ಕೋಲ್ಕತಾ : ಹೈಕೋರ್ಟ್ ಆವರಣದಲ್ಲಿ ವಕೀಲರಿಂದ ಚಿದಂಬರಂ ಗೆ ಘೇರಾವ್!
ಕಾಂಗ್ರೆಸ್ನ ಅವನತಿಗೆ ಈ ರೀತಿಯ ನಾಯಕತ್ವ ಕಾರಣ ಎಂದು ಘೋಷಣೆ...!
Team Udayavani, May 4, 2022, 9:21 PM IST
ಕೋಲ್ಕತಾ : ಹಿರಿಯ ಕಾಂಗ್ರೆಸ್ ನಾಯಕ ಮತ್ತು ಹಿರಿಯ ವಕೀಲ ಪಿ ಚಿದಂಬರಂ ಅವರು ಬುಧವಾರ ಕಲ್ಕತ್ತಾ ಹೈಕೋರ್ಟ್ನಲ್ಲಿ ವಕೀಲರು ಮತ್ತು ಪಕ್ಷದ ಬೆಂಬಲಿಗರಿಂದ ಪ್ರತಿಭಟನೆಯನ್ನು ಎದುರಿಸಬೇಕಾಯಿತು.
ಪಶ್ಚಿಮ ಬಂಗಾಳ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ವಿರುದ್ಧದ ಮೆಟ್ರೋ ಡೈರಿ ಪ್ರಕರಣದಲ್ಲಿ ಪಶ್ಚಿಮ ಬಂಗಾಳ ಸರ್ಕಾರವನ್ನು ಪ್ರತಿನಿಧಿಸಲು ಚಿದಂಬರಂ ನ್ಯಾಯಾಲಯಕ್ಕೆ ಬಂದಿದ್ದರು. ಈ ವೇಳೆ ಘಟನೆ ನಡೆದಿದೆ. ನ್ಯಾಯಾಲಯದಲ್ಲಿ ಬಂಗಾಳ ಸರ್ಕಾರದ ಕ್ರಮವನ್ನು ಸಮರ್ಥಿಸಿಕೊಂಡ ನಂತರ ಪಿ ಚಿದಂಬರಂ ಅವರಿಗೆ ಘೇರಾವ್ ಹಾಕಲಾಗಿದೆ.
ಪ್ರಶ್ನಾರ್ಹ ಪ್ರಕರಣವನ್ನು ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ಅಧೀರ್ ಚೌಧರಿ ಅವರು ಪ್ರಾರಂಭಿಸಿದ್ದು, ಅವರು ತೃಣಮೂಲ ಕಾಂಗ್ರೆಸ್ ಸರ್ಕಾರವು ಮೆಟ್ರೋ ಡೈರಿ ಷೇರುಗಳನ್ನು ಕೃಷಿ-ಸಂಸ್ಕರಣಾ ಸಂಸ್ಥೆ ಕೆವೆಂಟರ್ಗೆ ಮಾರಾಟ ಮಾಡುವುದನ್ನು ಪ್ರಶ್ನಿಸಿದ್ದರು.
ಪ್ರತಿಭಟನಾಕಾರರು, ಕಾಂಗ್ರೆಸ್ ಬೆಂಬಲಿಸುವುದಾಗಿ ಹೇಳಿಕೊಂಡ ವಕೀಲರಾಗಿದ್ದು, ಚಿದಂಬರಂ “ಪಕ್ಷದ ಭಾವನೆಗಳೊಂದಿಗೆ ಆಟವಾಡುತ್ತಿದ್ದಾರೆ” ಎಂದು ಆಕ್ರೋಶ ಹೊರ ಹಾಕಿದರು.
ಘಟನೆಯ ವಿಡಿಯೋಗಳಲ್ಲಿ ಚಿದಂಬರಂ ಅವರನ್ನು ಹಿಂಬಾಲಿಸುವ ವಕೀಲರು, ”ಕಾಂಗ್ರೆಸ್ನ ಅವನತಿಗೆ ಈ ರೀತಿಯ ನಾಯಕತ್ವವು ಜವಾಬ್ದಾರವಾಗಿದೆ” ಎಂದು ಟೀಕಿಸಿದ್ದು, ”ಚಿದಂಬರಂ ಗೋ ಬ್ಯಾಕ್” ಎಂಬ ಘೋಷಣೆಗಳೂ ಕೇಳಿಬಂದಿವೆ.
#WATCH | Congress leader & advocate P Chidambaram faced protest by lawyers of Congress Cell at Calcutta HC where he was present in connection with a legal matter. They shouted slogans, showed him black robes & called him a TMC sympathiser & responsible for party’s poor show in WB pic.twitter.com/SlH4QgbJSn
— ANI (@ANI) May 4, 2022
“ಇದು ಸ್ವತಂತ್ರ ದೇಶ. ನಾನು ಈ ಬಗ್ಗೆ ಪ್ರತಿಕ್ರಿಯಿಸುವುದಿಲ್ಲ. ನಾನು ಇದರ ಬಗ್ಗೆ ಏಕೆ ಪ್ರತಿಕ್ರಿಯಿಸಬೇಕು?” ಎಂದು ಚಿದಂಬರಂ ಪಿಟಿಐಗೆ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Smriti ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್ ಗೆ ಬಿಜೆಪಿ ತಿರುಗೇಟು
Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ
Lok Sabha Election: ಬೃಜ್ ಭೂಷಣ್ ಸಿಂಗ್ ಬದಲಿಗೆ ಪುತ್ರನಿಗೆ ಟಿಕೆಟ್ ನೀಡಿದ ಬಿಜೆಪಿ
ಕಾಂಗ್ರೆಸ್ನಿಂದ ಮತ ಬ್ಯಾಂಕ್ ರಾಜಕಾರಣ; ನೇಹಾ ಹತ್ಯೆ ಲವ್ ಜೆಹಾದ್:ಅಮಿತ್ ಶಾ ಆರೋಪ
ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!
MUST WATCH
ಹೊಸ ಸೇರ್ಪಡೆ
Vijayapura ಮರ್ಯಾದಾ ಹತ್ಯೆ: ಇಬ್ಬರಿಗೆ ಗಲ್ಲು,ಐವರಿಗೆ ಜೀವಾವಧಿ ಶಿಕ್ಷೆ
Dharwad; ವಾರಂಟಿ ಇಲ್ಲದ ಕಾಂಗ್ರೆಸ್ ನ ಗ್ಯಾರಂಟಿ ನಂಬಬೇಡಿ: ಅಣ್ಣಾಮಲೈ
Shobha Karandlaje; 60 ವರ್ಷ ದೇಶವನ್ನಾಳಿದ ಕಾಂಗ್ರೆಸ್ಗೆ ಪ್ರಧಾನಿ ಅಭ್ಯರ್ಥಿ ಸಿಗ್ತಿಲ್ಲ
Honnavar; ಖಾಸಗಿ ಬಸ್ ಪಲ್ಟಿ: 2 ಸಾವು, 45ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ
Yellapur: ಟಿಪ್ಪರ್ ಗೆ ಢಿಕ್ಕಿಯಾಗಿ ಬೈಕ್ ಸಹಸವಾರೆ ಬಾಲಕಿ ಮೃತ್ಯು