OPS, EPS ಬಣಗಳು ವಿಲೀನ; ಭಿನ್ನಮತವಿದ್ದರೂ ಒಗ್ಗಟ್ಟು: ಸಿಎಂ
Team Udayavani, Aug 21, 2017, 3:40 PM IST
ಚೆನ್ನೈ : ತಮಿಳು ನಾಡು ಮುಖ್ಯಮಂತ್ರಿ ಎಡಪ್ಪಾಡಿ ಕೆ ಪಳನಿಸ್ವಾಮಿ (EPS) ಮತ್ತು ಓ ಪನ್ನೀರ ಸೆಲ್ವಂ(OPS) ನೇತೃತ್ವದ ಎಐಎಡಿಎಂಕೆ ಉಭಯ ಎದುರಾಳಿ ಬಣಗಳು ಇಂದು ಸೋಮವಾರ ತಮ್ಮ ಪಕ್ಷದ ಪ್ರಧಾನ ಕಾರ್ಯಾಲಯದಲ್ಲಿ ವಿಲಯನವನ್ನು ಅಧಿಕೃತವಾಗಿ ಪ್ರಕಟಿಸಿವೆ.
ವರದಿಗಳ ಪ್ರಕಾರ ಇಪಿಎಸ್ ಅವರು ಪಳನಿಸ್ವಾಮಿ ಅವರು ಮುಂದಿಟ್ಟ ಕೇಲವು ಬೇಡಿಕೆಗಳನ್ನು ಒಪ್ಪಿಕೊಳ್ಳುವುದರೊಂದಿಗೆ ಉಭಯ ಎದುರಾಳಿ ಬಣಗಳ ವಿಲಯನ ಮಾತುಕತೆಗೆ ಚುರುಕು ಲಭಿಸಿತು.
ಇಪಿಎಸ್ ಅವರು ಜಯಲಲಿತಾ ಅವರ ಸಾವಿನ ಬಗ್ಗೆ ತನಿಖಾ ಆಯೋಗವನ್ನು ನೇಮಿಸಿರುವರಲ್ಲದೆ ಜಯಲಲಿತಾ ಅವರ ಅಧಿಕೃತ ಪೋಯೆಸ್ ಗಾರ್ಡನ್ ನಿವಾಸ, ವೇದ ನಿಲಯಂ ಅನ್ನು ಶೀಘ್ರವೇ ಸ್ಮಾರಕವಾಗಿ ಪರಿವರ್ತಿಸುವ ನಿರ್ಧಾರ ಪ್ರಕಟಿಸಿದರು. ಆದರೆ ಜಯಾ ಅವರ ಸಾವಿನ ಸಿಬಿಐ ತನಿಖೆ ನಡೆಸಬೇಕೆಂಬ ಬೇಡಿಕೆಯ ಮೇಲೆ ಯಾವುದೇ ನಿರ್ಧಾರವನ್ನು ಕೈಗೊಳ್ಳಲಾಗಿಲ್ಲ.
ಪಕ್ಷದ ಹಿರಿಯ ಸಚಿವರು ಮತ್ತು ಪದಾಧಿಕಾರಿಗಳೊಂದಿಗೆ ಇಂದು ಪನ್ನೀರ ಸೆಲ್ವಂ ಮತ್ತು ಪಳನಿ ಸ್ವಾಮಿ ಮಾತುಕತೆ ನಡೆಸಲಿದ್ದಾರೆ.
ಜೈಲು ಪಾಲಾಗಿರುವ ವಿ ಕೆ ಶಶಿಕಲಾ ಮತ್ತು ಆಕೆಯ ಕುಟುಂಬ ಸದಸ್ಯರನ್ನು ಪಕ್ಷದಿಂದ ಅಧಿಕೃತವಾಗಿ ಉಚ್ಚಾಟಿಸುವ ನಿರ್ಧಾರವನ್ನು ಇಂದು ಕೈಗೊಳ್ಳುವ ನಿರೀಕ್ಷೆ ಇದೆ. ಇದು ಒಪಿಎಸ್ ಬಣದ ಪ್ರಮುಖ ಶರತ್ತುಗಳಲ್ಲಿ ಒಂದಾಗಿದ್ದು ಅದಿನ್ನೂ ಪರಿಗಣಿತವಾಗಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ