ಪಿಎನ್‌ಬಿ ಹಗರಣಕ್ಕೆ ಬೀಜಾಂಕುರವಾದದ್ದೇ ಯುಪಿಎ ಕಾಲದಲ್ಲಿ: BJP


Team Udayavani, Feb 17, 2018, 4:47 PM IST

Nirmala-Sitharaman-700.jpg

ಹೊಸದಿಲ್ಲಿ : ”ಪಿಎನ್‌ಬಿ ಬಹುಕೋಟಿ ವಂಚನೆ ಹಗರಣದ ಮೂಲ ಅಪರಾಧವನ್ನು  ಬಿಲಿಯಾಧಿಪತಿ ವಜ್ರಾಭರಣ ಉದ್ಯಮಿ ನೀರವ್‌ ಮೋದಿ ಎಸಗಿದ್ದು 2011ರಲ್ಲಿ; ಅಂದರೆ ಯುಪಿಎ ಅಧಿಕಾರಾವಧಿಯ ವೇಳೆಯಲ್ಲಿ” ಎಂದು ಹೇಳುವ ಮೂಲಕ ಬಿಜೆಪಿ, ಕಾಂಗ್ರೆಸ್‌ಗೆ ತಿರುಗೇಟು ನೀಡಿದೆ.

ಯುಪಿಎ ಕಾಲದಲ್ಲೇ ಪಿಎನ್‌ಬಿ ಬಹುಕೋಟಿ ವಂಚನೆ ಹಗರಣದ ಬೀಜಾಂಕುರವಾಗಿತ್ತು ಎಂದು ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಪತ್ರಿಕಾ ಗೋಷ್ಠಿಯಲ್ಲಿ ಹೇಳಿದರು. 

ಪಿಎನ್‌ಬಿ ಬಹುಕೋಟಿ ವಂಚನೆ ಹಗರಣದಲ್ಲಿ ಉನ್ನತ ಕಾಂಗ್ರೆಸ್‌ ನಾಯಕರು ಶಾಮೀಲಾಗಿದ್ದಾರೆ ಎಂದು ನಿರ್ಮಲಾ ಸೀತಾರಾಮನ್‌ ಆರೋಪಿಸಿದರು. ನೀರವ್‌ ಮೋದಿ ಅವರ ಕಂಪೆನಿಗಳಲ್ಲಿ ಫೈರ್‌ ಸ್ಟಾರ್‌ ಡೈಮಂಡ್‌ ಇಂಟರ್‌ನ್ಯಾಶನಲ್‌ ಪ್ರೈವೇಟ್‌ ಲಿಮಿಟೆಡ್‌ ಕೂಡ ಒಂದು. ಇದನ್ನು ಅವರು ಅದ್ವೆ„ತ್‌ ಹೋಲ್ಡಿಂಗ್ಸ್‌ ನಿಂದ ಖರೀದಿಸಿದ್ದರು. ಕಾಂಗ್ರೆಸ್‌ ವಕ್ತಾರ ಅಭಿಷೇಕ್‌ ಸಿಂಘ್ವಿ  ಅವರ ಪತ್ನಿ ಅನಿತಾ ಸಿಂಘ್ವಿ  ಅವರು 2002ರಿಂದಲೂ ಈ ಕಂಪೆನಿಯ ಓರ್ವ ಶೇರುದಾರರಾಗಿದ್ದರು ಎಂದು ನಿರ್ಮಲಾ ಹೇಳಿದರು.

2013ರಲ್ಲಿ ನ್ಯಾಶನಲ್‌ ಸ್ಟಾಕ್‌ ಎಕ್ಸ್‌ಚೇಂಜ್‌ನಲ್ಲಿ ಆರು ತಿಂಗಳ ಕಾಲ ಗೀತಾಂಜಲಿ ಜೆಮ್ಸ್‌ ಕಂಪೆನಿಯನ್ನು ಅಮಾನತು ಮಾಡಲಾಗಿತ್ತು. ಜ್ಯುವೆಲ್ಲರಿ ಸಮೂಹದ ಈ ಕಂಪೆನಿಯ ಒಂದು ಪ್ರಮೋಶನಲ್‌ ಈವೆಂಟ್‌ನಲ್ಲಿ ರಾಹುಲ್‌ ಗಾಂಧಿ ಪಾಲ್ಗೊಂಡಿದ್ದರು ಎಂದು ನಿರ್ಮಲಾ ಸೀತಾರಾಮನ್‌ ಹೇಳಿದರು. 

ಪಿಎನ್‌ಬಿ ಬಹುಕೋಟಿ ವಂಚನೆ ಹಗರಣದಲ್ಲೀಗ ವಿದೇಶಕ್ಕೆ ಪಲಾಯನ ಮಾಡಿರುವ ನೀರವ್‌ ಮೋದಿ ಅವರನ್ನು ಹಿಡಿಯುವುದಕ್ಕೇ ಕೇಂದ್ರ ಸರಕಾರ ಹೆಚ್ಚಿನ ಮಹತ್ವ ನೀಡುತ್ತಿದೆ. ಕಾಂಗ್ರೆಸ್‌ ಸರಕಾರ ಈ ಹಗರಣವನ್ನು ತನ್ನ ಆಡಳಿತಾವಧಿಯಲ್ಲಿ ಮುಚ್ಚಿ ಹಾಕಿತ್ತು. ಈಗ ಜನರನ್ನು ಅದು ದಾರಿ ತಪ್ಪಿಸುತ್ತಿದೆ ಎಂದು ಬಿಜೆಪಿ ಸಚಿವೆ ಆರೋಪಿಸಿದರು.  

ಟಾಪ್ ನ್ಯೂಸ್

1-eweweq

Gadag: ರಥೋತ್ಸವ ವೇಳೆ ರಥದ ಗಾಲಿಗೆ ಸಿಲುಕಿ ಇಬ್ಬರು ಭಕ್ತರು ಮೃತ್ಯು

1-wewqewq

RCB vs CSK ರೋಚಕ ಪಂದ್ಯಕ್ಕೆ ಮಳೆ ಅಡ್ಡಿ: ಬೌಲಿಂಗ್ ಆಯ್ಕೆ ಮಾಡಿಕೊಂಡ ಚೆನ್ನೈ

1-ew-eqw-e

BJP ಕಚೇರಿಗೆ ಬರುತ್ತಿದ್ದೇವೆ.. ಎಲ್ಲರನ್ನೂ ಬಂಧಿಸಿ: ಪ್ರಧಾನಿಗೆ ಕೇಜ್ರಿವಾಲ್ ಸವಾಲು

yogi-2

Congress ಪಕ್ಷದಲ್ಲಿ ಔರಂಗಜೇಬನ ಆತ್ಮ ಸೇರಿಕೊಂಡಿದೆ: ಸಿಎಂ ಯೋಗಿ ವಾಗ್ದಾಳಿ

1-qewwqeqqw

RSS ಕೂಡ ನಕಲಿ ಎಂದು ನಾಳೆ ಮೋದಿ ಹೇಳಬಹುದು : ಉದ್ಧವ್ ಠಾಕ್ರೆ ಕಿಡಿ

Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು

Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು

drowned

Vedganga ನದಿಯಲ್ಲಿ ಮುಳುಗಿ ನಾಲ್ವರು ಮೃತ್ಯು:ಇಬ್ಬರು ಬೆಳಗಾವಿಯವರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewwqeqqw

RSS ಕೂಡ ನಕಲಿ ಎಂದು ನಾಳೆ ಮೋದಿ ಹೇಳಬಹುದು : ಉದ್ಧವ್ ಠಾಕ್ರೆ ಕಿಡಿ

Priyanka Gandhi

Election; ಪ್ರಧಾನಿ ಮೋದಿ ಯಾಕೆ ಮಂಗಳಸೂತ್ರ,ಧರ್ಮದ ಮೇಲೆ ಮತ ಕೇಳುತ್ತಾರೆ: ಪ್ರಿಯಾಂಕಾ ಗಾಂಧಿ

priyanka-gandhi

Priyanka Gandhi ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ; ಇಲ್ಲಿದೆ ಅವರೇ ಕೊಟ್ಟ ಉತ್ತರ

Swati Maliwal Assault Case: ಕೇಜ್ರಿವಾಲ್ ಸಹಾಯಕ ಬಿಭವ್ ಕುಮಾರ್ ಬಂಧನ

Swati Maliwal Assault Case: ಕೇಜ್ರಿವಾಲ್ ಸಹಾಯಕ ಬಿಭವ್ ಕುಮಾರ್ ಬಂಧನ

1-panaji

Panaji: 55ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಪೋಸ್ಟರ್ ಅನಾವರಣ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Minchu

Banavasi ; ಕ್ರಿಕೆಟ್ ಆಡುತ್ತಿದ್ದ ಬಾಲಕ ಸಿಡಿಲಿಗೆ ಬಲಿ

1-eweweq

Gadag: ರಥೋತ್ಸವ ವೇಳೆ ರಥದ ಗಾಲಿಗೆ ಸಿಲುಕಿ ಇಬ್ಬರು ಭಕ್ತರು ಮೃತ್ಯು

1-wewqewq

RCB vs CSK ರೋಚಕ ಪಂದ್ಯಕ್ಕೆ ಮಳೆ ಅಡ್ಡಿ: ಬೌಲಿಂಗ್ ಆಯ್ಕೆ ಮಾಡಿಕೊಂಡ ಚೆನ್ನೈ

1-ew-eqw-e

BJP ಕಚೇರಿಗೆ ಬರುತ್ತಿದ್ದೇವೆ.. ಎಲ್ಲರನ್ನೂ ಬಂಧಿಸಿ: ಪ್ರಧಾನಿಗೆ ಕೇಜ್ರಿವಾಲ್ ಸವಾಲು

yogi-2

Congress ಪಕ್ಷದಲ್ಲಿ ಔರಂಗಜೇಬನ ಆತ್ಮ ಸೇರಿಕೊಂಡಿದೆ: ಸಿಎಂ ಯೋಗಿ ವಾಗ್ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.