ಜಮ್ಮು-ಕಾಶ್ಮೀರ ಗಡಿಯಲ್ಲಿ ಪಾಕ್ ನಿಂದ 12ಗಂಟೆ ಕಾಲ ದಾಳಿ, ಸ್ಥಳೀಯ ಜನರಲ್ಲಿ ಆತಂಕ
Team Udayavani, Oct 8, 2019, 2:36 PM IST
ನವದೆಹಲಿ:ಜಮ್ಮು-ಕಾಶ್ಮೀರದ ಹಿರಾನಗರ್ ಸೆಕ್ಟರ್ ಪ್ರದೇಶದಲ್ಲಿ ಮತ್ತೆ ಕದನ ವಿರಾಮ ಉಲ್ಲಂಘಿಸಿ ಪಾಕಿಸ್ತಾನ ಸೇನಾಪಡೆ ಭಾರೀ ಪ್ರಮಾಣದ ಶೆಲ್ ದಾಳಿ ನಡೆಸಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.
ಸೇನೆಯ ಅಧಿಕಾರಿಗಳ ಮಾಹಿತಿ ಪ್ರಕಾರ, ಕದನ ವಿರಾಮ ಉಲ್ಲಂಘಿಸಿ ಪಾಕ್ ಪಡೆ ನಡೆಸಿದ ದಾಳಿಗೆ ಭಾರತದ ಸೇನಾಪಡೆ ತಕ್ಕ ಪ್ರತ್ಯುತ್ತರ ನೀಡಿದ್ದು, ಭಾರೀ ಗುಂಡಿನ ಕಾಳಗದ ಹಿನ್ನೆಲೆಯಲ್ಲಿ ಸ್ಥಳೀಯ ನಿವಾಸಿಗಳಲ್ಲಿ ಭಾರೀ ಆತಂಕಕ್ಕೆ ಎಡೆಮಾಡಿಕೊಟ್ಟಿರುವುದಾಗಿ ವರದಿ ವಿವರಿಸಿದೆ.
ಹಿರಾನಗರ್ ಪ್ರದೇಶದಲ್ಲಿ ಪಾಕಿಸ್ತಾನ ಪಡೆಗಳು ಸತತವಾಗಿ 12ಗಂಟೆಗಳ ಕಾಲ ದಾಳಿ ನಡೆಸಿರುವುದಾಗಿ ಭಾರತೀಯ ಸೇನಾ ತಿಳಿಸಿದೆ. ರಾತ್ರಿ 10.30ಕ್ಕೆ ದಾಳಿ ಆರಂಭಿಸಿದ್ದ ಪಾಕ್ ಪಡೆಗಳು ಸತತವಾಗಿ ದಾಳಿ ನಡೆಸಿರುವುದಾಗಿ ಹೇಳಿದೆ.
ಹಿರಾನಗರ್ ಸೆಕ್ಟರ್ ಪ್ರದೇಶದಲ್ಲಿ ಪಾಕಿಸ್ತಾನ ಪಡೆಗಳು ಕಳೆದ 15 ದಿನಗಳಿಂದ ನಿರಂತರವಾಗಿ ಶೆಲ್ ಹಾಗೂ ಮೋರ್ಟಾರ್ ದಾಳಿ ನಡೆಸುತ್ತಿದ್ದು, ಇದರಿಂದ ಸ್ಥಳೀಯರು ಆತಂಕಕ್ಕೆ ಒಳಗಾಗಿದ್ದಾರೆ ಎಂದು ಸೇನಾ ಮೂಲಗಳು ತಿಳಿಸಿವೆ.
ಪಾಕಿಸ್ತಾನದ ನಿರಂತರ ದಾಳಿಯಿಂದಾಗಿ ಸ್ಥಳೀಯ ನಿವಾಸಿಗಳು ಭಯದಲ್ಲಿಯೇ ಬದುಕುವಂತಾಗಿದೆ. ಘಟನೆಯಲ್ಲಿ ಯಾವುದೇ ಸಾವು, ನೋವಿನ ಬಗ್ಗೆ ಈವರೆಗೆ ವರದಿಯಾಗಿಲ್ಲ.
ಅಕ್ಟೋಬರ್ 3ರಂದು ಪೂಂಜ್ ಜಿಲ್ಲೆಯ ಶಾಪುರ್ ಮತ್ತು ಕೆರ್ನಿ ಸೆಕ್ಟರ್ ಪ್ರದೇಶದಲ್ಲಿ ಪಾಕ್ ಪಡೆ ನಡೆಸಿದ ದಾಳಿಯಲ್ಲಿ ಓರ್ವ ನಾಗರಿಕ ಗಾಯಗೊಂಡಿದ್ದರು ಎಂದು ವರದಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ