Osmania University ವಿದ್ಯಾರ್ಥಿ ಆತ್ಮಹತ್ಯೆ: ಪರೀಕ್ಷೆ ಭಯ ?
Team Udayavani, Dec 4, 2017, 12:08 PM IST
ಹೈದರಾಬಾದ್ : ನಿನ್ನೆ ಭಾನುವಾರ ಹಾಸ್ಟೆಲ್ ಶೌಚಾಲಯದಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡನೆನ್ನಲಾದ ವಿದ್ಯಾರ್ಥಿ ಇ ಮುರಳಿ ಎಂಬಾತನ ಶವವನ್ನು ಒಯ್ಯಲು ಪೊಲೀಸರಿಗೆ ಬಿಡದ ಉಸ್ಮಾನಿಯಾ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಇಂದು ಸೋಮವಾರ ಉಗ್ರ ಪ್ರತಿಭಟನೆ ನಡೆಸಿದರು.
ಮೊದಲ ವರ್ಷದ ಎಂಎಸ್ಸಿ ಫಿಸಿಕ್ಸ್ ವಿದ್ಯಾರ್ಥಿಯಾಗಿರುವ ಮುರಳಿಯ ಶವ ಹಾಸ್ಟೆಲ್ನ ಶೌಚಾಲಯದಲ್ಲಿ ನೇತಾಡುತ್ತಿದ್ದ ಸ್ಥಿತಿಯಲ್ಲಿ ಪತ್ತೆಯಾಗಿತ್ತು.
“ನಾನೆಂದೂ ಈ ಹಿಂದೆ ಪರೀಕ್ಷೆಯಲ್ಲಿ ಫೇಲಾದುದಿಲ್ಲ. ಹಾಗೆಯೇ ನಾನು ಈಗಲೂ ಪರೀಕ್ಷೆಯಲ್ಲಿ ಫೇಲಾಗಲು ಬಯಸುವುದಿಲ್ಲ’ ಎಂದು ಮರಳಿ ಬರೆದಿಟ್ಟಿದ್ದ ಎನ್ನಲಾದ ಡೆತ್ ನೋಟ್, ಶವ ನೇತಾಡುತ್ತಿದ್ದ ಸ್ಥಳದಲ್ಲೇ ಪೊಲೀಸರಿಗೆ ಸಿಕ್ಕಿದೆ.
ವಿದ್ಯಾರ್ಥಿ ಮುರಳಿಗೆ ಪರೀಕ್ಷೆ ಸಂಬಂಧ ಮನೋ ಖನ್ನತೆ ಇತ್ತೆಂದು ಕಾಣುತ್ತಿದೆ; ನಾವು ಆತನ ಅಸಹಜ ಸಾವಿನ ಬಗ್ಗೆ ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದೇವೆ ಎಂದು ಪೊಲೀಸರು ಹೇಳಿದ್ದಾರೆ.
ಈ ನಡುವೆ ಉಸ್ಮಾನಿಯಾ ವಿವಿ ವಿದ್ಯಾರ್ಥಿಗಳ ಜಂಟಿ ಕ್ರಿಯಾ ಸಮಿತಿಯ ನಾಯಕ ಹಾಗೂ ನಿರುದ್ಯೋಗಿ ಯುವ ಸಂಘದ ಅಧ್ಯಕ್ಷರಾಗಿರುವ ಕೆ ಮಾನವತಾ ರಾಯ್ ಅವರು ಮಾತನಾಡುತ್ತಾ, “ಮುರಳಿ ನಿರುದ್ಯೋಗಿಯಾಗಿದ್ದ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದ; ಆತನ ಆತ್ಮಹತ್ಯೆಗೆ ಸರಕಾರವೇ ಹೊಣೆ. ಹಾಗಾಗಿ ಸರಕಾರ ಆತನ ಕುಟುಂಬಕ್ಕೆ 50 ಲಕ್ಷ ರೂ. ಪರಿಹಾರ ನೀಡಬೇಕು; ಇಲ್ಲದಿದ್ದರೆ ನಾವು ಇಲ್ಲಿಂದ ಆತನ ಪಾರ್ಥಿವ ಶರೀರವನ್ನು ಒಯ್ಯಲು ಪೊಲೀಸರಿಗೆ ಬಿಡುವುದಿಲ್ಲ’ ಎಂದು ಹೇಳಿದ್ದಾರೆ.
ಮೃತ ವಿದ್ಯಾರ್ಥಿ ಮುರಳಿಯು ಸಿದ್ದಿಪೆಟ್ ಜಿಲ್ಲೆಯ ದೌಲಾಪುರ ಗ್ರಾಮದವನಾಗಿದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಜಗತ್ತಿಗಿಂತ ಮೊದಲು ಪಾಕ್ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್ ದಾಳಿ ಬಗ್ಗೆ ಪ್ರಧಾನಿ
Encounter: ಛತ್ತೀಸ್ಗಢದಲ್ಲಿ ಎನ್ಕೌಂಟರ್… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ
MUST WATCH
ಹೊಸ ಸೇರ್ಪಡೆ
Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ
ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು
Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು
Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ
Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ