ಹಬ್ಬದ ವೇಳೆ ಹಿಂದೂಗಳ ಮೇಲೆ ದಾಳಿಗೆ ಪಾಕ್ ಸಂಚು
Team Udayavani, Oct 15, 2020, 8:02 AM IST
ಹೊಸದಿಲ್ಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಹಿಂದೂಗಳು ವಾಸಿಸುವ ಪ್ರದೇಶಗಳ ಮೇಲೆ ದಾಳಿ ನಡೆಸಲು ಪಾಕಿಸ್ಥಾನದ ಐಎಸ್ಐ ಸಿದ್ಧತೆ ನಡೆಸುತ್ತಿದೆ. ಶೀಘ್ರದಲ್ಲಿಯೇ ಶುರುವಾಗುವ ಸರಣಿ ಹಬ್ಬಗಳ ಸಂದರ್ಭಗಳಲ್ಲಿಯೇ ದಾಳಿ, ನಡೆಸಿ ಕೋಮುಗಳ ನಡುವೆ ವೈಷಮ್ಯ ಸೃಷ್ಟಿಸಲು ಪ್ರಯತ್ನಿಸುತ್ತಿದೆ. ಅದಕ್ಕಾಗಿ ಹಲವಾರು ಮಂದಿಗೆ ತರಬೇತಿ ನೀಡುತ್ತಿದೆ ಎಂದು ಗುಪ್ತಚರ ಮೂಲಗಳನ್ನು ಉಲ್ಲೇಖೀಸಿ “ಟೈಮ್ಸ್ ನೌ’ ಸುದ್ದಿ ವಾಹಿನಿ ವರದಿ ಮಾಡಿದೆ.
ಅದಕ್ಕಾಗಿ ಪಾಕಿಸ್ಥಾನ ಆಕ್ರಮಿತ ಕಾಶ್ಮೀರದ ಮುಜಫ್ಫರಾಬಾದ್ ನಲ್ಲಿ, ಅಲ್ ಬದ್ರ್ ಮತ್ತು ಜೈಶ್- ಎ- ಮೊಹಮ್ಮದ್ ಉಗ್ರರಿಗೆ ಐಎಸ್ಐ ಇದಕ್ಕಾಗಿಯೇ ತರಬೇತಿ ನೀಡುತ್ತಿದೆ ಎಂದು ವರದಿಯಲ್ಲಿ ಹೇಳಿ ಕೊಳ್ಳಲಾಗಿದೆ.
ಈ ತಿಂಗಳಲ್ಲಿ ಎರಡು ಬಾರಿ, ಪಾಕಿಸ್ಥಾನದ ಉಗ್ರಸಂಘಟನೆಗಳು ಗಡಿ ಮೂಲಕ ದೇಶದೊಳಕ್ಕೆ ನುಸುಳಲು ಮಾಡಿದ ಯತ್ನಗಳನ್ನು ಭಾರತೀಯ ಸೇನೆ ವಿಫಲ ಮಾಡಿದೆ. ಉತ್ತರ ಕಾಶ್ಮೀರದ ತಂಗ್ಧರ್ ವಲಯದಲ್ಲಿ ನಿಯೋಜಿಸಲ್ಪಟ್ಟಿರುವ ಭಾರತೀಯ ಸೇನೆಯ ಕಣ್ಗಾವಲು ಪಡೆ, ಒಳ ನುಸುಳುವಿಕೆ ಯತ್ನವನ್ನು ತಡೆದು, 5 ಪಿಸ್ತೂಲುಗಳು, 10 ಮದ್ದುಗುಂಡು ಕೋಶಗಳು, 138 ಸುತ್ತು ಮದ್ದುಗುಂಡುಗಳನ್ನು ವಶಪಡಿಸಿ ಕೊಂಡಿತ್ತು.
ಇದನ್ನೂ ಓದಿ:ಚೀನ ಅಧ್ಯಕ್ಷರ ಯುದ್ಧ ವ್ಯಾಮೋಹ ಬಯಲು!
ಪಾಕ್ ಸಭೆ: ಒಂದು ಕಡೆ ಭಾರತದ ಮೇಲೆ ದಾಳಿ ನಡೆಸಲು ಹುನ್ನಾರ ಮಾಡುತ್ತಲೇ, ಮತ್ತೂಂದು ಕಡೆ ಅಕ್ರಮ ಹಣ ಸಾಗಣೆ, ಭಯೋತ್ಪಾದಕರಿಗೆ ಹಣಕಾಸಿನ ನೆರವು ನಿಗ್ರಹಿಸಲು ಅ.21ರಿಂದ 23ರ ವರೆಗೆ ಪಾಕಿಸ್ಥಾನ ಸಭೆ ನಡೆಸಲಿದೆ. ಪಾಕಿಸ್ಥಾನ ಉಗ್ರರನ್ನು ಸಾಕಲು ಹಣಕಾಸಿನ ನೆರವು ನೀಡುತ್ತಿದೆ ಎಂದು ಭಾರತ ಸಾಕ್ಷಿ ಸಮೇತ ಸಾಬೀತು ಮಾಡಿದ ಹಿನ್ನೆಲೆಯಲ್ಲಿ, ಇದರ ವಿರುದ್ಧ ಕ್ರಮ ಕೈಗೊಳ್ಳಲು ಪಾಕಿಸ್ಥಾನಕ್ಕೆ ವಿಶ್ವಸಂಸ್ಥೆ ತಾಕೀತು ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್