ಪಾಕ್ ಸಂಚು ವಿಫಲ
ಅಮರನಾಥ ಯಾತ್ರಿಕರೇ ಟಾರ್ಗೆಟ್ , ವಾಪಸಾಗಲು ಸೂಚನೆ, ಭಾರೀ ಶಸ್ತ್ರಾಸ್ತ್ರಗಳ ವಶ ; ಜಮ್ಮು ಕಾಶ್ಮೀರದಲ್ಲಿ ಹೈ ಅಲರ್ಟ್
Team Udayavani, Aug 3, 2019, 6:00 AM IST
ನವದೆಹಲಿ: ಶಾಂತಿಯುತವಾಗಿ ಸಾಗುತ್ತಿದ್ದ ಅಮರನಾಥ ಯಾತ್ರೆಯ ಮೇಲೆ ಮತ್ತೆ ಉಗ್ರರ ಕೆಂಗಣ್ಣು ಬಿದ್ದಿದೆ. ಯಾತ್ರಿಕ ರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲು ಪಾಕಿಸ್ತಾನ ಮೂಲದ ಉಗ್ರರು ಸಂಚು ರೂಪಿಸಿದ್ದ ಆಘಾತಕಾರಿ ವಿಚಾರವು ಬಹಿರಂಗಗೊಂಡಿದೆ. ಆದರೆ, ಭದ್ರತಾ ಪಡೆಗಳ ಸಮಯಪ್ರಜ್ಞೆ ಹಾಗೂ ಹದ್ದಿನ ಕಣ್ಣಿನಿಂದಾಗಿ ಉಗ್ರರು ಯೋಜಿಸಿದ್ದ ಅತಿದೊಡ್ಡ ವಿಧ್ವಂಸಕ ಕೃತ್ಯವೊಂದು ವಿಫಲವಾಗಿದೆ.
ಅಮರನಾಥ ಯಾತ್ರೆ ಸಾಗುವ ಮಾರ್ಗದಲ್ಲಿ ಶುಕ್ರವಾರ ಪಾಕಿಸ್ತಾನ ನಿರ್ಮಿತ ಬಾಂಬ್ಗಳು, ಸ್ನೈಪರ್ ರೈಫಲ್ ಹಾಗೂ ಇನ್ನಿತರೆ ಸ್ಫೋಟಕಗಳು ಪತ್ತೆಯಾಗಿವೆ. ಈ ವಿಷಯ ಬಹಿರಂಗವಾಗುತ್ತಿದ್ದಂತೆ, ಸೇನೆ ಮತ್ತಷ್ಟು ಅಲರ್ಟ್ ಆಗಿದೆ. ಜತೆಗೆ, ಅಮರನಾಥ ಯಾತ್ರೆಯನ್ನು ಸದ್ಯಕ್ಕೆ ಸ್ಥಗಿತಗೊಳಿಸ ಲಾಗಿದ್ದು, ಎಲ್ಲರೂ ಕೂಡಲೇ ಜಮ್ಮು-ಕಾಶ್ಮೀರದಿಂದ ವಾಪಸಾಗಿ ಎಂದು ಯಾತ್ರಾರ್ಥಿಗಳಿಗೆ ಜಮ್ಮು-ಕಾಶ್ಮೀರ ಪ್ರಧಾನ ಕಾರ್ಯದರ್ಶಿ(ಗೃಹ) ಸೂಚಿಸಿದ್ದಾರೆ.
ಎಲ್ಲ ಯಾತ್ರಿಗಳು ಹಾಗೂ ಪ್ರವಾಸಿಗರು ತಮ್ಮ ಪ್ರವಾಸವನ್ನು ಮೊಟಕುಗೊಳಿಸಿ, ತಮ್ಮ ತಮ್ಮ ಊರಿಗೆ ವಾಪಸಾಗಬೇಕು. ಆದಷ್ಟು ಬೇಗ ಕಣಿವೆ ರಾಜ್ಯವನ್ನು ತೊರೆಯಬೇಕು ಎಂದು ಸರ್ಕಾರ ಸೂಚಿಸಿದೆ. ಯಾತ್ರಿಕರು ಮತ್ತು ಪ್ರವಾಸಿಗರ ಸುರಕ್ಷತೆ ಹಾಗೂ ಭದ್ರತೆಯ ದೃಷ್ಟಿಯಿಂದ ಈ ಸೂಚನೆ ನೀಡಲಾಗಿದೆ ಎಂದೂ ಹೇಳಲಾಗಿದೆ. ಜುಲೈ1ರಿಂದ ಆರಂಭವಾಗಿರುವ ಅಮರನಾಥ ಯಾತ್ರೆಯು ಆಗಸ್ಟ್ 15ರಂದು ಕೊನೆಗೊಳ್ಳಲಿದೆ.
3 ದಿನಗಳಿಂದ ನಡೆದಿತ್ತು ಕಾರ್ಯಾಚರಣೆ
ಪಾಕ್ ಸಂಚು ಕುರಿತು ಸುದ್ದಿಗೋಷ್ಠಿ ಯಲ್ಲಿ ವಿವರ ನೀಡಿದ ಸೇನೆಯ 15 ಕಾರ್ಪ್ಸ್ನ ಜನರಲ್ ಆಫೀಸರ್ ಕಮಾಂಡಿಂಗ್ ಆಗಿರುವ ಲೆ.ಜ. ಕೆಜೆಎಸ್ ಧಿಲ್ಲಾನ್, ‘ಪಾಕ್ ಸೇನೆಯ ನೇತೃತ್ವದಲ್ಲೇ ಉಗ್ರರು ಅಮರನಾಥ ಯಾತ್ರಿಕರನ್ನು ಗುರಿಯಾಗಿಸಿ ದಾಳಿ ನಡೆಸಲು ಸಂಚು ರೂಪಿಸುತ್ತಿದ್ದಾರೆ ಎಂದು ಗುಪ್ತಚರ ವರದಿಗಳು ಬಂದಿದ್ದವು. ಹೀಗಾಗಿ, ಕಳೆದ 3-4 ದಿನಗಳಿಂದಲೂ ಭದ್ರತಾ ಪಡೆ ಕಾರ್ಯಾಚರಣೆಗಿಳಿದಿತ್ತು. ಅಮರನಾಥ ಯಾತ್ರೆಯ ಬಲ್ತಾಲ್ ಹಾಗೂ ಪಹಲ್ಗಾಮ್ ಹಾದಿಯಲ್ಲಿ ತೀವ್ರ ಶೋಧ ಕಾರ್ಯ ನಡೆಸಲಾಗಿತ್ತು. ಈ ವೇಳೆ, ಕೆಲವು ಸುಧಾರಿತ ಸ್ಫೋಟಕಗಳು ದೊರೆತಿದ್ದು ಅವುಗಳನ್ನು ನಿಷ್ಕ್ರಿಯ ಗೊಳಿಸಲಾಗಿದೆ. ಇದಲ್ಲದೆ, ಅಮೆರಿಕ ನಿರ್ಮಿತ ಎಂ-24 ಸ್ನೈಪರ್ ರೈಫಲ್, ಪಾಕಿಸ್ತಾನದ ಶಸ್ತ್ರಾಸ್ತ್ರ ತಯಾರಿಕಾ ಫ್ಯಾಕ್ಟರಿಯ ಮುದ್ರೆಯಿರುವಂಥ ನೆಲಬಾಂಬ್ಗಳು ಸೇರಿದಂತೆ ಹಲವು ಶಸ್ತ್ರಾಸ್ತ್ರಗಳು ಪತ್ತೆಯಾಗಿವೆ’ ಎಂದಿದ್ದಾರೆ.
ಪಾಕಿಸ್ತಾನ ಕೈವಾಡ ಸ್ಪಷ್ಟ
ಸಿಕ್ಕಿರುವ ಶಸ್ತ್ರಾಸ್ತ್ರಗಳಿಂದಲೇ ಕಾಶ್ಮೀರದ ಭಯೋತ್ಪಾ ದನೆಯಲ್ಲಿ ಪಾಕಿಸ್ತಾನದ ಕೈವಾಡವಿರುವುದು ಸ್ಪಷ್ಟ ವಾಗಿದೆ ಎಂದು ಲೆ.ಜ. ಧಿಲ್ಲಾನ್ ಹೇಳಿದ್ದಾರೆ. ಪಾಕ್ ಸೇನೆ ಕಾಶ್ಮೀರ ಕಣಿವೆಯಲ್ಲಿ ಶಾಂತಿಗೆ ಧಕ್ಕೆ ತರಲು ಉತ್ಸುಕ ವಾಗಿದೆ ಎಂದಿದ್ದಾರೆ. ಆದರೆ ಪಾಕಿಸ್ತಾನದ ಕುತಂತ್ರಗಳು ಸಫಲವಾಗಲು ನಾವು ಯಾವ ಕಾರಣಕ್ಕೂ ಬಿಡುವುದಿಲ್ಲ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು
H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ
Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ
Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ