ಪ್ರತಿಪಕ್ಷಗಳ ಅಸಮಾಧಾನ
Team Udayavani, Feb 28, 2019, 12:30 AM IST
ವೀರ ಯೋಧರು ನಡೆಸಿದ ಬಲಿದಾನವನ್ನು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ರಾಜಕೀಯ ಲಾಭಕ್ಕಾಗಿ ಬಳಕೆ ಮಾಡಿಕೊಳ್ಳುತ್ತಿವೆ ಎಂದು ಕಾಂಗ್ರೆಸ್ ನೇತೃತ್ವದ 21 ರಾಜಕೀಯ ಪಕ್ಷಗಳ ಸಭೆ ಆರೋಪಿಸಿದೆ. ಸಂಸತ್ ಭವನದಲ್ಲಿ ಬುಧವಾರ ನಡೆದ ಸಭೆಯಲ್ಲಿ “ಬಿಜೆಪಿಯ ಕ್ರಮ ಸೇನೆಗೆ ಅಗೌರವ ತೋರುವಂತಿದೆ. ದೇಶದ ಸಾರ್ವಭೌಮತೆ, ಐಕ್ಯತೆ, ಸಮಗ್ರತೆ ಕಾಪಾಡುವ ಬಗ್ಗೆ ಕ್ರಮ ಕೈಗೊಳ್ಳುವಾಗ ಸರ್ಕಾರ ದೇಶವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ರಾಷ್ಟ್ರೀಯ ಭದ್ರತೆಯು ರಾಜಕೀಯ ಮೀರಿದ್ದಾಗಿರಬೇಕು ಎಂದು ಪ್ರತಿಪಾದಿಸಿವೆ. ಸರ್ವಪಕ್ಷಗಳ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸದೇ ಇದ್ದದ್ದೂ ವಿಷಾದಕರ’ ಎಂದು ಹೇಳಲಾಗಿದೆ. ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ ಸೇರಿದಂತೆ ಪ್ರಮುಖರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್