ಆಮ್ಲಜನಕದ ಅಭಾವ : ಹರಿದ್ವಾರದಲ್ಲಿ ಐವರು ಸಾವು
Team Udayavani, May 5, 2021, 12:47 PM IST
ಹರಿದ್ವಾರ: ಆಸ್ಪತ್ರೆಗಳಲ್ಲಿ ಆಕ್ಸಿಜನ್ ಕೊರತೆಯುಂಟಾಗಿ ಕೋವಿಡ್ ರೋಗಿಗಳು ಸಾವನ್ನಪ್ಪುತ್ತಿರುವವರ ಸಂಖ್ಯೆ ಮುಂದುವರೆದಿದೆ. ಭಾನುವಾರ ಕರ್ನಾಟಕದಲ್ಲಿ 24 ಜನರು ಕೊನೆಯುಸಿರೆಳೆದ ಘಟನೆ ಮಾಸುವ ಮುನ್ನವೇ ಇದೀಗ ಹರಿದ್ವಾರದಲ್ಲಿ ಮತ್ತೊಂದು ಅಂತಹದೇ ಘಟನೆ ನಡೆದಿದೆ.
ಆಮ್ಲಜನಕ ಪೂರೈಕೆಯಲ್ಲಿ ವ್ಯತ್ಯಯವಾಗಿದ್ದರಿಂದ ಐವರು ಕೋವಿಡ್–19 ರೋಗಿಗಳು ಸಾವಿಗೀಡಾಗಿರುವ ಘಟನೆ ಹರಿದ್ವಾರ ಜಿಲ್ಲೆಯ ರೂರ್ಕಿಯ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ಬೆಳಗಿನ ಜಾವ ನಡೆದಿದೆ.
ಒಬ್ಬ ರೋಗಿಗೆ ವೆಂಟಿಲೇಟರ್ ನೀಡಲಾಗಿತ್ತು. ಉಳಿದ ನಾಲ್ವರು ಆಮ್ಲಜನಕ ಸೌಲಭ್ಯ ಹೊಂದಿದ್ದ ಹಾಸಿಗೆಯಲ್ಲಿದ್ದರು ಎಂದು ವೈದ್ಯರೊಬ್ಬರು ತಿಳಿಸಿದ್ದಾರೆ.
ಪ್ರಕರಣದ ಕುರಿತು ತನಿಖೆಗೆ ಆದೇಶಿಸಲಾಗಿದೆ. ಜತೆಗೆ, ಆಸ್ಪತ್ರೆಯಲ್ಲಿನ ವೈದ್ಯಕೀಯ ಸೌಲಭ್ಯಗಳ ಕುರಿತು ಪರಿಶೀಲನೆ ಕೈಗೊಳ್ಳಲು ರೂರ್ಕಿಯ ಸರ್ಕಾರಿ ಆಸ್ಪತ್ರೆಯ ಮುಖ್ಯ ವೈದ್ಯಕೀಯ ಅಧೀಕ್ಷರ ನೇತೃತ್ವದಲ್ಲಿ ತಂಡ ರಚಿಸಲಾಗಿದೆ. ಒಂದು ವಾರದಲ್ಲಿ ಈ ತಂಡ ವರದಿ ನೀಡಲಿದೆ ಎಂದು ಹರಿದ್ವಾರ ಜಿಲ್ಲಾಧಿಕಾರಿ ಸಿ. ರವಿಶಂಕರ್ ತಿಳಿಸಿದ್ದಾರೆ. ಈ ಘಟನೆಗೆ ಹೊಣೆಯಾದವರ ವಿರುದ್ಧ ಕಾನೂನು ಕ್ರಮಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.
ಇನ್ನು ದೇಶದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಇದರ ಜೊತೆಗೆ ಆಕ್ಸಿಜನ್ ಸಹಿತ ಬೆಡ್ಗಳ ಕೊರತೆ ಕೂಡ ಎದುರಾಗಿದೆ. ಆಮ್ಲಜನಕದ ಅಭಾವದಿಂದ ಈಗಾಗಲೇ ಸಾಕಷ್ಟು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಸಾವುಗಳು ಸಂಭವಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ
Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
ಧ್ರುವ್ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್ ಪೋಸ್ಟ್ನ ಸತ್ಯಾಸತ್ಯತೆ ಏನು?
ಇನ್ಸ್ಟಾ ಪ್ರೊಫೈಲ್ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..
MUST WATCH
ಹೊಸ ಸೇರ್ಪಡೆ
Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್ಗೆ ಮತಹಾಕಲಿ: ಯೋಗೇಂದ್ರ ಯಾದವ್
Manipal ಆಸ್ಪತ್ರೆಯ ಡಾ.ರಾಮದಾಸ್ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್ ಸೇವೆ ಆರಂಭ
ರಜಿನಿಕಾಂತ್ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್ ನೋಟಿಸ್ ಕಳುಹಿಸಿದ ಇಳಯರಾಜ
Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ
ಅಯ್ಯೋ ಬಿಸಿಲು! ಕರಾವಳಿಯಲ್ಲಿ ಮಣ್ಣಿನ ತೇವಾಂಶ ಕಡಿಮೆ: ನೀರಿಲ್ಲ, ಫಸಲಿಲ್ಲ