ಪ.ಬಂಗಾಳದಲ್ಲಿ ಮೇಲ್ವರ್ಗದ ಮೀಸಲು
Team Udayavani, Jul 4, 2019, 5:06 AM IST
ಕೋಲ್ಕತಾ: ಆರ್ಥಿಕವಾಗಿ ಹಿಂದುಳಿದ ಮೇಲ್ವರ್ಗದವರಿಗೆ ಕೇಂದ್ರ ಸರ್ಕಾರ ರೂಪಿಸಿದ ಶೇ. 10 ಮೀಸಲು ವ್ಯವಸ್ಥೆಯನ್ನು ವಿರೋಧಿಸಿದ್ದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಈಗ ಅದೇ, ನೀತಿಯನ್ನು ಜಾರಿಗೊಳಿಸಿದ್ದಾರೆ. ಈ ಮೂಲಕ ಈ ನೀತಿಯನ್ನು ಅಳವಡಿಸಿಕೊಂಡ ನಾಲ್ಕನೆಯ ರಾಜ್ಯವಾಗಿದೆ. ಈ ಹಿಂದೆ ತಮಿಳುನಾಡು, ಮಹಾರಾಷ್ಟ್ರ ಮತ್ತು ತೆಲಂಗಾಣ ರಾಜ್ಯಗಳು ಈ ನೀತಿಯನ್ನು ಅಳವಡಿಸಿಕೊಂಡಿವೆ. ನರೇಂದ್ರ ಮೋದಿ ಸರ್ಕಾರ ಚುನಾವಣೆ ಸಮಯದಲ್ಲಿ ಈ ಕಾನೂನು ಜಾರಿಗೊಳಿಸುವ ಮೂಲಕ ಜನರನ್ನು ತಪ್ಪುದಾರಿಗೆ ಎಳೆಯುತ್ತಿದೆ ಎಂದು ಮಮತಾ ಆಕ್ಷೇಪಿಸಿದ್ದರು.
ಪಶ್ಚಿಮ ಬಂಗಾಳದಲ್ಲಿ ಈವರೆಗೆ ಪರಿಶಿಷ್ಟ ಜಾತಿಗೆ ಶೇ. 22, ಪರಿಶಿಷ್ಟ ಪಂಗಡಕ್ಕೆ ಶೇ. 6 ಹಾಗೂ ಇತರ ಹಿಂದುಳಿದ ವರ್ಗಗಳಿಗೆ ಶೇ. 17 ಮೀಸಲಾತಿ ಜಾರಿಯಲ್ಲಿದೆ. ಹೊಸ ವ್ಯವಸ್ಥೆ ಜಾರಿಗೊಳಿಸುವುದರಿಂದಾಗಿ ಒಟ್ಟು ರಾಜ್ಯದ ಮೀಸಲು ಪ್ರಮಾಣ ಶೇ. 50ಕ್ಕಿಂತ ಹೆಚ್ಚಾಗಲಿದೆ. ಸುಪ್ರೀಂ ತೀರ್ಪಿನ ಪ್ರಕಾರ ಮೀಸಲು ಶೇ. 50 ಕ್ಕಿಂತ ಕಡಿಮೆ ಇರಬೇಕು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Brahmos; ಫಿಲಿಪ್ಪೀನ್ಸ್ಗೆ ಬ್ರಹ್ಮೋಸ್: ಭಾರತದ ಮೊದಲ ರಫ್ತು
EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು