ನೀರು ಪೂರೈಕೆಗೆ ವಿರೋಧ
ಜೋಲಾರ್ಪೇಟೆಯಿಂದಲೇ ಪೂರೈಕೆ ಏಕೆ?: ಡಿಎಂಕೆ
Team Udayavani, Jun 24, 2019, 5:06 AM IST
ಚೆನ್ನೈ: ಬಾಯಾರಿರುವ ಬೆಂಗಳೂರಿಗೆ ಶರಾವತಿ ನೀರು ಪೂರೈಸುವ ಬಗ್ಗೆ ಸಮಗ್ರ ಯೋಜನಾ ವರದಿ ಸಿದ್ಧಪಡಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಕ್ಕೆ ಮಲೆನಾಡು ಪ್ರದೇಶದಿಂದ ಭಾರೀ ವಿರೋಧ ವ್ಯಕ್ತವಾಗಿದ್ದರೆ ಅತ್ತ, ನೀರಿಲ್ಲದೆ ಬಸವಳಿದಿರುವ ತಮಿಳುನಾಡು ರಾಜಧಾನಿ ಚೆನ್ನೈಗೆ ವೆಲ್ಲೂರು ಜಿಲ್ಲೆಯ ಜೋಲಾರ್ಪೇಟೆಯಿಂದ ನೀರು ಪೂರೈಕೆ ಮಾಡುವುದರ ವಿರುದ್ಧ ಡಿಎಂಕೆ ದನಿ ಯೆತ್ತಿದೆ. ತಮಿಳುನಾಡು ಸರಕಾರ ಇಂಥ ಕ್ರಮ ಕೈಗೊಂಡರೆ ಜಿಲ್ಲೆಯಲ್ಲಿ ಭಾರೀ ಪ್ರತಿ ಭಟನೆ ಎದುರಿಸಬೇಕಾಗುತ್ತದೆ ಎಂದು ಡಿಎಂಕೆ ಶಾಸಕ ದೊರೈಮುರುಗನ್ ಎಚ್ಚರಿಸಿದ್ದಾರೆ.
ಮುಂದಿನ ಆರು ತಿಂಗಳುಗಳಿಗೆ ರಾಜಧಾನಿಗೆ ಜಿಲ್ಲೆಯಿಂದ ರೈಲಿನ ಮೂಲಕ ಪ್ರತಿದಿನ ನೀರು ಪೂರೈಸುವ ಬಗ್ಗೆ ಶುಕ್ರವಾರ ಆಯೋಜಿಸಿದ್ದ ಸಭೆಯಲ್ಲಿ ನಿರ್ಧಾರ ಕೈಗೊಂಡಿರುವ ಬಗ್ಗೆ ಅವರು ಕ್ರುದ್ಧರಾಗಿದ್ದಾರೆ. ನೀರು ಪೂರೈಕೆಯ ಬಗ್ಗೆ ಕ್ರಮ ಕೈಗೊಳ್ಳುವುದರ ಬದಲು ದೇಗುಲಗಳಲ್ಲಿ ಪೂಜೆ, ಹವನಗಳನ್ನು ಕೈಗೊಳ್ಳಲು ಆದೇಶಿಸಿದ್ದಕ್ಕೆ ಕಟಕಿಯಾಡಿದ್ದಾರೆ. 28ರಂದು ಆರಂಭವಾಗುವ ತಮಿಳುನಾಡು ವಿಧಾನಸಭೆ ಅಧಿವೇಶನದಲ್ಲಿ ಈ ಬಗ್ಗೆ ಪ್ರಸ್ತಾಪಿಸಲಾಗುತ್ತದೆ ಎಂದು ಅವರು ಹೇಳಿದ್ದಾರೆ.
65 ಕೋಟಿ ವೆಚ್ಚ: ಹದಿನೆಂಟು ವರ್ಷಗಳ (2001)ಬಳಿಕ ಚೆನ್ನೈಗೆ ಹೊರಗಿನ ಸ್ಥಳದಿಂದ ನೀರು ಪೂರೈಕೆಯಾಗುತ್ತಿದೆ. ಅದಕ್ಕಾಗಿ 65 ಕೋಟಿ ರೂ. ವೆಚ್ಚ ಮಾಡಲಾಗುತ್ತದೆ. ದಕ್ಷಿಣ ರೈಲ್ವೆ ಅಧಿಕಾರಿಗಳು, ಚೆನ್ನೈ ನಗರ ನೀರು ಸರಬರಾಜು ಮಂಡಳಿ ಅಧಿಕಾರಿಗಳು ಜಲಮೂಲಗಳಿಗಾಗಿ ಜೋಲಾರ್ಪೇಟೆಯಲ್ಲಿ ಸಮೀಕ್ಷೆ ನಡೆಸಿದ್ದಾರೆ. ಹೆಚ್ಚುವರಿ ನೀರು ಬೇಕಾಗಿದ್ದರೆ ಮೆಟ್ಟೂರು ಅಣೆಕಟ್ಟಿನಿಂದ ನೀರು ಪೂರೈಸಲಾಗುತ್ತದೆ. 2 ವಾರಗಳ ಬಳಿಕ ಚೆನ್ನೈಗೆ ನೀರು ಪೂರೈಕೆಯಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್