ದೇಶದಲ್ಲಿ 2.7 ಲಕ್ಷ ದಾಟಿದ ಕೋವಿಡ್-19 ಪ್ರಕರಣ: ಮಹಾರಾಷ್ಟ್ರದಲ್ಲಿ 94 ಸಾವಿರ ಸೋಂಕಿತರು
Team Udayavani, Jun 11, 2020, 8:54 AM IST
ಬೆಂಗಳೂರು: ದೆಹಲಿ, ಮುಂಬೈ, ಅಹಮದಾಬಾದ್, ಚೆನ್ನೈ, ಕೊಲ್ಕತ್ತಾ ಮತ್ತು ಬೆಂಗಳೂರಿನ ಆರು ನಗರಗಳಲ್ಲಿ ಕೋವಿಡ್- 19 ಅನ್ನು ಎದುರಿಸಲು ಕೈಗೊಳ್ಳುತ್ತಿರುವ ಸಾರ್ವಜನಿಕ ಆರೋಗ್ಯ ಕ್ರಮಗಳನ್ನು ಪರಿಶೀಲಿಸಲು ಮತ್ತು ರಾಜ್ಯ ಆರೋಗ್ಯ ಅಧಿಕಾರಿಗಳಿಗೆ ಸಹಾಯ ಮಾಡಲು ಕೇಂದ್ರ ತಂಡಗಳನ್ನು ನಿಯೋಜಿಸಲಾಗಿದೆ ಎಂದು ಮಾಧ್ಯಮದ ವರದಿ ತಿಳಿಸಿದೆ.
ಏತನ್ಮಧ್ಯೆ ದೇಶದಲ್ಲಿ ಕೋವಿಡ್ -19 ಸೋಂಕಿನಿಂದ ಚೇತರಿಸಿಕೊಳ್ಳುವವರ ಸಂಖ್ಯೆ , ಸಕ್ರೀಯ ಪ್ರಕರಣಗಳಿಗಿಂತಲೂ ಹೆಚ್ಚಿದೆ ಎಂದ ಆರೋಗ್ಯ ಸಚಿವಾಲಯ ತಿಳಿಸಿದೆ. ಬುಧವಾರ( 10-6-2020) ಒಂದೇ ದಿನ 10,000 ಹೊಸ ಪ್ರಕರಣಗಳು ಕಂಡುಬಂದಿದ್ದು ಒಟ್ಟಾರೆ ಸೋಂಕಿತರ ಪ್ರಮಾಣ 2.7 ಲಕ್ಷ ದಾಟಿದೆ. ಸಾವಿನ ಸಂಖ್ಯೆ ಕೂಡ 7,745 ಕ್ಕೆ ಏರಿದೆ ಎಂದು ಆರೋಗ್ಯ ಸಚಿವಾಲಯದ ಅಂಕಿ ಅಂಶಗಳು ತಿಳಿಸಿವೆ.
ಮುಂಬೈಯಲ್ಲಿ ಕೋವಿಡ್ -19 ಪ್ರಕರಣಗಳು 52,000 ದಾಟಿದ್ದು, ಒಟ್ಟಾರೆ ಮಹಾರಾಷ್ಟ್ರ ರಾಜ್ಯದಲ್ಲಿ 94,000 ಜನರಿಗೆ ವೈರಾಣು ತಗುಲಿದೆ. ಈವರೆಗೂ ಸುಮಾರು 3,438 ಜನರು ಇಲ್ಲಿ ಮೃತರಾಗಿದ್ದಾರೆಂದು ವರದಿಯಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 31,000 ಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗಿವೆ. ಅಹಮದಾಬಾದ್ನಲ್ಲಿ ಸುಮಾರು 15,000 ಪ್ರಕರಣಗಳು ಮತ್ತು ಚೆನ್ನೈನಲ್ಲಿ 22,000 ಪ್ರಕರಣಗಳು ದಾಖಲಾಗಿವೆ.
ಜಾಗತಿಕವಾಗಿ 7 ಮಿಲಿಯನ್ ಜನರಿಗೆ ಈ ಮಹಾಮಾರಿ ಕೋವಿಡ್ ತಗುಲಿದ್ದು, 4 ಲಕ್ಷಕ್ಕಿಂತ ಹೆಚ್ಚು ಜನರು ಮೃತರಾಗಿದ್ದಾರೆ. ಅಮೆರಿಕಾವೊಂದರಲ್ಲೇ 20 ಲಕ್ಷ ಸೋಂಕಿತರಿದ್ದು, 1.15 ಲಕ್ಷ ಜನರು ಮೃತರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ