ಕೋವಿಡ್ ಸೋಂಕಿತರಿಗೆ ನೀಡುವ ಆಕ್ಸಿಜನ್ ಸಿಲಿಂಡರ್ ಗಳನ್ನೇ ಕದ್ದು ಪರಾರಿಯಾದ ಆರೋಪಿಗಳು!
Team Udayavani, Apr 21, 2021, 1:21 PM IST
ಮಧ್ಯಪ್ರದೇಶ : ದೇಶದಾದ್ಯಂತ ಕೋವಿಡ್ ಸೋಂಕಿನ ಸಂಖ್ಯೆ ಶರ ವೇಗದಲ್ಲಿ ಹರಡುತ್ತಿದೆ. ಈ ಹಿನ್ನೆಲೆಯಲ್ಲಿ ಸೋಂಕಿತರಿಗೆ ನೀಡಲಾಗುವ ಆಕ್ಸಿಜನ್ ಸಿಲಿಂಡರ್ ಗಳಿಗೆ ಬೇಡಿಕೆ ಹೆಚ್ಚಾಗಿದೆ. ಇದರ ಬೆನ್ನಲ್ಲೇ ಮಧ್ಯ ಪ್ರದೇಶದ ಆಸ್ಪತ್ರೆಗೆ ತರಲಾಗಿದ್ದ ಆಕ್ಸಿಜನ್ ಸಿಲಿಂಡರ್ ಗಳನ್ನು ದುಷ್ಕರ್ಮಿಗಳು ಲೂಟಿ ಮಾಡಿರುವ ಘಟನೆ ಮಂಗಳವಾರ ರಾತ್ರಿ ನಡೆದಿದೆ.
ಇಲ್ಲಿನ ದಾಮೋ ಜಿಲ್ಲೆಯಲ್ಲಿ ಘಟನೆ ನಡೆದಿದ್ದು, ಸರ್ಕಾರಿ ಆಸ್ಪತ್ರೆಗೆ ಆಕ್ಸಿಜನ್ ಸಿಲಿಂಡರ್ ಗಳನ್ನು ತರಲಾಗಿದ್ದು, ದುಷ್ಕರ್ಮಿಗಳು ಅವುಗಳನ್ನ ಲೂಟಿ ಮಾಡಿ ಪರಾರಿಯಾಗಿದ್ದಾರೆ.
ಆಮ್ಲಜನಕ ಸಿಲಿಂಡರ್ ಗಳು ಇದ್ದ ವಾಹನವು ಜಿಲ್ಲಾಸ್ಪತ್ರೆಗೆ ಆಗಮಿಸುತ್ತಿದ್ದಂತೆ ಟ್ರಕ್ ಮೇಲೆ ದಾಳಿ ಮಾಡಿದ ದುಷ್ಕರ್ಮಿಗಳು ಸಿಲಿಂಡರ್ ಗಳನ್ನು ಹೊತ್ತೊಯ್ದಿದ್ದಾರೆ. ಈ ಕುರಿತಂತೆ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
ಪ್ರಕರಣದ ಬಗ್ಗೆ ಸ್ಪಷ್ಟನೆ ನೀಡಿರುವ ದಾಮೋ ಜಿಲ್ಲಾ ವರಿಷ್ಠಾಧಿಕಾರಿಗಳು, ಆಕ್ಸಿಜನ್ ಸಿಲಿಂಡರ್ ಗಳ ಲೂಟಿಯಾಗಿರುವುದು ನಿಜ, ಆದರೆ ಇದರಿಂದ ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಾಗಿಲ್ಲ. ಆಸ್ಪತ್ರೆಯಲ್ಲಿ ಸಾಕಷ್ಟು ಆಕ್ಸಿಜನ್ ಸಿಲಿಂಡರ್ ಗಳು ಇದೆ. ಹೀಗಾಗಿ ರೋಗಿಗಳು ಆತಂಕ ಪಡುವ ಅವ್ಯಕತೆ ಇಲ್ಲ ಎಂದು ಹೇಳಿದ್ದಾರೆ. ಅಲ್ಲದೆ ಆಕ್ಸಿಜನ್ ಸಿಲಿಂಡರ್ ಕದ್ದಿರುವ ಆರೋಪಿಗಳ ವಿರುದ್ಧ ಪೊಲೀಸ್ ದೂರು ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ದೋಮಾ ಜಿಲ್ಲಾಧಿಕಾರಿ, ಆಕ್ಸಿಜನ್ ಟ್ರಕ್ ಬಂದ ಕೂಡಲೇ ದುಷ್ಕರ್ಮಿಗಳು ಸಿಲಿಂಡರ್ ಗಳನ್ನು ಲೂಟಿ ಮಾಡಿದ್ದಾರೆ. ಈ ಬಗ್ಗೆ ಸ್ಥಳೀಯರು ಆರೋಪಿಗಳನ್ನು ಗುರುತಿಸಿದ್ದು, ಈ ಸಂಬಂಧ ಪ್ರಕರಣ ಕೂಡ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ.
MP: Oxygen cylinders looted by some people at Damoh District Hospital last night. District Collector says, “We’ve been told that as soon as Oxygen truck came, people looted cylinders even when the hospital has adequate Oxygen supply. We’re identifying these people & filing cases” pic.twitter.com/K0D2wh6UwC
— ANI (@ANI) April 21, 2021
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
MUST WATCH
ಹೊಸ ಸೇರ್ಪಡೆ
Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ
O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ