ತೆಲಂಗಾಣದಲ್ಲಿ ಯುವತಿಯ ಮೇಲೆ ರಿಕ್ಷಾ ಚಾಲಕನಿಂದ ಅತ್ಯಾಚಾರ
Team Udayavani, Dec 14, 2019, 12:40 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಹೈದರಾಬಾದ್: ಪಶುವೈದ್ಯೆಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ ಆಕೆಯನ್ನು ಸುಟ್ಟು ಕೊಂದ ಬೀಭತ್ಸ ಪ್ರಕರಣ ಜನರ ಮನಸ್ಸಿನಿಂದ ಮಾಸುವ ಮುನ್ನವೇ ತೆಲಂಗಾಣದಲ್ಲಿ ಇನ್ನೊಂದು ಅತ್ಯಾಚಾರ ಪ್ರಕರಣ ವರದಿಯಾಗಿದೆ. ಹೈದರಾಬಾದ್ ನ ಚಂದ್ರಯಾನಗುಟ್ಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.
18 ವರ್ಷದ ಯುವತಿಯನ್ನು ರಿಕ್ಷಾ ಚಾಲಕನೊಬ್ಬ ಅತ್ಯಾಚಾರ ನಡೆಸಿದ್ದಾನೆ ಎಂದು ತಿಳಿದುಬಂದಿದೆ. ದುರಂತವೆಂದರೆ ಈ ಪ್ರಕರಣದಲ್ಲೂ ಯುವತಿಗೆ ಸಹಾಯಮಾಡುವ ನೆಪದಲ್ಲಿ ಆಕೆಯನ್ನು ತನ್ನ ಆಟೋ ರಿಕ್ಷಾದಲ್ಲಿ ಕರೆದುಕೊಂಡು ಹೋದ ಆರೋಪಿ ಚಾಲಕ ಬಳಿಕ ಆಕೆಯನ್ನು ಲಾಡ್ಜ್ ಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾನೆ ಎಂದು ಸಂತ್ರಸ್ತೆ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾಳೆ.
ಯುವತಿಯು ತನ್ನ ಹತ್ತು ವರ್ಷದ ಸಹೋದರಿ ಜೊತೆಯಲ್ಲಿ ಮನೆಗೆ ಮರಳುತ್ತಿದ್ದ ಸಂದರ್ಭದಲ್ಲಿ ಅವರಿಗೆ ದಾರಿತಪ್ಪಿದೆ. ಈ ಸಂದರ್ಭದಲ್ಲಿ ಅಲ್ಲಿಗೆ ಬಂದ ರಿಕ್ಷಾ ಚಾಲಕನೊಬ್ಬ ಅವರಿಗೆ ಸಹಾಯಮಾಡುವ ಭರವಸೆಯನ್ನು ನೀಡುತ್ತಾನೆ. ಬಳಿಕ ಚಾಲಕ ಇವರಿಬ್ಬರನ್ನೂ ನಾಂಪಲ್ಲಿ ಪ್ರದೆಶದಲ್ಲಿರುವ ಲಾಡ್ಜ್ ಒಂದಕ್ಕೆ ಕರೆದೊಯ್ಯುತ್ತಾನೆ. ಇಲ್ಲಿ ಈಕೆಯ ಸಹೋದರಿ ಮಲಗಿದ್ದ ಸಂದರ್ಭದಲ್ಲಿ ಆರೋಪಿಯು ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಯುವತಿ ತನ್ನ ದೂರಿನಲ್ಲಿ ತಿಳಿಸಿದ್ದಾಳೆ.
ಬಳಿಕ ಆರೋಪಿಯು ಇವರಿಬ್ಬರನ್ನೂ ಮಾರನೇ ದಿನ ಮುಂಜಾನೆ ಫಾಲಕ್ನುಮ ರೈಲ್ವೇ ನಿಲ್ದಾಣದ ಹತ್ತಿರ ಇಳಿಸಿ ಹೋಗಿದ್ದಾನೆ. ಈ ನಡುವೆ ತಮ್ಮ ಮಕ್ಕಳು ಕಾಣಿಸುತ್ತಿಲ್ಲ ಎಂದು ಇವರ ಮನೆಯವರು ಪೊಲೀಸ್ ಠಾಣೆಯಲ್ಲಿ ದೂರನ್ನೂ ಸಹ ದಾಖಲಿಸಿದ್ದರು.
ಇದೀಗ ಈ ಘಟನೆಗೆ ಸಂಬಂಧಿಸಿದಂತೆ ದೂರು ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯ ಪತ್ತೆಗೆ ಪ್ರಯತ್ನಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು
H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ
Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ
Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ