7 ಭಾರತೀಯರಲ್ಲಿ ಒಬ್ಬರಿಗೆ ಮಾನಸಿಕ ಅಸ್ವಸ್ಥತೆ!
Team Udayavani, Dec 23, 2019, 11:51 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಹೊಸದಿಲ್ಲಿ: 2017ರಲ್ಲಿ ಅಂದಾಜು ಏಳು ಭಾರತೀಯರಲ್ಲಿ ಒಬ್ಬರು ವಿವಿಧ ತೀವ್ರತೆಯ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದು, ಖಿನ್ನತೆ ಮತ್ತು ಆತಂಕ ಎದುರಿಸುತ್ತಿರುವುದು ಸಾಮಾನ್ಯವಾಗಿದೆ ಎಂದು ಅಧ್ಯಯನವೊಂದು ತಿಳಿಸಿದೆ.
ಲ್ಯಾನ್ಸೆಟ್ ಸೈಕಿಯಾಟ್ರಿಯಲ್ಲಿ ಪ್ರಕಟವಾದ ಅಧ್ಯಯನವು ರಾಜ್ಯ ಮಟ್ಟದಲ್ಲಿ ಖಿನ್ನತೆಯ ಹರಡುವಿಕೆ ಮತ್ತು ಆತ್ಮಹತ್ಯೆ- ಸಾವಿನ ಪ್ರಮಾಣಗಳ ನಡುವೆ ಮಹತ್ವದ ಸಂಬಂಧವಿದೆ ಎಂದು ಹೇಳಿದೆ. ಇದು ಮಹಿಳೆಯರಿಗಿಂತ ಪುರುಷರಲ್ಲಿ ಸ್ವಲ್ಪ ಪ್ರಬಲವಾಗಿದೆ. ಮಾನಸಿಕ ಅಸ್ವಸ್ಥತೆ 1990 ಮತ್ತು 2017ರ ನಡುವೆ ದ್ವಿಗುಣಗೊಂಡಿದೆ ಎಂದಿದೆ.
ಭಾರತದಲ್ಲಿನ ಒಟ್ಟು ರೋಗ ಹೊರೆಗೆ ಮಾನಸಿಕ ಅಸ್ವಸ್ಥತೆಗಳ ಕೊಡುಗೆ 1990ರಲ್ಲಿ ಶೇ. 2.5ರಷ್ಟಿದ್ದು, 2017ರಲ್ಲಿ ಶೇ. 4.7ಕ್ಕೆ ಏರಿಕೆಯಾಗಿದೆ. ಖಿನ್ನತೆ ಮತ್ತು ಆತಂಕದ ಕಾಯಿಲೆಗಳು ಸಾಮಾನ್ಯ ಮಾನಸಿಕ ಅಸ್ವಸ್ಥತೆಗಳಾಗಿ ಬದಲಾಗಿವೆ. ಅವುಗಳ ಹರಡುವಿಕೆಯು ಭಾರತದಾದ್ಯಂತ ಹೆಚ್ಚುತ್ತಿದ್ದು, ದಕ್ಷಿಣ ರಾಜ್ಯಗಳಲ್ಲಿ ಮತ್ತು ಮಹಿಳೆಯರಲ್ಲಿ ಹೆಚ್ಚಾಗಿದೆ.
ಖಿನ್ನತೆಯ ಹರಡುವಿಕೆಯು ವಯಸ್ಸಾದರಲ್ಲಿ ಅತಿ ಹೆಚ್ಚು ಕಂಡು ಬರುತ್ತಿದೆ. ಈ ಮಾನಸಿಕ ಅಸ್ವಸ್ಥತೆಗಳು ರಾಜ್ಯದಿಂದ ರಾಜ್ಯಕ್ಕೆ ವ್ಯತ್ಯಾಸವಾಗುತ್ತಿದ್ದು, ಪ್ರತಿ ರಾಜ್ಯದಲ್ಲಿ ಮಾನಸಿಕ ಆರೋಗ್ಯಕ್ಕಾಗಿ ಹೆಚ್ಚು ನಿರ್ದಿಷ್ಟವಾದ ಆರೋಗ್ಯ ಸೇವೆಗಳ ಅಗತ್ಯವನ್ನು ಹೇಳಿದೆ.
ರಾಜ್ಯಗಳ ನಡುವಿನ ಪ್ರಮುಖ ವ್ಯತ್ಯಾಸಗಳನ್ನು ಈ ವರದಿ ಎತ್ತಿ ತೋರಿಸಿದೆ. ವಯಸ್ಕ ಮಾನಸಿಕ ಅಸ್ವಸ್ಥತೆಗಳ ಹರಡುವಿಕೆಯು ದಕ್ಷಿಣ ರಾಜ್ಯಗಳಲ್ಲಿ ಹೆಚ್ಚಾಗಿದ್ದರೆ, ಬಾಲ್ಯದ ಮಾನಸಿಕ ಅಸ್ವಸ್ಥತೆಗಳು ಉತ್ತರ ರಾಜ್ಯಗಳಲ್ಲಿ ಹೆಚ್ಚಾಗಿ ಕಂಡು ಬರುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Panaji: ಅಪಾಯಕಾರಿ ಮರ ಕಡಿಯಲು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಸೂಚನೆ
Election; ಮೋದಿ ನೇತೃತ್ವದ ‘ನವ ಭಾರತ’ಕ್ಕೆ ಮದರಸಾಗಳ ಅಗತ್ಯವಿಲ್ಲ: ಹಿಮಂತ ಬಿಸ್ವಾ ಶರ್ಮಾ
Air India Express ವಿಮಾನದ ಇಂಜಿನ್ ನಲ್ಲಿ ಬೆಂಕಿ; ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ
Bhadohi; ಯು.ಪಿ ವ್ಯಕ್ತಿಯ ಖಾತೆಗೆ ಬರೋಬ್ಬರಿ 9,900 ಕೋಟಿ ರೂ ಜಮೆ! ಆಗಿದ್ದೇನು?
Jammu and Kashmir ಉಗ್ರ ದಾಳಿ; ಮಾಜಿ ಸರಪಂಚ್ ಸಾವು, ಇಬ್ಬರು ಪ್ರವಾಸಿಗರಿಗೆ ಗಾಯ
MUST WATCH
ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಹೊಸ ಸೇರ್ಪಡೆ
Davanagere; ಭಾರೀ ಮಳೆಗೆ ನೆಲಕಚ್ಚಿದ ಭತ್ತದ ಬೆಳೆ
Breach Of Privacy….; ಐಪಿಎಲ್ ಪ್ರಸಾರಕರ ವಿರುದ್ಧ ರೇಗಾಡಿದ ರೋಹಿತ್ ಶರ್ಮಾ
Rain: ಕಳಸ ತಾಲೂಕಿನಾದ್ಯಂತ ಭಾರೀ ಗಾಳಿ-ಮಳೆ; ಜನಜೀವನ ಅಸ್ತವ್ಯಸ್ತ, ವಿದ್ಯುತ್ ಸಂಪರ್ಕ ಕಡಿತ
Hubli; ರಾಜ್ಯ ಯಾವ ದಿಕ್ಕಿನತ್ತ ಸಾಗುತ್ತಿದೆ…: ಪ್ರದೀಪ ಶೆಟ್ಟರ
Panaji: ಅಪಾಯಕಾರಿ ಮರ ಕಡಿಯಲು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಸೂಚನೆ