ಜೈಲಲ್ಲೇ ಇಲ್ಲ ಉಗ್ರ ಹಫೀಜ್ !
26/11 ದಾಳಿ ರೂವಾರಿ ಸೆರೆಯಿಂದ ಸದ್ದಿಲ್ಲದೆ ಕಳುಹಿಸಿಕೊಟ್ಟ ಪಾಕ್
Team Udayavani, Nov 27, 2020, 6:05 AM IST
ಹೊಸದಿಲ್ಲಿ: ಮುಂಬಯಿ ನಗರದಲ್ಲಿ 26/11ರ ದಾಳಿಯ ಮಾಸ್ಟರ್ಮೈಂಡ್, ಎಲ್ಇಟಿ ಉಗ್ರ ಸಂಘಟನೆಯ ಸ್ಥಾಪಕ ಹಫೀಜ್ ಸಯೀದ್ ಲಾಹೋರ್ನ ಮನೆಯಲ್ಲಿ ವಿಲಾಸಿ ಜೀವನ ನಡೆಸುತ್ತಿದ್ದು, ಅಲ್ಲಿಂದಲೇ ಉಗ್ರ ಸಂಘಟನೆಯನ್ನು ನಿರ್ವಹಿಸುತ್ತಿದ್ದಾನೆ!
ಇದು ಗುಪ್ತಚರ ಸಂಸ್ಥೆಗಳು ಬಹಿರಂಗಪಡಿಸಿರುವ ಮಾಹಿತಿ. ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ನಿರ್ಬಂಧಕ್ಕೆ ಒಳಗಾಗಿರುವ ಉಗ್ರನನ್ನು ಜೈಲಿನಲ್ಲಿ ಇರಿಸದೆ ಪಾಕ್ ಆತನಿಗೆ ಎಲ್ಲ ಸೌಲಭ್ಯಗಳನ್ನೂ ಕಲ್ಪಿಸಿ ಕೊಟ್ಟಿದೆ, ತನ್ಮೂಲಕ ಎಲ್ಲರ ಕಣ್ಣಿಗೆ ಮಣ್ಣೆರಚಿದೆ.
2019ರ ಜುಲೈಯಲ್ಲಿ ಸಯೀದ್ನನ್ನು ಬಂಧಿಸ ಲಾಗಿತ್ತು. ಆದಾದ ಕೆಲವೇ ತಿಂಗಳುಗಳಲ್ಲಿ ಉಗ್ರರಿಗೆ ಹಣಕಾಸು ನೆರವು ನೀಡಿದ ಆರೋಪದಲ್ಲಿ ಆತನಿಗೆ 10 ವರ್ಷ 6 ತಿಂಗಳು ಜೈಲು ಶಿಕ್ಷೆ ವಿಧಿಸಿ ಕೋರ್ಟ್ ತೀರ್ಪು ನೀಡಿತ್ತು. ಕಳೆದ ವಾರವಷ್ಟೇ ಸಯೀದ್ಗೆ ಮತ್ತೆರಡು ಪ್ರಕರಣಗಳಲ್ಲಿ ಜೈಲು ಶಿಕ್ಷೆ ಘೋಷಿಸಲಾಗಿದೆ. ಆದರೆ ಇದೆಲ್ಲ ಜಗತ್ತಿನ ಬಾಯಿ ಮುಚ್ಚಿಸುವ ತಂತ್ರ ಎನ್ನುವುದು ಗುಪ್ತಚರ ಮಾಹಿತಿಯಿಂದ ಬಹಿರಂಗವಾಗಿದೆ.
ಇತರ ಉಗ್ರರ ಭೇಟಿಯೂ ಅವಕಾಶ !
ಮನೆಯಲ್ಲೇ ಇರುವ ಸಯೀದ್ಗೆ ಭದ್ರತೆಯನ್ನೂ ಒದಗಿಸಲಾಗಿದೆ. ಅತಿಥಿಗಳ ಆಗಮನಕ್ಕೂ ಅವಕಾಶ ಕಲ್ಪಿಸಲಾಗಿದೆ. ಕಳೆದ ತಿಂಗಳಷ್ಟೇ “ಘೋಷಿತ ಉಗ್ರ’ರ ಪಟ್ಟಿಗೆ ಸೇರ್ಪಡೆಗೊಂಡಿರುವ 26/11ರ ದಾಳಿಯ ಪ್ರಮುಖ ಸಂಚುಕೋರ, ಲಷ್ಕರ್ನ ಜೆಹಾದ್ ಘಟಕದ ಮುಖ್ಯಸ್ಥ ಝಕೀವುರ್ ರೆಹಮಾನ್ ಲಖ್ರಿ ಕೂಡ ಉಗ್ರ ಸಯೀದ್ನ ಮನೆಗೆ ಬಂದು ಹಲವು ತಾಸುಗಳ ಕಾಲ ಮಾತುಕತೆ ನಡೆಸಿ ವಾಪಸಾಗಿದ್ದ. ಜೆಹಾದ್ಗೆ ದೇಣಿಗೆ ಸಂಗ್ರಹ ಸಹಿತ ವಿವಿಧ ವಿಚಾರಗಳ ಕುರಿತು ಈ ವೇಳೆ ಚರ್ಚಿಸಲಾಗಿತ್ತು ಎಂದೂ ಮೂಲಗಳು ತಿಳಿಸಿವೆ.
ಮುಂಬಯಿ ದಾಳಿ ನಡೆದು 12 ವರ್ಷಗಳು ಕಳೆದರೂ ದಾಳಿಕೋರರಿಗೆ ಇನ್ನೂ ಶಿಕ್ಷೆಯಾಗದಿರುವುದರ ಹಿಂದಿನ ಪಾಕಿಸ್ಥಾನದ ನಿಜ ಬಣ್ಣ ಇದರಿಂದ ಬಯಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
MUST WATCH
ಹೊಸ ಸೇರ್ಪಡೆ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ