ಭಾರತ ಮಾತ್ರವೇ ನಿಮಗೆ ಬೇಕಾದ್ದನ್ನು ನೀಡಬಲ್ಲುದು: ಮೆಹಬೂಬ ಮುಫ್ತಿ
Team Udayavani, Jan 10, 2018, 7:04 PM IST
ಜಮ್ಮು ಕಾಶ್ಮೀರ : ಜಮ್ಮು ಕಾಶ್ಮೀರ ಮುಖ್ಯಮಂತ್ರಿ ಮೆಹಬೂಬ ಮುಫ್ತಿ ಅವರು ರಾಜ್ಯದ ಜನತೆಗೆ ಒಂದು ಸಂದೇಶ ನೀಡಿದ್ದಾರೆ. ರಾಜ್ಯ ವಿಧಾನ ಸಭೆಯಲ್ಲಿ ಮಾತನಾಡುತ್ತಾ ಅವರು, “ಜಮ್ಮು ಕಾಶ್ಮೀರದ ಜನರಿಗೆ ಏನು ಬೇಕೋ ಅದನ್ನು ಭಾರತ ಮಾತ್ರವೇ ನೀಡಬಲ್ಲುದು; ಹೊರತು ಬೇರೆ ಯಾವ ದೇಶವೂ ಅಲ್ಲ’ ಎಂದು ಹೇಳಿದರು.
“ನಮಗೆ ಜಮ್ಮು ಕಾಶ್ಮೀರದ ಸಂವಿಧಾನದ ಮೇಲೆ, ದೇಶದ ಸಂವಿಧಾನದ ಮೇಲೆ ನಂಬಿಕೆ ಇಲ್ಲವೆಂದಾದರೆ ಬೇರೆ ಯಾವುದರಲ್ಲಿ ನಂಬಿಕೆ ಇರಬಲ್ಲುದು ? ಹಾಗಿರುವಾಗ ನಮಗೆ ಸಿಗುವುದಾದರೂ ಏನು ? ನಮಗೆ ಬೇಕಾದದ್ದು ಬೇರೆ ಎಲ್ಲಿಂದ ಸಿಗಬೇಕು?’ ಎಂದು ಮೆಹಬೂಬ ಮುಫ್ತಿ ಪ್ರಶ್ನಿಸಿದರು.
ಭಾರತದಿಂದಲ್ಲದೆ ಬೇರೆ ಯಾವ ದೇಶದಿಂದಲೂ ನಮಗೆ ಬೇಕಾದದ್ದು ಸಿಗುವುದಿಲ್ಲ ಎಂಬುದನ್ನು ನಾವು ಎಂದೂ ಮರೆಯಬಾರದು ಎಂದು ಮೆಹಬೂಬ ರಾಜ್ಯದ ಜನರಿಗೆ ಹೇಳಿದರು.
ಭಾರತ ಮತ್ತು ಪಾಕಿಸ್ಥಾನದ ನಾಯಕರು ಎಲ್ಲ ಭಿನ್ನಾಭಿಪ್ರಾಯಗಳನ್ನು ಮರೆತು ದ್ವೇಷವನ್ನು ತೊರೆದು ಮತ್ತೆ ಮಿತ್ರರಾಗಬೇಕು; ಸ್ಥಳೀಯ ಕಾಶ್ಮೀರಿಗಳಿಗಾಗಿ ಮತ್ತು ಗಡಿಯಲ್ಲಿನ ಜವಾನರಿಗಾಗಿ ಉಭಯ ದೇಶಗಳು ಮತ್ತೆ ಸ್ನೇಹಿತರಾಗಬೇಕು ಎಂದು ನಾನು ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ಪಾಕ್ ಪ್ರಧಾನಿಯಲ್ಲಿ ಕಳಕಳಿಯಿಂದ ಕೇಳಿಕೊಳ್ಳುತ್ತೇನೆ’ ಎಂದು ಮೆಹಬೂಬ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chandigarh: ಪುತ್ರನ ಬೆನ್ನಲ್ಲೇ ಪುತ್ರಿ ಜತೆಗೆ ಸಾವಿತ್ರಿ ಜಿಂದಾಲ್ ಬಿಜೆಪಿಗೆ
Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!
RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ
Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ
ಬಿಲ್ ಗೇಟ್ಸ್ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ
MUST WATCH
ಹೊಸ ಸೇರ್ಪಡೆ
Chandigarh: ಪುತ್ರನ ಬೆನ್ನಲ್ಲೇ ಪುತ್ರಿ ಜತೆಗೆ ಸಾವಿತ್ರಿ ಜಿಂದಾಲ್ ಬಿಜೆಪಿಗೆ
Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ
Kalaburagi; ಶೋಕಿಗಾಗಿ ನಕಲಿ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು
ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ
Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!