400ಕ್ಕೂ ಹೆಚ್ಚು ಸುಪ್ರೀಂ ತೀರ್ಪುಗಳ ಭಾಷಾಂತರ; ಕನ್ನಡಕ್ಕೆ ತರ್ಜುಮೆಗೊಂಡಿವೆ 23 ತೀರ್ಪುಗಳು

ಹಿಂದಿ ಭಾಷೆಯದ್ದೇ ಸಿಂಹಪಾಲು, ತಮಿಳಿಗೆ 2ನೇ ಸ್ಥಾನ

Team Udayavani, Jun 14, 2022, 6:55 AM IST

400ಕ್ಕೂ ಹೆಚ್ಚು ಸುಪ್ರೀಂ ತೀರ್ಪುಗಳ ಭಾಷಾಂತರ; ಕನ್ನಡಕ್ಕೆ ತರ್ಜುಮೆಗೊಂಡಿವೆ 23 ತೀರ್ಪುಗಳು

ನವದೆಹಲಿ: ಪ್ರಾದೇಶಿಕ ಭಾಷೆಗಳಲ್ಲೂ ಸುಪ್ರೀಂ ಕೋರ್ಟ್‌ ತೀರ್ಪುಗಳು ಲಭ್ಯವಾಗುವಂತೆ ಮಾಡುವ ನಿಯಮ ಜಾರಿಯಾದ ಬಳಿಕ ಸುಮಾರು 450 ತೀರ್ಪುಗಳು ಕನ್ನಡ ಸೇರಿದಂತೆ ಪ್ರಾದೇಶಿಕ ಭಾಷೆಗಳಿಗೆ ಭಾಷಾಂತರಗೊಂಡಿವೆ.

ಕೃತಕ ಬುದ್ಧಿಮತ್ತೆ(ಎಐ) ಸಾಫ್ಟ್ ವೇರ್‌ ಬಳಸಿಕೊಂಡು ತೀರ್ಪುಗಳನ್ನು ತರ್ಜುಮೆ ಮಾಡಲಾಗಿದೆ.

ಪ್ರಾದೇಶಿಕ ಭಾಷೆಗಳಿಗೆ ಭಾಷಾಂತರಗೊಂಡ ತೀರ್ಪುಗಳ ಪೈಕಿ ಹೆಚ್ಚಿನ ಪಾಲು ಹಿಂದಿಯದ್ದಾಗಿದ್ದರೆ, ಎರಡನೇ ಸ್ಥಾನ ತಮಿಳು ಭಾಷೆಯದ್ದಾಗಿದೆ. 23 ತೀರ್ಪುಗಳನ್ನು ಕನ್ನಡಕ್ಕೆ ಭಾಷಾಂತರ ಮಾಡಲಾಗಿದೆ. 2018ರ ಆಗಸ್ಟ್‌ನಲ್ಲಿ ಈ ನಿಯಮ ಜಾರಿಯಾದ ಬಳಿಕ 469 ತೀರ್ಪುಗಳು ಭಾಷಾಂತರಗೊಂಡಿವೆ.

ನಂತರ ಕೊರೊನಾ ಸೋಂಕು-ಲಾಕ್‌ಡೌನ್‌ ಅವಧಿಯಲ್ಲಿ ಇದು ಸ್ಥಗಿತಗೊಂಡಿತ್ತು. ಈಗ ಮತ್ತೆ ಈ ಕೆಲಸ ಆರಂಭವಾಗಿದೆ ಎಂದು ಸುಪ್ರೀಂ ಕೋರ್ಟ್‌ನ ಅಧಿಕಾರಿಗಳು ತಿಳಿಸಿದ್ದಾರೆ.

469ರ ಪೈಕಿ ಶೇ.86ರಷ್ಟು ತೀರ್ಪುಗಳು ಕೊರೊನಾ ಪೂರ್ವದಲ್ಲೇ ಭಾಷಾಂತರಗೊಂಡಿರುವಂಥದ್ದು. ಇನ್ನು ಹಿಂದಿ ಭಾಷೆಗೆ 243 ತೀರ್ಪುಗಳು ಭಾಷಾಂತರಗೊಂಡರೆ, ತಮಿಳಿಗೆ 70 ತೀರ್ಪುಗಳು ಭಾಷಾಂತರಗೊಂಡಿವೆ. ಕನ್ನಡ, ಮಲಯಾಳಂ, ಮರಾಠಿ, ಒರಿಯಾ, ತೆಲುಗಿನಲ್ಲೂ ಕೆಲವು ಜಡ್ಜ್ ಮೆಂಟ್‌ಗಳು ಪ್ರಕಟವಾಗಿವೆ.

ಇದಲ್ಲದೇ, ಕೆಲವು ತೀರ್ಪುಗಳನ್ನು ಉರ್ದು, ಅಸ್ಸಾಮೀಸ್‌, ಪಂಜಾಬಿ ಮತ್ತು ಒಂದು ತೀರ್ಪನ್ನು ನೇಪಾಳಿ ಭಾಷೆಗೂ ಭಾಷಾಂತರ ಮಾಡಲಾಗಿದೆ.

ಶೇ.90ರಷ್ಟು ನಿಖರತೆ:
9 ಭಾಷೆಗಳಿಗೆ ಭಾಷಾಂತರಗೊಂಡ ತೀರ್ಪುಗಳು ಶೇ.90ರಷ್ಟು ನಿಖರತೆ ಹೊಂದಿದ್ದು, ಸಣ್ಣಪುಟ್ಟ ತಪ್ಪುಗಳು ಕಂಡುಬಂದರೆ ಕೈಯ್ಯಲ್ಲೇ ಅವುಗಳನ್ನು ಸರಿಪಡಿಸಿ, ನಂತರವೇ ಅಪ್‌ಲೋಡ್‌ ಮಾಡಲಾಗುತ್ತಿದೆ. ಕೃತಕ ಬುದ್ಧಿಮತ್ತೆಯ ಸಾಫ್ಟ್ ವೇರ್‌ ಅನ್ನು ಕೆಲವು ಹೈಕೋರ್ಟ್‌ಗಳಿಗೂ ಹಂಚಿಕೆ ಮಾಡಲಾಗಿದೆ ಎಂದೂ ಅಧಿಕಾರಿಗಳು ಹೇಳಿದ್ದಾರೆ.

2017ರಲ್ಲಿ ಕೇರಳ ಹೈಕೋರ್ಟ್‌ನ ವಜ್ರಮಹೋತ್ಸವದಲ್ಲಿ ಮಾತನಾಡಿದ್ದ ರಾಷ್ಟ್ರಪತಿ ಕೋವಿಂದ್‌ ಅವರು, ತೀರ್ಪುಗಳ ಭಾಷಾಂತರವು ಅರ್ಜಿದಾರರಿಗೆ ಲಭ್ಯವಾಗುವಂತೆ ಮಾಡಬೇಕು ಎಂಬ ಸಲಹೆಯನ್ನು ನೀಡಿದ್ದರು. ತದನಂತರ, 2019ರ ಜುಲೈನಲ್ಲಿ ಅಂದಿನ ಸಿಜೆಐ ಆಗಿದ್ದ ನ್ಯಾ.ರಂಜನ್‌ ಗೊಗೋಯ್‌ ಅವರು ಕನ್ನಡ ಸೇರಿದಂತೆ 6 ಪ್ರಾದೇಶಿಕ ಭಾಷೆಗಳಲ್ಲೂ ತೀರ್ಪು ಲಭ್ಯವಾಗುವಂಥ ನಿಯಮ ಜಾರಿಗೆ ತಂದರು.

ಯೋಜನೆ ಆರಂಭವಾಗಿದ್ದು – ಆಗಸ್ಟ್‌ 2018
ಭಾಷಾಂತರಗೊಂಡ ತೀರ್ಪುಗಳು- 469
ಒಟ್ಟು ಎಷ್ಟು ಭಾಷೆಗಳಿಗೆ ಭಾಷಾಂತರ? – 12
ಹಿಂದಿಗೆ ತರ್ಜುಮೆಗೊಂಡ ತೀರ್ಪುಗಳು- 243
ತಮಿಳಿಗೆ ಭಾಷಾಂತರಗೊಂಡಿದ್ದು – 70
ಮಲಯಾಳಂಗೆ – 42
ಮರಾಠಿಗೆ – 25
ಕನ್ನಡ ಮತ್ತು ಒರಿಯಾಗೆ – ತಲಾ 23
ತೆಲುಗಿಗೆ ಭಾಷಾಂತರಗೊಂಡಿದ್ದು- 19

ಟಾಪ್ ನ್ಯೂಸ್

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.