ತಿಳಿದು ಬಂದಿದೆ.
ಐಎಎನ್ ಎಸ್- ಸಿ ವೋಟರ್, ಇಂಟರ್ ನ್ಯಾಷನಲ್ ಅಸೋಸಿಯೇಶನ್ ಕೋವಿಡ್ ಟ್ರ್ಯಾಕರ್ 1 ಜಂಟಿಯಾಗಿ ಜಗತ್ತಿನ 22 ದೇಶಗಳಲ್ಲಿ ಸಮೀಕ್ಷೆಯನ್ನು ನಡೆಸಿದ್ದು, ಬರೋಬ್ಬರಿ 22 ಸಾವಿರ ಮಂದಿಯ ಎಕ್ಸ್ ಕ್ಲೂಸಿವ್ ಸಂದರ್ಶನ ನಡೆಸಿ ಮಾಹಿತಿಯನ್ನು ಕಲೆ ಹಾಕಿರುವುದಾಗಿ ವರದಿ ವಿವರಿಸಿದೆ.
ಜಾಗತಿಕವಾಗಿ ಶೇ.45ರಷ್ಟು ಮಂದಿ ಮಾತ್ರ ಮನೆಯಲ್ಲಿ ಉಳಿದಿದ್ದಾರೆ. ಸಾಮಾಜಿಕ, ಗುಂಪು ಅಂತರವನ್ನು ಕಾಯ್ದುಕೊಳ್ಳುವ ನಿಟ್ಟಿನಲ್ಲಿ ದೇಶದ 75ಕ್ಕೂ ಅಧಿಕ ಜಿಲ್ಲೆಗಳಲ್ಲಿ ರಾಜ್ಯದ ಒಂಬತ್ತು ಸ್ಥಳಗಳಲ್ಲಿ ಲಾಕ್ ಡೌನ್ ಮಾಡುವಂತೆ ಆದೇಶ ನೀಡಲಾಗಿತ್ತು. ಆದರೆ ಮಂಗಳೂರು, ಬೆಂಗಳೂರು ಸೇರಿದಂತೆ ಹಲವು ಕಡೆ ಜನರು ಗುಂಪು, ಗುಂಪಾಗಿ ಓಡಾಡುವುದು, ಖರೀದಿಗೆ ಮುಗಿ ಬೀಳುವುದು ಕಂಡು ಬಂದಿದೆ.
ಕೋವಿಡ್ 19 ಮಹಾಮಾರಿ ಹರಡದಂತೆ ಜನರು ಎಷ್ಟರ ಮಟ್ಟಿಗೆ ಮುಂಜಾಗ್ರತಾ ಕ್ರಮ ವಹಿಸಿದ್ದಾರೆ ಎಂಬ ಬಗ್ಗೆ ದೇಶದ ಪ್ರತಿ ಮಹಿಳೆ ಮತ್ತು ಪುರುಷರಲ್ಲಿ ಕಳೆದ ಎರಡು ವಾರಗಳಲ್ಲಿ ಮುಖಾಮುಖಿ ಹಾಗೂ ಮೊಬೈಲ್, ಅಂತರ್ಜಾಲದ ಮೂಲಕ ಸಂದರ್ಶನ ನಡೆಸಿ ಸಮೀಕ್ಷೆ ನಡೆಸಲಾಗಿತ್ತು ಎಂದು ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
MUST WATCH
ಹೊಸ ಸೇರ್ಪಡೆ
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ