ಈಗ ಲೋಕಸಭೆ ಚುನಾವಣೆ ನಡೆದರೆ ಮೋದಿಗೆ ಭರ್ಜರಿ ಗೆಲುವು
ಇಂಡಿಯಾ ಟಿವಿ ‘ವಾಯ್ಸ್ ಆಫ್ ದಿ ನೇಷನ್’ ಅಭಿಪ್ರಾಯ ಸಂಗ್ರಹ
Team Udayavani, Jul 30, 2022, 9:10 PM IST
ನವದೆಹಲಿ: ಈಗ ಲೋಕಸಭೆ ಚುನಾವಣೆ ನಡೆದರೆ 362 ಲೋಕಸಭಾ ಸ್ಥಾನಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಭರ್ಜರಿ ಗೆಲುವು ದಾಖಲಿಸಬಹುದು ಎಂದು ಇಂಡಿಯಾ ಟಿವಿ ‘ವಾಯ್ಸ್ ಆಫ್ ದಿ ನೇಷನ್’ ಅಭಿಪ್ರಾಯ ಸಂಗ್ರಹದ ಸಮೀಕ್ಷೆಯಲ್ಲಿ ಹೇಳಲಾಗಿದೆ.
‘ದೇಶ್ ಕಿ ಆವಾಜ್’ (ರಾಷ್ಟ್ರದ ಧ್ವನಿ) ಶೀರ್ಷಿಕೆಯ ಸಮೀಕ್ಷೆಯ ಫಲಿತಾಂಶಗಳನ್ನು ಇಂಡಿಯಾ ಟಿವಿ ಸುದ್ದಿ ವಾಹಿನಿಯಲ್ಲಿ ಶುಕ್ರವಾರ ಸಂಜೆಯಿಂದ ಪ್ರಸಾರ ಮಾಡಲಾಗಿದ್ದು, ಸಮೀಕ್ಷೆಯ ಪ್ರಕಾರ, ಈಗ ಸಾರ್ವತ್ರಿಕ ಚುನಾವಣೆಗಳು ನಡೆದರೆ ಕಾಂಗ್ರೆಸ್ ನೇತೃತ್ವದ ಯುಪಿಎ ಕೇವಲ 97 ಲೋಕಸಭಾ ಸ್ಥಾನಗಳನ್ನು ಗೆಲ್ಲುತ್ತದೆ ಎಂದು ಅಂದಾಜಿಸಲಾಗಿದೆ, ಸಣ್ಣ, ಪ್ರಾದೇಶಿಕ ಪಕ್ಷಗಳು ಮತ್ತು ಸ್ವತಂತ್ರರು ಸೇರಿದಂತೆ ಇತರರು 84 ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿದೆ ಎನ್ನಲಾಗಿದೆ.
ಈಗ ಚುನಾವಣೆ ನಡೆದರೆ ಎನ್ಡಿಎ ಶೇಕಡಾ 41, ಯುಪಿಎ ಶೇಕಡಾ 28 ಮತ್ತು ಇತರರು ಶೇಕಡಾ 31 ಮತಗಳನ್ನು ಗಳಿಸಬಹುದು ಎಂದು ಸಮೀಕ್ಷೆ ಹೇಳಿದೆ.
ಸಮೀಕ್ಷೆಯಲ್ಲಿ ನೀಡಲಾದ ರಾಜ್ಯವಾರು ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ಉತ್ತರ ಪ್ರದೇಶದಲ್ಲಿ, 80 ಸ್ಥಾನಗಳಲ್ಲಿ 76 ಸ್ಥಾನಗಳನ್ನು ಗೆಲ್ಲಬಹುದು, ಕಾಂಗ್ರೆಸ್ ಮತ್ತು ಇತರರು ತಲಾ ಎರಡು ಸ್ಥಾನಗಳನ್ನು ಮಾತ್ರ ಗೆಲ್ಲುವ ನಿರೀಕ್ಷೆಯಿದೆ. ಬಿಹಾರದಲ್ಲಿ ಎನ್ಡಿಎ ಒಟ್ಟು 40 ಸ್ಥಾನಗಳಲ್ಲಿ 35 ಮತ್ತು ಯುಪಿಎ ಐದು ಸ್ಥಾನಗಳನ್ನು ಗೆಲ್ಲಬಹುದು. ಕರ್ನಾಟಕದಲ್ಲಿ 28 ಸ್ಥಾನಗಳಲ್ಲಿ ಬಿಜೆಪಿ 23, ಕಾಂಗ್ರೆಸ್ 4 ಜೆಡಿಎಸ್(ಇತರೆ) 1 ಸ್ಥಾನ ಗೆಲ್ಲಬಹುದು ಎಂದು ಸಮೀಕ್ಷೆಯಲ್ಲಿ ಹೇಳಲಾಗಿದೆ.
ಮಹಾರಾಷ್ಟ್ರದಲ್ಲಿ ಒಟ್ಟು 48 ಸ್ಥಾನಗಳಲ್ಲಿ ಎನ್ಡಿಎ 37 ಸ್ಥಾನಗಳನ್ನು ಗೆಲ್ಲಬಹುದು, ಆದರೆ ಬಿಜೆಪಿಯೇತರ ಪ್ರತಿಪಕ್ಷಗಳು ಉಳಿದ 11 ಸ್ಥಾನಗಳನ್ನು ಗೆಲ್ಲಬಹುದು.
ತಮಿಳುನಾಡಿನ ಆಡಳಿತಾರೂಢ ಡಿಎಂಕೆ ನೇತೃತ್ವದ ಯುಪಿಎ ಒಟ್ಟು 39 ಸ್ಥಾನಗಳಲ್ಲಿ 38 ಸ್ಥಾನಗಳನ್ನು ಗೆಲ್ಲಲಿದೆ ಎಂದು ಅಂದಾಜಿಸಲಾಗಿದೆ, ಉಳಿದಿರುವ ಏಕೈಕ ಸ್ಥಾನವನ್ನು ಎನ್ಡಿಎಗೆ ಬಿಟ್ಟುಕೊಡುತ್ತದೆ. ಎಲ್ಡಿಎಫ್ ಆಡಳಿತದ ಕೇರಳದಲ್ಲಿ ಬಿಜೆಪಿಯೇತರ ಪ್ರತಿಪಕ್ಷಗಳು ರಾಜ್ಯದ ಎಲ್ಲಾ 20 ಸ್ಥಾನಗಳನ್ನು ಕ್ಲೀನ್ ಸ್ವೀಪ್ ಮಾಡಬಹುದು ಎನ್ನಲಾಗಿದೆ.
ಟಿಎಂಸಿ ಆಡಳಿತವಿರುವ ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿಯವರ ತೃಣಮೂಲ ಕಾಂಗ್ರೆಸ್ ಒಟ್ಟು 42 ಸ್ಥಾನಗಳಲ್ಲಿ 26 ಸ್ಥಾನಗಳನ್ನು ಗೆಲ್ಲಲಿದೆ ಎಂದು ಅಂದಾಜಿಸಲಾಗಿದೆ, ಎನ್ಡಿಎ 14 ಮತ್ತು ಯುಪಿಎ ಎರಡು ಸ್ಥಾನಗಳನ್ನು ಗೆಲ್ಲಲಿದೆ ಎಂದು ಸಮೀಕ್ಷೆಯಲ್ಲಿ ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ