ಎಲ್‌ಟಿಟಿಇ ಜೀವ ತುಂಬಲು ಪಾಕಿಸ್ಥಾನ ಕುತಂತ್ರ!


Team Udayavani, Oct 13, 2022, 7:15 AM IST

ಎಲ್‌ಟಿಟಿಇ ಜೀವ ತುಂಬಲು ಪಾಕಿಸ್ಥಾನ ಕುತಂತ್ರ!

ಹೊಸದಿಲ್ಲಿ: ಭಾರತದ ವಿರುದ್ಧ ಸದಾ ಒಂದಲ್ಲ ಒಂದು ರೀತಿಯಲ್ಲಿ ಕಿಡಿಗೇಡಿತನ ತೋರುತ್ತಲೇ ಇರುವ ಪಾಕಿಸ್ಥಾನ ಈಗ ಡ್ರಗ್ಸ್‌ ಸಮರವನ್ನು ಸಾರಿದೆ. ಇದಕ್ಕಾಗಿ ಶ್ರೀಲಂಕಾದಲ್ಲಿ ಈಗಾಗಲೇ ಅಳಿದಿರುವ ಎಲ್‌ಟಿಟಿಇ ಪುನಶ್ಚೇತನಕ್ಕೆ ಮುಂದಾಗಿದೆ ಎಂಬ ಆತಂಕಕಾರಿ ಸಂಗತಿ ಬಯಲಾಗಿದೆ.

ಕೇರಳದ ಕರಾವಳಿಯಲ್ಲಿ ಇತ್ತೀಚೆಗಷ್ಟೇ 200 ಕೆ.ಜಿ. ಹೆರಾಯಿನ್‌ ಅನ್ನು ರಾಷ್ಟ್ರೀಯ ಮಾದಕ ವಸ್ತು ನಿಯಂತ್ರಣ ಮಂಡಳಿ ವಶ ಪಡಿಸಿಕೊಂಡಿತ್ತು. ಇದು ಪಾಕಿಸ್ಥಾನ ಮೂಲದ ಮಾದಕ ವಸ್ತುಗಳ ವ್ಯಾಪಾರಿ ಹಾಜಿ ಸಲೀಂಗೆ ಸಂಬಂಧಿಸಿದ್ದು ಎನ್ನಲಾಗಿದೆ. ಈತ ಈಗಾಗಲೇ ನಶಿಸಿಹೋಗಿರುವ ಶ್ರೀಲಂಕಾದ ಲಿಬರೇಶನ್‌ ಟೈಗರ್ಸ್‌ ಆಫ್ ತಮಿಳ್‌ ಈಳಂ (ಎಲ್‌ಟಿಟಿಇ)ಯನ್ನು ಪುನಶ್ಚೇತನ ಗೊಳಿಸಲು ಡ್ರಗ್ಸ್‌ ಮಾರಿ ಬಂದ ಹಣವನ್ನೇ ಭಾರೀ ಪ್ರಮಾಣ ದಲ್ಲಿ ನೀಡಲು ಮುಂದಾಗಿದ್ದ ಎಂದು ಹೇಳಲಾಗಿದೆ.

ಹಾಜಿ ಸಲೀಂ ಹೆಸರು ಜುಲೈಯಲ್ಲೇ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ)ಯ ತನಿಖೆ ವೇಳೆಯಲ್ಲೇ ಬೆಳಕಿಗೆ ಬಂದಿತ್ತು. ಎನ್‌ಐಎ ಪ್ರಕಾರ ಸಲೀಂ, ಶ್ರೀಲಂಕಾದ ಡ್ರಗ್‌ ಮಾಫಿಯಾ ದೊರೆ ಸಿ. ಗುಣಶೇಖರ್‌ ಅಲಿಯಾಸ್‌ ಗುಣ ಮತ್ತು ಪುಷ್ಪರಾಜ್‌ ಅಲಿಯಾಸ್‌ ಪೊಕ್ಕುಟ್ಟಿ ಕಣ್ಣ ಎಂಬವರ ಮೂಲಕ ಭಾರತಕ್ಕೆ ಮಾದಕ ವಸ್ತು ಮತ್ತು ಆಯುಧಗಳನ್ನು ಪೂರೈಸುತ್ತಿದ್ದರು ಎಂಬುದು ಪತ್ತೆಯಾಗಿತ್ತು. ಈ ಸಂಬಂಧ ತಮಿಳುನಾಡಿನ ಪೊಲೀಸರು ಇಬ್ಬರು ಯುವಕರನ್ನೂ ಬಂಧಿಸಿದ್ದರು. ಆರೋಪಿಗಳು ಎಲ್‌ಟಿಟಿಇಯಿಂದ ಪ್ರೇರಿತರಾಗಿ ತಮಿಳುನಾಡಿನಲ್ಲಿ ಶಸ್ತ್ರಾಸ್ತ್ರ ದಂಗೆ ಎಬ್ಬಿಸಲು ಮುಂದಾಗಿದ್ದರು ಎಂದು ಹೇಳಲಾಗಿತ್ತು.

ತಮಿಳುನಾಡು ಪೊಲೀಸರಿಂದ ಪ್ರಕರಣದ ತನಿಖೆಯನ್ನು ವಹಿಸಿಕೊಂಡ ಎನ್‌ಐಎ, ಕೂಲಂಕಶವಾಗಿ ತನಿಖೆ ನಡೆಸಿತ್ತು. ಈ ವೇಳೆ ಇಬ್ಬರು ಯುವಕರ ಮೊಬೈಲ್‌ನಲ್ಲಿ ಎಲ್‌ಟಿಟಿಇ ನಾಯಕ ಪ್ರಭಾಕರನ್‌ ಫೋಟೋಗಳು, ಅಕ್ರಮ ಆಯುಧಗಳ ತಯಾರಿಕೆಗಾಗಿ ಬಳಸುವ ಕಚ್ಚಾ ಸ್ಫೋಟಕಗಳು, ವಿಷ ತಯಾರಿಸುವ ಬೀಜಗಳು ಮತ್ತು ಕಾಡಿನಲ್ಲಿ ಜೀವ ರಕ್ಷಣೆಗಾಗಿ ಬಳಸುವ ವಸ್ತುಗಳ ಖರೀದಿ ರಶೀದಿಗಳು ಸಿಕ್ಕಿದ್ದವು.

11,300 ಕೆಜಿ ಡ್ರಗ್ಸ್‌ ವಶ
ಕಳೆದ ಜನವರಿಯಿಂದ ಇಲ್ಲಿವರೆಗೆ ಮುಂಬಯಿ ವಿಭಾಗದಲ್ಲೇ ಸುಮಾರು 11,300 ಕೆ.ಜಿ. ಡ್ರಗ್ಸ್‌ ಅನ್ನು ವಶಪಡಿಸಿ ಕೊಂಡು 58 ಮಂದಿ  ಯನ್ನು ಬಂಧಿಸಲಾಗಿದೆ. 4 ದಿನಗಳ ಹಿಂದೆ ಗುಜರಾತ್‌ ಕರಾವಳಿಯಲ್ಲಿ ಪಾಕಿಸ್ಥಾನ ಬೋಟ್‌ ವೊಂದನ್ನು ವಶಪಡಿಸಿಕೊಳ್ಳಲಾಗಿದ್ದು, 350 ಕೋಟಿ ರೂ. ಮೌಲ್ಯದ 50 ಕೆಜಿ ಹೆರಾಯಿನ್‌ ಅನ್ನು ವಶಕ್ಕೆ ತೆಗೆದು ಕೊಳ್ಳಲಾಗಿದೆ. ಕೆಲವು ತಿಂಗಳುಗಳಿಂದ ಪಾಕಿಸ್ಥಾನದಿಂದ ಬರುವ ಡ್ರಗ್ಸ್‌ ಹೆಚ್ಚಾಗಿದೆ ಎಂದು ಮುಂಬಯಿ ಮತ್ತು ಗುಜರಾತ್‌ನ ಮಾದಕ ನಿಯಂತ್ರಣ ಮಂಡಳಿ ಅಧಿಕಾರಿಗಳು ಹೇಳುತ್ತಾರೆ.

ಭಾರತಕ್ಕೆ ಹೇಗೆ ಬರುತ್ತಿತ್ತು?
ಈ ಮಾದಕ ದ್ರವ್ಯದ ಮೂಲ ಅಫ್ಘಾನಿಸ್ಥಾನ. ಅಲ್ಲಿಂದ ಪಾಕಿಸ್ಥಾನಕ್ಕೆ ಬರುತ್ತಿದ್ದ ಈ ಡ್ರಗ್ಸ್‌ ಅನ್ನು ಸಮುದ್ರ ಮಾರ್ಗ ಮಧ್ಯೆಯೇ ಶ್ರೀಲಂಕಾದ ಹಡಗುಗಳಿಗೆ ವರ್ಗಾಯಿಸಿ ಆ ಮೂಲಕ ಭಾರತಕ್ಕೆ ರವಾನಿಸಲಾಗುತ್ತಿತ್ತು. ಇರಾನ್‌ನ ಕೆಲವು ಹಡಗುಗಳನ್ನೂ ಬಳಸಲಾಗುತ್ತಿತ್ತು. ಇದಕ್ಕೆ ಪುರಾವೆಯೆಂಬಂತೆ ಇರಾನ್‌ನ ಆರು ಮಂದಿಯನ್ನು ಬಂಧಿಸಲಾಗಿತ್ತು.

ಟಾಪ್ ನ್ಯೂಸ್

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.