ಮೋದಿ ಮಾತಿನ ಚಾಟಿಗೆ ವಿಪಕ್ಷಗಳು ಸುಸ್ತು!


Team Udayavani, May 24, 2019, 6:05 AM IST

speech

ಪ್ರಧಾನಿ ನರೇಂದ್ರ ಮೋದಿ ಭಾಷಣ ಕಲೆಯಲ್ಲಿ ನಿಷ್ಣಾತರು.ಸಂಶಯವೇ ಬೇಡ! ಪ್ರತಿ ಚುನಾವಣೆಯಲ್ಲೂ ಅವರು ನಿರ್ದಿಷ್ಟ ವಿಚಾರ ಪ್ರಸ್ತಾವಿಸುವುದರೊಂದಿಗೆ ಹಲವು ವಿಚಾರಗಳನ್ನು ಪ್ರಸ್ತಾವಿಸುತ್ತಾರೆ. ಈ ಮೂಲಕ ಜನರ ಮನಸ್ಸಿನಲ್ಲಿ ಅದು ನೆಲೆ ನಿಲ್ಲುವಂತೆ ಮಾಡುತ್ತಾರೆ. ಈ ಬಾರಿಯೂ ಮೋದಿ ಈ ಟ್ರಿಕ್‌ ಬಳಕೆ ಮಾಡಿದ್ದಾರೆ. 2014ರ ಚುನಾವಣೆ ಪ್ರಚಾರದ ವೇಳೆ ಮೋದಿ ಪ್ರಸ್ತಾವಿಸಿದ ವಿಚಾರಗಳಿಗೂ 2019ರಲ್ಲಿ ಪ್ರಸ್ತಾವಿಸಿದ ವಿಚಾರಗಳಿಗೂ ಬಹಳಷ್ಟು ವ್ಯತ್ಯಾಸವಿದೆ. 2014ರಲ್ಲಿ ಅವರು ಪ್ರಸ್ತಾವಿಸಿದ ಹಲವು ವಿಚಾರಗಳಲ್ಲಿ “ನಾವಿದನ್ನು ಮಾಡಬಲ್ಲೆವು’ ಎಂಬುದು ಮುಖ್ಯವಾಗಿದ್ದರೆ, 2019ರಲ್ಲಿ “ನಾವಿದನ್ನು ಮಾಡಿದ್ದೇವೆ’ ಎಂದು ಮನವರಿಕೆ ಮಾಡಿಕೊಟ್ಟರು.

ಚಾಯ್‌ವಾಲಾನಿಂದ ಚೌಕೀದಾರ್‌
2014ರಲ್ಲಿ ಮೋದಿ ಭ್ರಷ್ಟಾಚಾರದ ವಿರುದ್ಧ, ಬಡವರ ಪರವಾಗಿ ಸಾಕಷ್ಟು ಮಾತುಗಳನ್ನಾಡಿದ್ದರು. ಬಡವರ ಪರ ಎಂದು ಬಿಂಬಿಸಲು ಅವರು ಚಾಯ್‌ವಾಲಾ ಹೆಸರನ್ನು ಪರಿಣಾಮಕಾರಿಯಾಗಿ ಬಳಸಿದ್ದರು. ಈ ಬಾರಿ ರಕ್ಷಣೆ ವಿಚಾರದಲ್ಲಿ, ಭಯೋತ್ಪಾದನೆ, ಪಾಕಿಸ್ಥಾನ ವಿರುದ್ಧ ಪರಿಣಾಮಕಾರಿ ಕ್ರಮ ಕೈಗೊಂಡಿದ್ದೇವೆ ಎಂಬುದಕ್ಕೆ ಪೂರಕವಾಗಿ ಅತ್ಯುಗ್ರವಾಗಿ ಮಾತನಾಡಿದ್ದೂ ಅಲ್ಲದೇ ಭ್ರಷ್ಟಾಚಾರ, ರಕ್ಷಣೆ ವಿಚಾರದಲ್ಲಿ ಚೌಕೀದಾರ್‌ ಶಬ್ದವನ್ನು ಹೋದಲ್ಲೆಲ್ಲ ಪ್ರಸ್ತಾವಿಸಿದ್ದಾರೆ. ಉಗ್ರರ ಮನೆಗೆ ನುಗ್ಗಿ ಹೊಡೆಯುತ್ತೇವೆ ಎಂಬ ಅವರ ಡೈಲಾಗ್‌ ಪ್ರಸಿದ್ಧವಾಗಿತ್ತು. ಒಂದು ಸಮೀಕ್ಷೆ ಪ್ರಕಾರ ಅವರು 109 ಬಾರಿ ಚೌಕೀದಾರ್‌ ಪದವನ್ನು ತಮ್ಮ ಚುನಾವಣ ಭಾಷಣಗಳಲ್ಲಿ ಬಳಸಿದ್ದಾರೆ. 2014ರಲ್ಲಿ ಅವರು ಬಡವರು/ಬಡತನ ಎಂಬುದನ್ನು 55 ಬಾರಿ ಪ್ರಯೋಗಿಸಿದ್ದರು.

ಅಭಿವೃದ್ಧಿಯಿಂದ ರಕ್ಷಣೆ
2014ರ ಪ್ರಚಾರದ ವೇಳೆ ಪ್ರಧಾನಿ ಮೋದಿ ಅವರು ಪ್ರಚಾರದಲ್ಲಿ ಹೆಚ್ಚು ಬಳಸಿದ್ದು ಅಭಿವೃದ್ಧಿ ವಿಚಾರಗಳನ್ನು. ಬಡವರ ಕಲ್ಯಾಣ, ಉದ್ಯೋಗ ನೀಡಿಕೆ, ಭ್ರಷ್ಟಾಚಾರ, ಬಡತನ ವಿಚಾರಗಳು ಅವರ ಮಾತುಗಳಲ್ಲಿ ಹೆಚ್ಚಾಗಿದ್ದವು. ಬಡವರು ಎಂಬ ಪದವನ್ನು ಅವರು 2014ರಲ್ಲಿ 55 ಬಾರಿ ಬಳಸಿದ್ದರೆ, 14 ಬಾರಿ ಉದ್ಯೋಗದ ಬಗ್ಗೆ, 19 ಬಾರಿ ಬಡತನದ ಬಗ್ಗೆ, 10 ಬಾರಿ ಯುಪಿಎ ಸರಕಾರದ ಭ್ರಷ್ಟಾಚಾರದ ಬಗ್ಗೆ ಪ್ರಸ್ತಾವಿಸಿದ್ದರು. 2019ರಲ್ಲಿ ರಕ್ಷಣೆ ಬಗ್ಗೆ ಅತಿ ಹೆಚ್ಚು ಮೋದಿ ಪ್ರಸ್ತಾವಿಸಿದ್ದಾರೆ. ಬಾಲಾಕೋಟ್‌ ದಾಳಿ, ಸರ್ಜಿಕಲ್‌ ಸ್ಟ್ರೈಕ್‌ನ ವಿಚಾರ ಇದರಲ್ಲಿ ಪ್ರಮುಖ.

ಟಾಪ್ ನ್ಯೂಸ್

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2011

ಬೆಂಗಳೂರಿನಲ್ಲೊಂದು ಟೈ ರೋಮಾಂಚನ

rajani-kanth

ಮೋದಿಯೂ ವರ್ಚಸ್ವಿ ನಾಯಕ

smruthi-irani

ಬರಿಗಾಲಲ್ಲೇ ವಿನಾಯಕ ದೇಗುಲಕ್ಕೆ ತೆರಳಿದ್ದ ಸ್ಮತಿ!

Asshivrda

ಮಾಜಿ ರಾಷ್ಟ್ರಪತಿ ಪ್ರಣಬ್ ರ ಆಶೀರ್ವಾದ ಪಡೆದ ಪ್ರಧಾನಿ ನರೇಂದ್ರ ಮೋದಿ

Lalu-head-scratch-700

ರಾಜೀನಾಮೆ ನೀಡುವ ರಾಹುಲ್‌ ನಿರ್ಧಾರ ಆತ್ಮಾಹುತಿಯದ್ದು : ಲಾಲು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.