ಶಿವರಾತ್ರಿ ಪ್ರಸಾದ ಸೇವಿಸಿ 1500 ಕ್ಕೂ ಹೆಚ್ಚು ಮಂದಿ ಅಸ್ವಸ್ಥ
Team Udayavani, Feb 14, 2018, 10:03 AM IST
ಭೂಪಾಲ್: ಶಿವರಾತ್ರಿ ವೇಳೆ ಪ್ರಸಾದ ರೂಪದಲ್ಲಿ ನೀಡಿದ ಕಿಚಡಿ ಸೇವಿಸಿ ಸಾವಿರಾರು ಮಂದಿ ಅಸ್ವಸ್ಥರಾಗಿ ಆಸ್ಪತ್ರೆಗೆ ತೆರಳಬೇಕಾದ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.
ಬರ್ವಾನಿಯ ಆಶ್ರಮವೊಂದರಲ್ಲಿ ಪ್ರಸಾದವನ್ನು ನೀಡಲಾಗಿದ್ದು ಆ ಬಳಿಕ ಗ್ರಾಮಸ್ಥರಿಗೆ ಹೊಟ್ಟೆ ನೋವು ಮತ್ತು ವಾಂತಿ ಶುರುವಾಗಿದೆ.
ಜಿಲ್ಲಾ ಆಸ್ಪತ್ರೆಯಲ್ಲಿ ಹಲವರಿಗೆ ಚಿಕಿತ್ಸೆ ನೀಡಲಾಗಿದ್ದು ಆರೋಗ್ಯ ಇಲಾಖೆ ಅಸ್ವಸ್ಥರಿಗೆ ಚಿಕಿತ್ಸೆ ನೀಡಲು ವ್ಯವಸ್ಥೆ ಕಲ್ಪಿಸಿದೆ.
ಕೆಲ ಅಸ್ವಸ್ಥರು ಖಾಸಗಿ ಆಸ್ಪತ್ರೆಗಳಿಗೂ ದಾಖಲಾಗಿದ್ದಾರೆ. ಇದುವರೆಗೆ ಯಾವುದೇ ಪ್ರಾಣ ಹಾನಿಯಾಗಿಲ್ಲ ಎಲ್ಲರೂ ಚೇತರಿಸಿಕೊಳ್ಳುತ್ತಿದ್ದು,ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಜಿಲ್ಲಾಧಿಕಾರಿ ತೇಜಸ್ವಿ ಎಸ್ ನಾಯಕ್ ಹೇಳಿದ್ದಾರೆ.