ಮೋದಿ ಜತೆ ಪಾಕ್ ಅಧಿಕೃತ ಹೊಂದಾಣಿಕೆ, ಅವರಿಗೆ ಮತ ಹಾಕಿದರೆ ಪಾಕಿಗೆ ಮತ : ಕಾಂಗ್ರೆಸ್
Team Udayavani, Apr 10, 2019, 12:13 PM IST
ಹೊಸದಿಲ್ಲಿ : ‘ಮಾಧ್ಯಮ ವರದಿಯೊಂದರ ಪ್ರಕಾರ ಪಾಕಿಸ್ಥಾನವು ಪ್ರಧಾನಿ ನರೇಂದ್ರ ಮೋದಿ ಅವರ ಜತೆಗೆ ಹೊಂದಾಣಿಕೆ ಮಾಡಿಕೊಂಡಿದೆ; ಅಂತಿರುವಾಗ ಮೋದಿಗೆ ಓಟ್ ಹಾಕಿದರೆ ಪಾಕಿಸ್ಥಾನಕ್ಕೆ ಓಟ್ ಹಾಕಿದ ಹಾಗೆ ಅಗುತ್ತದೆ’ ಎಂದು ಕಾಂಗ್ರೆಸ್ ಇಂದು ಬುಧವಾರ ಆರೋಪಿಸಿದೆ.
‘ಮೋದಿ ಅವರ ಭಾರತೀಯ ಜನತಾ ಪಕ್ಷ 2019ರ ಲೋಕಸಭಾ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೆ ಬಂದರೆ ಭಾರತದೊಂದಿಗೆ ಶಾಂತಿ ಮಾತುಕತೆಗೆ ಉತ್ತಮ ಅವಕಾಶ ಒದಗುತ್ತದೆ ಮತ್ತು ಕಾಶ್ಮೀರ ಪ್ರಶ್ನೆಯನ್ನು ಇತ್ಯರ್ಥ ಮಾಡುವುದಕ್ಕೆ ಸಾಧ್ಯವಾಗುತ್ತದೆ’ ಎಂದು ಪಾಕ್ ಪ್ರಧಾನಿ ಇಮ್ರಾನ್ ಖಾನ್ ಹೇಳಿರುವುದನ್ನು ಮಾಧ್ಯಮಗಳು ವರದಿ ಮಾಡಿವೆ ಎಂದು ಹೇಳಿರುವ ಕಾಂಗ್ರೆಸ್ ಮುಖ್ಯ ವಕ್ತಾರ ರಣದೀಪ್ ಸುರ್ಜೇವಾಲಾ ಅವರು, ‘ಪಾಕಿಸ್ಥಾನ ಮೋದಿ ಜತೆ ಹೊಂದಾಣಿಕೆ ಮಾಡಿಕೊಂಡಿರುವುದಕ್ಕೆ ಮಾಧ್ಯಮ ವರದಿ ಸಾಕ್ಷಿಯಾಗಿದೆ’ ಎಂದು ಹೇಳಿದರು.
ಇಮ್ರಾನ್ ಖಾನ್ ಮುಂದುವರಿದು, ‘ಕಾಶ್ಮೀರ ಪ್ರಶ್ನೆಯನ್ನು ಇತ್ಯರ್ಥಪಡಿಸಲು ಭಾರತದ ಇತರ ಪಕ್ಷಗಳು ಯತ್ನಿಸಿದಲ್ಲಿ ಬಲಪಂಥೀಯರ ಟೀಕೆ, ಖಂಡನೆಗಳಿಗೆ ತುತ್ತಾಗಬೇಕಾದೀತೆಂಬ ಭಯ ಅವುಗಳಿಗೆ ಇದೆ ‘ ಎಂದು ಹೇಳಿದರು.
ಈ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿರುವ ಸುರ್ಜೇವಾಲಾ ಅವರು “ಪಾಕಿಸ್ಥಾನ ಮೋದಿ ಜತೆಗೆ ಅಧಿಕೃತ ಹೊಂದಾಣಿಕೆ ಮಾಡಿಕೊಂಡಿದೆ; ಮೋದಿಗೆ ಓಟ್ ಹಾಕಿದರೆ ಪಾಕಿಸ್ಥಾನಕ್ಕೆ ಓಟ್ ಹಾಕಿದ ಹಾಗೆ’ ಎಂದು ಟೀಕಿಸಿದ್ದಾರೆ.
“ಮೋದೀ ಜೀ ಮೊದಲು ನಿಮಗೆ ನವಾಜ್ ಷರೀಫ್ ಮೇಲೆ ಪ್ರೀತಿ ಉಂಟಾಯಿತು; ಈಗ ನಿಮ್ಮ ಪ್ರಿಯ ಸ್ನೇಹಿತ ಇಮ್ರಾನ್ ಖಾನ್ ಮೇಲೆ; ಸತ್ಯವಂತೂ ಈಗ ಬಹಿರಂಗವಾಗಿದೆ’ ಎಂದು ಸುರ್ಜೇವಾಲಾ ತಮ್ಮ ಟ್ವೀಟ್ನಲ್ಲಿ ವ್ಯಂಗ್ಯವಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ