ರಾಜ್ಯಸಭೆ ಎಲೆಕ್ಷನ್‌ಗೆ ‘ನೋಟಾ’ ಬೇಡವೆಂದು ‘ಕೈ’ ಹಠ


Team Udayavani, Aug 2, 2017, 8:45 AM IST

Congress-Party-Logo-650.jpg

ಹೊಸದಿಲ್ಲಿ: ಗುಜರಾತ್‌ನಲ್ಲಿ ಕಾಂಗ್ರೆಸ್‌ ನಾಯಕ, ಸೋನಿಯಾ ಅವರ ಆಪ್ತ ಅಹ್ಮದ್‌ ಪಟೇಲ್‌ರನ್ನು ರಾಜ್ಯಸಭೆಗೆ ಮರು ಆಯ್ಕೆ ಮಾಡುವ ವಿಚಾರದಲ್ಲಿ ರಾಜಕೀಯ ಪಕ್ಷಗಳ ನಡುವೆ ಭಾರೀ ‘ಹಣಾ’ಹಣಿ ನಡೆಯುತ್ತಿರುವ ನಡುವೆಯೇ ಈ ಬಾರಿಯ ರಾಜ್ಯಸಭೆ ಚುನಾವಣೆಗೆ ‘ನೋಟಾ'(ವಿದ್ಯುನ್ಮಾನ ಮತಯಂತ್ರದಲ್ಲಿ ‘ಮೇಲಿನ ಯಾರೂ ಅಲ್ಲ’ ಎಂಬ ಗುಂಡಿ) ಆಯ್ಕೆಗೆ ಅವಕಾಶ ನೀಡುವ ಮೂಲಕ ಚುನಾವಣಾ ಆಯೋಗ ಪ್ರತಿಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿದೆ.

ಗುಜರಾತ್‌ ರಾಜ್ಯಸಭೆ ಚುನಾವಣೆಯನ್ನು ಕಾಂಗ್ರೆಸ್‌ ಮತ್ತು ಬಿಜೆಪಿ ಪ್ರತಿಷ್ಠೆಯ ವಿಚಾರವಾಗಿ ಎತ್ತಿಕೊಂಡಿರುವಾಗಲೇ ಚುನಾವಣಾ ಆಯೋಗವು ನೋಟಾ ಆಯ್ಕೆಗೆ ಅವಕಾಶ ಕಲ್ಪಿಸಿದೆ. ಇದರಿಂದ ಕೆಂಡಾಮಂಡಲವಾಗಿರುವ ಕಾಂಗ್ರೆಸ್‌ ಮಂಗಳವಾರ ಆಯೋಗವನ್ನು ಭೇಟಿಯಾಗಿ ಆಕ್ಷೇಪವೆತ್ತಿದೆ. ಆ.8ರ ಚುನಾವಣೆಯಿಂದ ನೋಟಾ ಆಯ್ಕೆ ರದ್ದು ಮಾಡಬೇಕು. ಈ ಆಯ್ಕೆಗೆ ಅವಕಾಶ ನೀಡುವುದು ಸಂವಿಧಾನ ಮತ್ತು ಚುನಾವಣಾ ಕಾನೂನಿನ ಉಲ್ಲಂಘನೆಯಾಗುತ್ತದೆ ಎಂದು ಕಾಂಗ್ರೆಸ್‌ ನಾಯಕರಾದ ಆನಂದ್‌ ಶರ್ಮ ಮತ್ತು ಮನೀಶ್‌  ತಿವಾರಿ ಹೇಳಿದ್ದಾರೆ. ಆದರೆ, ಇದಕ್ಕೆ ಒಪ್ಪದ ಆಯೋಗ, ‘ಇದೇನೂ ಹೊಸ ನಿರ್ದೇಶನವಲ್ಲ. ಇದನ್ನು 2014ರಲ್ಲೇ ಜಾರಿಗೆ ತರಲಾಗಿದೆ’ ಎಂದು ಸಮರ್ಥಿಸಿಕೊಂಡಿದೆ.

ಇದಕ್ಕೂ ಮುನ್ನ, ರಾಜ್ಯಸಭೆಯ ಕಲಾಪದ ವೇಳೆಯೂ ವಿಪಕ್ಷಗಳು ಈ ಕುರಿತು ಆಕ್ರೋಶ ವ್ಯಕ್ತಪಡಿಸಿದವು. ಈ ಬಗ್ಗೆ ಪ್ರತಿಕ್ರಿಯಿಸಿರುವ ಅಹ್ಮದ್‌ ಪಟೇಲ್‌ ಅವರು, ‘ಮೊದಲು ರಾಜ್ಯಸಭೆ ಚುನಾವಣೆ ಮುಂದೂಡಲಾಯಿತು. ಅನಂತರ, ಅಧಿಸೂಚನೆ ಹೊರಡಿಸಿದ ಬಳಿಕ ನೋಟಾ ಆಯ್ಕೆಗೆ ಅನುಮತಿ ನೀಡಲಾಯಿತು. ಇದಕ್ಕೆ ಕಾರಣವೇನೆಂದು ಚುನಾವಣಾ ಆಯೋಗಕ್ಕೆ ಚೆನ್ನಾಗಿ ಗೊತ್ತು’ ಎಂದು ಟ್ವೀಟಿಸಿದ್ದಾರೆ.

ಟಾಪ್ ನ್ಯೂಸ್

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.