ಹಗರಣ ಕಳಂಕಿತರಿಂದ ತೆರಿಗೆ ವ್ಯವಸ್ಥೆಗೆ ಆಕ್ಷೇಪ


Team Udayavani, Oct 25, 2017, 7:45 AM IST

jetly.jpg

ಹೊಸದಿಲ್ಲಿ: “2ಜಿ ಹಗರಣ, ಕಲ್ಲಿದ್ದಲು ಹಗರಣದಂಥ ಅಕ್ರಮಗಳಿಗೆ ಹೊಂದಿಕೊಂಡ ವರಿಗೆ ಕಾನೂನುಬದ್ಧವಾದ ತೆರಿಗೆ ವ್ಯವಸ್ಥೆಯು ಸಹಜವಾಗಿಯೇ ಆಕ್ಷೇಪಾರ್ಹವಾಗಿ ಕಾಣುತ್ತದೆ.’

ಇದು ಜಿಎಸ್‌ಟಿಯನ್ನು “ಗಬ್ಬರ್‌ ಸಿಂಗ್‌ ಟ್ಯಾಕ್ಸ್‌’ ಎಂದು ಕರೆದ ಕಾಂಗ್ರೆಸ್‌ ಉಪಾಧ್ಯಕ್ಷ ರಾಹುಲ್‌ ಗಾಂಧಿ ಅವರಿಗೆ  ಕೇಂದ್ರ ವಿತ್ತ ಸಚಿವ ಅರುಣ್‌ ಜೇಟಿÉ ಅವರು ನೀಡಿದ ತಿರುಗೇಟು. ದಿಲ್ಲಿಯಲ್ಲಿ ಮಂಗಳವಾರ ದೇಶದ ಆರ್ಥಿಕತೆಗೆ ಸಂಬಂಧಿಸಿದ ವಿವರಣೆ ನೀಡುವಾಗ ರಾಹುಲ್‌ರ ಹೇಳಿಕೆಗೆ ಪ್ರತಿಕ್ರಿಯಿಸದೇ ಇರಲು ಜೇಟಿÉ ಮರೆಯಲಿಲ್ಲ.

ಸೋಮವಾರ ಗುಜರಾತ್‌ನಲ್ಲಿ ಮಾತನಾಡಿದ್ದ ರಾಹುಲ್‌ ಗಾಂಧಿ, ಜಿಎಸ್‌ಟಿಯನ್ನು ಗಬ್ಬರ್‌ಸಿಂಗ್‌ ಟ್ಯಾಕ್ಸ್‌ ಎಂದು ಕರೆದಿದ್ದಲ್ಲದೆ, “ಜನರ ಆದಾಯವನ್ನು ಲೂಟಿ ಮಾಡುವ ಖಳನಾಯಕ’ ಎಂದು ಬಣ್ಣಿಸಿದ್ದರು. ಇದಕ್ಕೆ ಮಂಗಳವಾರದ ಸುದ್ದಿಗೋಷ್ಠಿಯಲ್ಲಿ ತೀಕ್ಷ್ಣ ಪ್ರತಿಕ್ರಿಯೆ ನೀಡಿದ ಜೇಟಿÉ, ಯುಪಿಎ ಸರಕಾರದ ಅವಧಿಯ ಹಗರಣಗಳ ಹೆಸರನ್ನೆತ್ತುವ ಮೂಲಕವೇ ತಿರುಗೇಟು ನೀಡಿದ್ದಾರೆ.

ಆರ್ಥಿಕತೆ ಟೇಕಾಫ್: ವಿಸ್ತೃತ ಆರ್ಥಿಕ ಮಾರ್ಗಸೂಚಿ ಹಾಗೂ ದಾಖಲೆಯ ಸಮೇತ ಮಂಗಳವಾರ ಸಚಿವ ಜೇಟಿÉ ಹಾಗೂ ವಿತ್ತ ಸಚಿವಾಲಯದ ಉನ್ನತ ಅಧಿಕಾರಿಗಳು ತೆರಿಗೆ ಸುಧಾರಣಾ ವ್ಯವಸ್ಥೆಯನ್ನು ಸಮರ್ಥಿಸಿಕೊಂಡಿ ದ್ದಾರೆ. ಭಾರತದ ಆರ್ಥಿಕತೆಯನ್ನು ಸ್ಟ್ರಾಂಗ್‌ ವಿಕೆಟ್‌ ಎಂದು ಬಣ್ಣಿಸಿದ ಸಚಿವ ಜೇಟಿÉ, “ದೇಶದ ಆರ್ಥಿಕತೆಯ ಅಡಿಪಾಯ ಸುಭದ್ರವಾಗಿದೆ. ಕಳೆದ 3 ವರ್ಷಗಳಲ್ಲಿ ಅತಿ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆ ನಮ್ಮದು’ ಎಂದಿದ್ದಾರೆ. ಇದೇ ವೇಳೆ ಮಾತನಾಡಿದ ಆರ್ಥಿಕ ವ್ಯವಹಾರಗಳ ಇಲಾಖೆಯ ಕಾರ್ಯದರ್ಶಿ ಸುಭಾಷ್‌ಚಂದ್ರ ಗಾರ್ಗ್‌, ಸರಕಾರ ಕೈಗೊಂಡಿರುವ ಹಲವು ಸುಧಾರಣಾ ಕ್ರಮಗಳ ಪೈಕಿ ಜಿಎಸ್‌ಟಿ ಪ್ರಮುಖವಾದದ್ದು. ಜಿಎಸ್‌ಟಿಯು ಸದ್ಯದಲ್ಲೇ ದೇಶದ ಪ್ರಗತಿಯ ಪಥಕ್ಕೆ ದೊಡ್ಡ ಕೊಡುಗೆ ನೀಡಲಿದೆ ಎಂದು ಹೇಳಿದ್ದಾರೆ.

ಹಣದುಬ್ಬರ ಇಳಿಕೆ: 2014ರಿಂದೀಚೆಗೆ ಹಣದುಬ್ಬರ ಪ್ರಮಾಣವು ಗಣನೀಯವಾಗಿ ಇಳಿಕೆ ಕಂಡಿದ್ದು, ಪ್ರಸಕ್ತ ವಿತ್ತೀಯ ವರ್ಷದಲ್ಲಿ ಶೇ.4 ಅನ್ನು ದಾಟುವುದಿಲ್ಲ. ಆಯಾತ-ನಿರ್ಯಾತ ಕೊರತೆ(ಸಿಎಡಿ)ಯೂ ಶೇ.2ಕ್ಕಿಂತ ಕಡಿಮೆಯಿದೆ. ವಿದೇಶಿ ವಿನಿಮಯ ಮೀಸಲು 400 ಶತಕೋಟಿ ಡಾಲರ್‌ ಅನ್ನು ದಾಟಿಲ್ಲ. ಇನ್ನು ವಿತ್ತೀಯ ಕೊರತೆಯನ್ನು ಜಿಡಿಪಿಯ ಶೇ.3.2ರ ಗುರಿ ಹಾಕಿಕೊಂಡಿದ್ದು, ಸರಕಾರ ಅದಕ್ಕೆ ಬದ್ಧವಾಗಿದೆ. ಡಿಸೆಂಬರ್‌ನಲ್ಲಿ ಇದನ್ನು ಪರಿಶೀಲಿಸಲಾಗುತ್ತದೆ ಎಂದೂ ಗಾರ್ಗ್‌ ತಿಳಿಸಿದ್ದಾರೆ.

ಜಿಡಿಪಿ ದರದಲ್ಲಾದ ಇಳಿಕೆಗೆ ಸದ್ಯ ಬ್ರೇಕ್‌ ಬಿದ್ದಿದ್ದು, ಆರ್ಥಿಕತೆ ಮತ್ತೆ ಚೇತರಿಸಿಕೊಳ್ಳುತ್ತಿದೆ. ಶೀಘ್ರದಲ್ಲೇ ದೇಶದ ಆರ್ಥಿಕ ಪ್ರಗತಿ ಶೇ.8 ಅನ್ನು ತಲುಪುವ ವಿಶ್ವಾಸವನ್ನು ಸ್ವತಃ ಅಂತಾರಾಷ್ಟ್ರೀಯ ಹಣಕಾಸು ನಿಧಿ(ಐಎಂಎಫ್) ಕೂಡ ವ್ಯಕ್ತಪಡಿ ಸಿದೆ. ಜತೆಗೆ, 72,500 ಕೋಟಿ ರೂ. ಬಂಡವಾಳ ಹಿಂಪಡೆತದ ಟಾರ್ಗೆಟ್‌ ಅನ್ನೂ ಸರಕಾರ ಸಾಧಿ ಸಲಿದೆ ಎಂದಿದ್ದಾರೆ ಗಾರ್ಗ್‌. 

92,150 ಕೋಟಿ ಜಿಎಸ್‌ಟಿ ಸಂಗ್ರಹ
ಸರಕಾರವು ಸೆಪ್ಟೆಂಬರ್‌ ತಿಂಗಳಲ್ಲಿ 92,150 ಕೋಟಿ ರೂ.ಗಳನ್ನು ಜಿಎಸ್‌ಟಿ ರೂಪದಲ್ಲಿ ಪಡೆದಿದೆ ಎಂದು ವಿತ್ತ ಸಚಿವಾಲಯ ಮಾಹಿತಿ ನೀಡಿದೆ. ಈ ಪೈಕಿ 14,042 ಕೋಟಿ ರೂ. ಕೇಂದ್ರ ಜಿಎಸ್‌ಟಿ, 21,172 ಕೋಟಿ ರೂ. ರಾಜ್ಯ ಜಿಎಸ್‌ಟಿಯದ್ದಾಗಿದೆ. ಸೋಮವಾರದವರೆಗೆ 42.91 ಲಕ್ಷ ಉದ್ದಿಮೆ ಸಂಸ್ಥೆಗಳು ಜಿಎಸ್‌ಟಿಆರ್‌-3ಬಿ ರಿಟರ್ನ್Õ ಸಲ್ಲಿಸಿವೆ ಎಂದೂ ಸಚಿವಾಲಯ ಹೇಳಿದೆ.

ಟಾಪ್ ನ್ಯೂಸ್

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.