ಹೈಕೋರ್ಟ್ಗಳಲ್ಲಿ ವಾಣಿಜ್ಯ ವಿಶೇಷ ಪೀಠಕ್ಕೆ ಆಕ್ಷೇಪ
Team Udayavani, Aug 2, 2018, 6:35 AM IST
ನವದೆಹಲಿ: ವಾಣಿಜ್ಯ ವಿವಾದಗಳನ್ನು ಶೀಘ್ರವೇ ಪರಿಹರಿಸುವ ನಿಟ್ಟಿನಲ್ಲಿ ವಿಶೇಷ ಕೋರ್ಟ್ಗಳ ಸ್ಥಾಪನೆ ನಿಟ್ಟಿನಲ್ಲಿ ಮಂಡಿಸಲಾಗಿರುವ ವಾಣಿಜ್ಯ ಕೋರ್ಟ್ಗಳು, ವಾಣಿಜ್ಯ ವಿಭಾಗ ಮತ್ತು ಹೈಕೋರ್ಟ್ಗಳಲ್ಲಿ ವಾಣಿಜ್ಯ ವ್ಯಾಜ್ಯ ಮೇಲ್ಮನವಿ ವಿಭಾಗ (ತಿದ್ದುಪಡಿ) ಕಾಯ್ದೆ 2018ಕ್ಕೆ ಬುಧವಾರ ಲೋಕ ಸಭೆ ಅಂಗೀಕಾರ ನೀಡಿದೆ.
ಈ ಸಂದರ್ಭದಲ್ಲಿ ತುಮಕೂರಿನ ಕಾಂಗ್ರೆಸ್ ಸಂಸದ ಎಸ್.ಪಿ.ಮುದ್ದಹನುಮೇ ಗೌಡ ವಿಧೇಯಕದ ವಿರುದಟಛಿ ಮಾತನಾಡಿದರು. ಸುಗ್ರೀವಾಜ್ಞೆ ಮೂಲಕ ಕೇಂದ್ರ ಸರ್ಕಾರ ಇಂಥ ಕಾಯ್ದೆ ಜಾರಿಗೆ ತರುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು. ಇದರ ಜತೆಗೆ ದೇಶದ ಎಲ್ಲಾ ಹೈಕೋರ್ಟ್ಗಳಲ್ಲಿ ಶೇ.50ರಷ್ಟು ಹುದ್ದೆಗಳು ಭರ್ತಿಯಾಗಿಲ್ಲ.ಹೀಗಾಗಿ, ಹೈಕೋರ್ಟ್ಗಳಿಗೆ ವಾಣಿಜ್ಯ ವಿವಾದ ಬಗೆಹರಿಸುವುದು ಹೊರೆಯಾಲಿದೆ ಎಂದರು.
ವಿಧೇಯಕವನ್ನು ಸಮರ್ಥಿಸಿ ಮಾತನಾಡಿದ ಕೇಂದ್ರ ಕಾನೂನು ಸಚಿವ ರವಿಶಂಕರ ಪ್ರಸಾದ್ ದೇಶದಲ್ಲಿ ಉತ್ತಮ ಉದ್ದಿಮೆ, ವ್ಯವಹಾರ ನಡೆಸುವ ವಾತಾವರಣ ಇದೆ ಎಂಬ ವಾತಾವರಣ ಸೃಷ್ಟಿಸುವ ನಿಟ್ಟಿನಲ್ಲಿ ಈ ವಿಧೇಯಕದ ಅಂಗೀಕಾರ ಮಹತ್ವ ಪಡೆದಿದೆ ಎಂದು ಹೇಳಿದ್ದಾರೆ.
ದೇಶದ ನ್ಯಾಯಾಲಯಗಳಲ್ಲಿ ಹೆಚ್ಚಿನ ಹುದ್ದೆಗಳು ಭರ್ತಿಯಾಗಿಲ್ಲ ಎಂಬ ಪ್ರತಿಪಕ್ಷಗಳ ಮಾತಿಗೆ ಪ್ರತಿಕ್ರಿಯೆ ಕೊಟ್ಟ ಕಾನೂನು ಸಚಿವರು,ಸದ್ಯ 18.446 ಜಡ್ಜ್ಗಳ ಹುದ್ದೆಗಳು ಕೆಳ ಹಂತದ ಕೋರ್ಟ್ಗಳಲ್ಲಿದ್ದಾರೆ. 173 ಹೊಸ ಜಡ್ಜ್ಗಳ ಹುದ್ದೆಗಳನ್ನು ಹೈಕೋರ್ಟ್, ಸುಪ್ರೀಂಕೋರ್ಟ್ಗಳಲ್ಲಿ ಸೃಷ್ಟಿಸಲಾಗಿದೆ ಎಂದಿದ್ದಾರೆ. ರಾಜ್ಯ ಸರ್ಕಾರಗಳು ಕೂಡ ಜಿಲ್ಲಾ ಮಟ್ಟದಲ್ಲಿ ವಾಣಿಜ್ಯ ವ್ಯಾಜ್ಯ ಪರಿಹಾರ ಕೋರ್ಟ್ಗಳನ್ನು ಸ್ಥಾಪಿಸಬೇಕಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Reliance Jio Profit; ರಿಲಯನ್ಸ್ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ
Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ
PM Modi:ನನ್ನ 90 ಸೆಕೆಂಡ್ ಭಾಷಣ ಕಾಂಗ್ರೆಸ್, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!
MUST WATCH
ಹೊಸ ಸೇರ್ಪಡೆ
Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ
Reliance Jio Profit; ರಿಲಯನ್ಸ್ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ
Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ