ಅಧಿವೇಶನ: ಮುಂದುವರಿದ ಅನಿಶ್ಚಿತತೆ; ಸರ್ವಪಕ್ಷ ಸಭೆಯೂ ವಿಫ‌ಲ

ಪಟ್ಟುಬಿಡಲೊಪ್ಪದ ಆಡಳಿತ-ಪ್ರತಿಪಕ್ಷಗಳು

Team Udayavani, Mar 22, 2023, 6:45 AM IST

ಅಧಿವೇಶನ: ಮುಂದುವರಿದ ಅನಿಶ್ಚಿತತೆ; ಸರ್ವಪಕ್ಷ ಸಭೆಯೂ ವಿಫ‌ಲ

ನವದೆಹಲಿ: ಸಂಸತ್‌ನ ಬಜೆಟ್‌ ಅಧಿವೇಶನದ ದ್ವಿತೀಯಾರ್ಧವು ಆರಂಭವಾದಾಗಿನಿಂದ ಇಲ್ಲಿಯವರೆಗೂ ಆಡಳಿತ ಹಾಗೂ ಪ್ರತಿಪಕ್ಷಗಳ ಗದ್ದಲದಿಂದಾಗಿ ಕಲಾಪಗಳು ಕೊಚ್ಚಿಹೋಗಿವೆ.

ಮಂಗಳವಾರವೂ ಇದೇ ಸ್ಥಿತಿ ಮುಂದುವರಿದಿದ್ದು, ಉಭಯ ಸದನಗಳೂ ಮುಂದೂಡಲ್ಪಟ್ಟಿವೆ. ಈ ಬೆಳವಣಿಗೆಯು ಅನಿಶ್ಚಿತತೆಯನ್ನು ಸೃಷ್ಟಿಸಿದ್ದು, ಇಡೀ ಬಜೆಟ್‌ ಅಧಿವೇಶನವೇ ವ್ಯರ್ಥವಾಗಲಿದೆಯೇ ಎಂಬ ಅನುಮಾನ ಮೂಡಿಸಿದೆ.

ಪರಿಸ್ಥಿತಿ ಹೀಗೆಯೇ ಮುಂದುವರಿದರೆ ಹಣಕಾಸು ಮಸೂದೆ ಸೇರಿದಂತೆ ಬಜೆಟ್‌ಗೆ ಅಂಗೀಕಾರ ಪಡೆಯಲು ಸರ್ಕಾರ ಪರ್ಯಾಯ ದಾರಿ ಕಂಡುಕೊಳ್ಳಬೇಕಾಗುತ್ತದೆ ಎಂದು ಮೂಲಗಳು ತಿಳಿಸಿವೆ.

ಏ.6ರಂದು ಅಧಿವೇಶನ ಸಮಾಪ್ತಿಯಾಗಲಿದೆ. ಆದರೆ, ಕಳೆದೊಂದು ವಾರದಿಂದಲೂ, ಒಂದು ಕಡೆ “ಲಂಡನ್‌ನಲ್ಲಿ ಮಾಡಿದ ಭಾಷಣಕ್ಕೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಕ್ಷಮೆ ಕೇಳಬೇಕು’ ಎಂದು ಆಡಳಿತಾರೂಢ ಬಿಜೆಪಿ ಸದಸ್ಯರು ಪ್ರತಿಭಟಿಸುತ್ತಿದ್ದರೆ, ಮತ್ತೂಂದು ಕಡೆ “ಅದಾನಿ ಪ್ರಕರಣವನ್ನು ಜಂಟಿ ಸಂಸದೀಯ ಸಮಿತಿಯ ತನಿಖೆಗೆ ಒಪ್ಪಿಸಬೇಕು’ ಎಂದು ಕಾಂಗ್ರೆಸ್‌ ಪಟ್ಟುಹಿಡಿದಿದೆ. ಎರಡೂ ಕಡೆ ಗದ್ದಲ ಮುಂದುವರಿದಿರುವ ಕಾರಣ ಕಲಾಪಗಳು ಪ್ರತಿ ದಿನವೂ ಮುಂದೂಡಲ್ಪಡುತ್ತಿವೆ.

ಸರ್ವಪಕ್ಷ ಸಭೆಯೂ ವಿಫ‌ಲ:
ಸುಗಮ ಸಂಸತ್‌ ಕಲಾಪಕ್ಕಾಗಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರು ಮಂಗಳವಾರ ಕರೆದಿದ್ದ ಸರ್ವಪಕ್ಷ ಸಭೆಯೂ ವಿಫ‌ಲವಾಗಿದೆ. ಅದಾನಿ ಪ್ರಕರಣವನ್ನು ಜೆಪಿಸಿ ತನಿಖೆಗೆ ಒಪ್ಪಿಸಲೇಬೇಕು ಎಂದು ಪ್ರತಿಪಕ್ಷಗಳು ಪಟ್ಟು ಹಿಡಿದರೆ, ರಾಹುಲ್‌ ಕ್ಷಮೆ ಕೋರಲೇಬೇಕು ಎಂದು ಬಿಜೆಪಿ ಹಠ ಹಿಡಿಯಿತು. ಈ ವಿಚಾರದಲ್ಲಿ ಎರಡೂ ಪಕ್ಷಗಳ ನಡುವೆ ಒಮ್ಮತ ಮೂಡದ ಕಾರಣ, ಸಭೆಯ ಉದ್ದೇಶ ಈಡೇರಲಿಲ್ಲ ಎಂದು ಮೂಲಗಳು ತಿಳಿಸಿವೆ.

ಇನ್ನು, ಮಂಗಳವಾರವೂ ಲೋಕಸಭೆ ಮತ್ತು ರಾಜ್ಯಸಭೆ ಕಲಾಪಗಳು ವ್ಯರ್ಥವಾಗಿದ್ದು, ಬುಧವಾರ ಯುಗಾದಿ ಹಬ್ಬವಿರುವ ಕಾರಣ ಗುರುವಾರಕ್ಕೆ ಮುಂದೂಡಿಕೆಯಾಗಿವೆ.

ಅನುಮತಿ ಕೇಳಿದ ರಾಹುಲ್‌:
ಈ ನಡುವೆ, ಮಂಗಳವಾರವೂ ಲೋಕಸಭೆ ಸ್ಪೀಕರ್‌ಗೆ ಪತ್ರ ಬರೆದಿರುವ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, “ನನ್ನ ವಿರುದ್ಧ ಬಿಜೆಪಿಯ ಹಿರಿಯ ನಾಯಕರು ಸಂಪೂರ್ಣ ಆಧಾರರಹಿತ, ನ್ಯಾಯಸಮ್ಮತವಲ್ಲದ ಆರೋಪಗಳನ್ನು ಮಾಡಿದ್ದು, ಇದಕ್ಕೆ ಪ್ರತಿಕ್ರಿಯೆ ನೀಡಲು ನನಗೆ ಅವಕಾಶ ಕೊಡಿ’ ಎಂದು ಮನವಿ ಮಾಡಿದ್ದಾರೆ.

ರಾಹುಲ್‌ರನ್ನು ಮೀರ್‌ ಜಾಫ‌ರ್‌ಗೆ ಹೋಲಿಕೆ
ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಬಿಜೆಪಿ ಭಾರತೀಯ ರಾಜಕಾರಣದ ಮೀರ್‌ ಜಾಫ‌ರ್‌ಗೆ ಹೋಲಿಸಿದೆ. “ಮೀರ್‌ ಜಾಫ‌ರ್‌ ಭಾರತದಲ್ಲಿ “ನವಾಬ’ನಾಗಲು ವಿದೇಶಿ ಶಕ್ತಿಗಳ ಬೆಂಬಲ ಕೋರಿ ಹೊರದೇಶಕ್ಕೆ ಹೋಗಿದ್ದ. ರಾಹುಲ್‌ ಗಾಂಧಿ ಅವರು ಲಂಡನ್‌ನಲ್ಲಿ ಮಾಡಿದ್ದೂ ಇದನ್ನೇ. ಹೀಗಾಗಿ ಅವರನ್ನು ಈ ಕಾಲ ಮೀರ್‌ ಜಾಫ‌ರ್‌ ಎಂದು ಕರೆಯಬಹುದು’ ಎಂದು ಬಿಜೆಪಿ ವಕ್ತಾರ ಸಂಬಿತ್‌ ಪಾತ್ರಾ ಹೇಳಿದ್ದಾರೆ. ಅಲ್ಲದೇ, ರಾಹುಲ್‌ ಅವರು ವಿದೇಶಿ ನೆಲದಲ್ಲಿ ಭಾರತದ ವಿರುದ್ಧ ಮಾತನಾಡಿದ್ದು ಇದೇ ಮೊದಲಲ್ಲ. ಪ್ರತಿ ಬಾರಿಯೂ ಅವರು ಹೀಗೇ ಮಾಡುತ್ತಾರೆ. ಕಾಂಗ್ರೆಸ್‌ ಪಕ್ಷ ಮತ್ತು ಗಾಂಧಿ ಕುಟುಂಬದ ಸಂಚಿದು. ರಾಹುಲ್‌ ಕ್ಷಮೆ ಕೇಳದೇ ನಾವು ಬಿಡುವುದಿಲ್ಲ ಎಂದೂ ಪಾತ್ರಾ ಆರೋಪಿಸಿದ್ದಾರೆ.

ಪ್ರತಿಪಕ್ಷ ಸದಸ್ಯರ ಪ್ರತಿಭಟನೆ
ಹಲವು ಪ್ರತಿಪಕ್ಷಗಳ ಸದಸ್ಯರು ಮಂಗಳವಾರವೂ ಸಂಸತ್‌ಭವನದ ಕಾರಿಡಾರ್‌ನಲ್ಲಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. “ವೀ ವಾಂಟ್‌ ಜೆಪಿಸಿ’ ಎಂಬ ಫ‌ಲಕಗಳನ್ನು ಹಿಡಿದು, ಅದಾನಿ ಪ್ರಕರಣವನ್ನು ಜೆಪಿಸಿ ತನಿಖೆಗೆ ಒಪ್ಪಿಸಲೇಬೇಕು ಎಂದು ಘೋಷಣೆಗಳನ್ನು ಕೂಗಿದ್ದಾರೆ. ಟಿಎಂಸಿ ಸದಸ್ಯರು ಪ್ರತ್ಯೇಕವಾಗಿ ಸಂಸತ್‌ ಭವನದ ಮುಂದೆ ಪ್ರತಿಭಟಿಸಿ, “ಅದಾನಿ ಪ್ರಕರಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಮೌನ ಮುರಿಯಬೇಕು’ ಎಂದು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

17

ಕೋರ್ಟ್‌ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೆಟಿಯಾದ ಜಗದೀಶ್ ಶೆಟ್ಟರ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.