- Saturday 07 Dec 2019
ಕಳೆದ 10 ತಿಂಗಳಲ್ಲಿ 2,500 ಭಾರೀ ಕದನ ವಿರಾಮ ಉಲ್ಲಂಘಿಸಿದ ಪಾಕ್: ಬೆಚ್ಚಿ ಬೀಳಿಸಿದ ವರದಿ
Team Udayavani, Nov 17, 2019, 8:13 AM IST
ಶ್ರೀನಗರ: ಕಾಶ್ಮೀರ ಕಣಿವೆಯಲ್ಲಿ ಪಾಕ್ ತನ್ನ ದುಷ್ಕೃತ್ಯವನ್ನು ಮುಂದುವರಿಸಿದ್ದು 2019ರ ಜನವರಿಯಿಂದ ನವೆಂಬರ್ 15 ರವರೆಗೆ ಗಡಿ ನಿಯಂತ್ರಣ ರೇಖೆಯ ಬಳಿ (LOC) 2,500 ಕ್ಕೂ ಹೆಚ್ಚು ಬಾರಿ ಕದನ ವಿರಾಮವನ್ನು ಉಲ್ಲಂಘಿಸಿದೆ ಎಂದು ವರದಿಯಾಗಿದೆ.
ಜಮ್ಮು-ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದು ಮಾಡಿ ಲಡಾಕ್ ಮತ್ತು ಕಾಶ್ಮೀರವನ್ನು ಕೇಂದ್ರಾಡಳಿತ ಪ್ರದೇಶವಾಗಿ ಮಾಡಿದ ನಂತರ ಅತೀ ಹೆಚ್ಚು ಭಾರೀ ಕದನ ವಿರಾಮ ಉಲ್ಲಂಘಿಸಲಾಗಿದೆ. ಆದರೇ ಕಣಿವೆ ರಾಜ್ಯದಲ್ಲಿ ಅಶಾಂತಿಯನ್ನು ಉಂಟುಮಾಡುವ ಪಾಕ್ ನ ಎಲ್ಲಾ ಪ್ರಯತ್ನಗಳಿಗೆ ಭಾರತೀಯ ಸೇನೆ ತಕ್ಕ ಪ್ರತ್ಯುತ್ತರ ನೀಡಿದೆ.
ಅಕ್ಟೋಬರ್ನಲ್ಲಿಯೇ 350ಕ್ಕೂ ಹೆಚ್ಚು ಭಾರೀ ಕದನ ವಿರಾಮ ಉಲ್ಲಂಘನೆಯಾಗಿದ್ದು, ಇದು ಕಳೆದ 10 ತಿಂಗಳಲ್ಲಿಯೇ ಅತಿ ಹೆಚ್ಚು ಎಂದು ಸೇನೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ನವೆಂಬರ್ ತಿಂಗಳ ಮೊದಲ 11 ದಿನಗಳಲ್ಲಿ 97 ಭಾರೀ ಕದನ ವಿರಾಮ ಉಲ್ಲಂಘನೆ ಮಾಡಿ ಪಾಕ್ ತನ್ನ ಪುಂಡಾಟ ಮೆರೆದಿದೆ.
ಪಾಕಿಸ್ತಾನ ಸೇನೆಯು ಗಡಿ ಪ್ರದೇಶಗಳಲ್ಲಿ ಭಾರತೀಯ ನಾಗರಿಕರನ್ನು ತಮ್ಮ ಪ್ರಮುಖ ಗುರಿಗಳನ್ನಾಗಿ ಮಾಡಿ ಗುಂಡಿನ ದಾಳಿ ನಡೆಸುತ್ತಿದೆ. ಒಂದೇ ದಿನದಲ್ಲಿ 10ಕ್ಕೂ ಹೆಚ್ಚು ಭಾರೀ ಶೆಲ್ ದಾಳಿ ನಡೆಸಿದ ುದಾಹರಣೆಗಳು ಇವೆ. ಹಿರಾನಗರ, ಅಖ್ನೂರ್, ಸುಂದರಬಾನಿ, ನೌಶೇರಾ, ರಾಜೌರಿ, ಮೆಂಧರ್, ಪೂಂಚ್, ಉಡಿ ಮತ್ತು ಕುಪ್ವಾರಾ ಜಿಲ್ಲೆಗಳಲ್ಲಿ ಸತತವಾಗಿ ಕದನ ವಿರಾಮ ಉಲ್ಲಂಘಿಸಿದೆ ಎಂದು ಮಾಧ್ಯಮದ ವರದಿ ತಿಳಿಸಿದೆ.
ಈ ವಿಭಾಗದಿಂದ ಇನ್ನಷ್ಟು
-
ಲಕ್ನೋ: ಉತ್ತರ ಪ್ರದೇಶದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಎಗ್ಗಿಲ್ಲದೇ ಮುಂದುವರಿದಿದೆ. ಗುರುವಾರವಷ್ಟೇ ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಮೇಲೆ ಬೆಂಕಿ ಹಚ್ಚಿ...
-
ಹೊಸದಿಲ್ಲಿ: ಪಾಕಿಸ್ಥಾನ, ಅಫ್ಘಾನಿಸ್ಥಾನ, ಬಾಂಗ್ಲಾದೇಶಗಳಲ್ಲಿ ಕಿರುಕುಳ ಅನುಭವಿಸುತ್ತಿದ್ದವರಿಗೆ ಉತ್ತಮ ನಾಳೆಯ ಅವಕಾಶವನ್ನು ಕಲ್ಪಿಸುವುದೇ ಪೌರತ್ವ (ತಿದ್ದುಪಡಿ)...
-
ಹೊಸದಿಲ್ಲಿ: ಈರುಳ್ಳಿ ದರ ಕಡಿಮೆಯಾಗುವ ಲಕ್ಷಣಗಳು ಸದ್ಯಕ್ಕೆ ಗೋಚರಿ ಸುತ್ತಿಲ್ಲ. ಶುಕ್ರವಾರ ಈರುಳ್ಳಿ ಬೆಲೆ ಕೇಜಿಗೆ 165 ರೂ. ತಲುಪಿದೆ. ವಿದೇಶಗಳಿಂದ ಆಮದು ಮಾಡಿಕೊಂಡಿರುವ...
-
ನವದೆಹಲಿ: ತನ್ನನ್ನು ಅತ್ಯಾಚಾರ ಮಾಡಿದ್ದ ಆರೋಪಿಯೊಬ್ಬನ ಸಹಿತ ಇತರೇ ನಾಲವರು ದುಷ್ಕರ್ಮಿಗಳಿಂದ ಗುರುವಾರದಂದು ಹಲ್ಲೆಗೊಳಗಾಗಿ ಬಳಿಕ ಬೆಂಕಿ ಹಚ್ಚಲ್ಪಟ್ಟಿದ್ದ...
-
ನಾಗಾಲ್ಯಾಂಡ್: ಹಾರ್ನ್ ಬಿಲ್ ನಲ್ಲಿ ನಡೆದ 20ನೇ ವರ್ಷದ ಹಾರ್ನ್ ಬಿಲ್ ಫೆಸ್ಟಿವಲ್ಗೆ ತೆರೆ ಬಿದ್ದಿದೆ. ಡಿಸೆಂಬರ್ 1ರಿಂದ 6ರ ವರೆಗೆ ಈ ಹಬ್ಬ ನಡೆದಿತ್ತು. ಡಿಸೆಂಬರ್...
ಹೊಸ ಸೇರ್ಪಡೆ
-
ಲಕ್ನೋ: ಉತ್ತರ ಪ್ರದೇಶದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಎಗ್ಗಿಲ್ಲದೇ ಮುಂದುವರಿದಿದೆ. ಗುರುವಾರವಷ್ಟೇ ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಮೇಲೆ ಬೆಂಕಿ ಹಚ್ಚಿ...
-
ಹೊಸದಿಲ್ಲಿ: ಪಾಕಿಸ್ಥಾನ, ಅಫ್ಘಾನಿಸ್ಥಾನ, ಬಾಂಗ್ಲಾದೇಶಗಳಲ್ಲಿ ಕಿರುಕುಳ ಅನುಭವಿಸುತ್ತಿದ್ದವರಿಗೆ ಉತ್ತಮ ನಾಳೆಯ ಅವಕಾಶವನ್ನು ಕಲ್ಪಿಸುವುದೇ ಪೌರತ್ವ (ತಿದ್ದುಪಡಿ)...
-
ಹೊಸದಿಲ್ಲಿ: ಈರುಳ್ಳಿ ದರ ಕಡಿಮೆಯಾಗುವ ಲಕ್ಷಣಗಳು ಸದ್ಯಕ್ಕೆ ಗೋಚರಿ ಸುತ್ತಿಲ್ಲ. ಶುಕ್ರವಾರ ಈರುಳ್ಳಿ ಬೆಲೆ ಕೇಜಿಗೆ 165 ರೂ. ತಲುಪಿದೆ. ವಿದೇಶಗಳಿಂದ ಆಮದು ಮಾಡಿಕೊಂಡಿರುವ...
-
ನವದೆಹಲಿ: ತನ್ನನ್ನು ಅತ್ಯಾಚಾರ ಮಾಡಿದ್ದ ಆರೋಪಿಯೊಬ್ಬನ ಸಹಿತ ಇತರೇ ನಾಲವರು ದುಷ್ಕರ್ಮಿಗಳಿಂದ ಗುರುವಾರದಂದು ಹಲ್ಲೆಗೊಳಗಾಗಿ ಬಳಿಕ ಬೆಂಕಿ ಹಚ್ಚಲ್ಪಟ್ಟಿದ್ದ...
-
ಉಡುಪಿ: ಅದಮಾರು ಮಠದ ಪರ್ಯಾಯದಲ್ಲಿ ಕಾಲೇ ವರ್ಷತು ಪರ್ಜನ್ಯಃ| ಪೃಥಿವೀ ಸಸ್ಯಶಾಲಿನಿ|| ದೇಶಃ ಅಯಂ ಕ್ಷೋಭರಹಿತಃ| ಸಜ್ಜನಾಃ ಸಂತು ನಿರ್ಭಯಾಃ|| ಎಂಬಂತೆ ಈ ನಾಲ್ಕು ವಿಷಯಗಳ...