ಪಟಾಕಿ ನಿಷೇಧಕ್ಕೆ ಕೋಮು ಬಣ್ಣ ಹಚ್ಚಬೇಡಿ: ಸುಪ್ರೀಂ ಖೇದ
Team Udayavani, Oct 13, 2017, 1:28 PM IST
ಹೊಸದಿಲ್ಲಿ: ರಾಷ್ಟ್ರ ರಾಜಧಾನಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ದೀಪಾವಳಿ ವೇಳೆ ಪಟಾಕಿ ಸಿಡಿಸುವುಕ್ಕೆ ನಿಷೇಧ ಹೇರಿರುವುದಕ್ಕೆ ಕೋಮು ಬಣ್ಣ ನೀಡಿರುವುದು ತೀವ್ರ ನೋವು ಮತ್ತು ದುಃಖ ತಂದಿದೆ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಖೇದ ವ್ಯಕ್ತಪಡಿಸಿದೆ.
‘ಪಟಾಕಿ ನಿಷೇಧದ ಕುರಿತಾಗಿನ ತೀರ್ಪನ್ನು ಯಾರೂ ಕೋಮು ದೃಷ್ಟಿಯಿಂದ ನೋಡಬೇಡಿ, ಧಾರ್ಮಿಕ ವಿಚಾರಗಳನ್ನು ಮುಂದಿಟ್ಟು ಟೀಕೆ ಮಾಡಬೇಡಿ’ ಎಂದು ಕೋರ್ಟ್ ಹೇಳಿದೆ.
ರಾಷ್ಟ್ರ ರಾಜಧಾನಿಯಲ್ಲಿ ಪಟಾಕಿ ಮಾರಾಟ ಮಾಡದಂತೆ ಪೊಲೀಸರು ನಿಗಾ ವಹಿಸಬೇಕು ಎಂದು ಇದೇ ವೇಳೆ ಕೋರ್ಟ್ ಸೂಚನೆ ನೀಡಿದೆ.
ನವೆಂಬರ್ 1 ರ ವರೆಗೆ ಪಟಾಕಿಗಳನ್ನು ಮಾರಾಟಮಾಡುವಂತಿಲ್ಲ ಎಂದು ನಿಷೇಧ ಹೇರಿ ಕೋರ್ಟ್ ತೀರ್ಪು ನೀಡಿತ್ತು. ಗುರುವಾರ ವ್ಯಾಪಾರಿಗಳು ಪಟಾಕಿ ನಿಷೇಧವನ್ನು ತೆರವುಗೊಳಿಸಬೇಕೆಂದು ಕೋರಿ ಅರ್ಜಿ ಸಲ್ಲಿಸಿದ್ದರು.
ಕೋರ್ಟ್ ಪಟಾಕಿ ಮಾರಟಕ್ಕಾಗಿ ಪೊಲೀಸರಿಂದ ಮಡೆದಿರುವ ಅನುಮತಿಗಳನ್ನು ತಕ್ಷಣವೇ ರದ್ದು ಮಾಡಬೇಕು ಎಂದು ಸೆಪ್ಟೆಂಬರ್ 12 ರಂದು ತೀರ್ಪು ನೀಡಿತ್ತು.
2005 ರಲ್ಲೇ ಸುಪ್ರೀಂ ಕೋರ್ಟ್ ದೆಹಲಿಯಲ್ಲಿ ಭಾರಿ ಸದ್ದಿನ ಪಟಾಕಿಗಳನ್ನು ರಾತ್ರಿ 10 ಗಂಟೆಯಿಂದ ಬೆಳಗ್ಗೆ 6 ಗಂಟೆಯ ವರೆಗೆ ಸಿಡಿಸಲು ನಿಷೇಧ ಹೇರಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
MUST WATCH
ಹೊಸ ಸೇರ್ಪಡೆ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ