ಬಂಧನ ಗೃಹದಿಂದ ಬಿಡುಗಡೆ ಮಾಡಿ; ಪಾಕ್ನಿಂದ ತಿರಸ್ಕೃತಗೊಂಡ ಖಮಾರ್ ಅಹವಾಲು
ತನ್ನ ವಕೀಲರಿಂದ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ
Team Udayavani, Feb 14, 2022, 7:45 AM IST
ನವದೆಹಲಿ: ಖುದ್ದು ಪಾಕಿಸ್ತಾನ ಸರ್ಕಾರವೇ ತನ್ನ ಪ್ರಜೆಯಲ್ಲ ತಿರಸ್ಕರಿಸಿರುವ ಮೊಹಮ್ಮದ್ ಖಮಾರ್ (62) ಎಂಬಾತ ಈಗ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾನೆ.
ಕಳೆದ ಏಳು ವರ್ಷಗಳಿಂದ ತಾನು ಬಂಧನದಲ್ಲಿರುವ ನವದೆಹಲಿಯ ಬಂಧನ ಗೃಹದಿಂದ ತನ್ನನ್ನು ಬಿಡುಗಡೆಗೊಳಿಸುವಂತೆ ಸುಪ್ರೀಂಕೋರ್ಟ್ಗೆ ಮನವಿ ಮಾಡಿದ್ದಾನೆ.
ಹಾಗೊಂದು ವೇಳೆ ಆತನ ಬಿಡುಗಡೆಗೊಂಡಿದ್ದೇ ಆದರೆ, ದೇಶದಲ್ಲಿಯೇ ಜನಿಸಿದ ಆತನ ಐವರು ಮಕ್ಕಳು, ಪತ್ನಿ ಪೌರತ್ವಕ್ಕೆ ಅರ್ಜಿ ಸಲ್ಲಿಸಲಿದ್ದಾರೆ ಎಂದು ನ್ಯಾ.ಡಿ.ವೈ. ಚಂದ್ರಚೂಡ್ ಮತ್ತು ನ್ಯಾ. ಸೂರ್ಯಕಾಂತ ಅವರನ್ನೊಳಗೊಂಡ ನ್ಯಾಯಪೀಠಕ್ಕೆ ವಕೀಲರ ಮುಖಾಂತರ ಅರಿಕೆ ಮಾಡಿಕೊಂಡಿದ್ದಾನೆ. ಪ್ರಕರಣದ ವಿಚಾರಣೆ ಫೆ. 28ಕ್ಕೆ ನಡೆಯಲಿದೆ.
2011 ಆ.8ರಂದು ಉತ್ತರ ಪ್ರದೇಶದ ಮೀರತ್ನಲ್ಲಿ ವೀಸಾ ಅವಧಿ ಮೀರಿ ದೇಶದಲ್ಲಿ ನೆಲೆಸಿದ್ದಕ್ಕಾಗಿ ಬಂಧಿಸಲಾಗಿತ್ತು. ಈ ಆರೋಪಕ್ಕಾಗಿ ಆತನಿಗೆ 3 ವರ್ಷ 6 ತಿಂಗಳು ಜೈಲು ಶಿಕ್ಷೆ ಮತ್ತು 500 ರೂ. ದಂಡ ವಿಧಿಸಲಾಗಿತ್ತು.
ಇದನ್ನೂ ಓದಿ:ಅಮೆರಿಕಾ ಎಚ್ಚರಿಕೆಯ ನಡುವೆಯೂ ಉಕ್ರೇನ್ ಮೇಲೆ ರಷ್ಯಾ ದಾಳಿ?
2015ರ ಫೆ.6ರಂದು ಶಿಕ್ಷೆ ಮುಕ್ತಾಯಗೊಂಡ ಬಳಿಕ ಆತನನ್ನು ಪಾಕಿಸ್ತಾನಕ್ಕೆ ಕಳುಹಿಸಲು ನಿರ್ಧರಿಸಿ, ಆತನ ಹಸ್ತಾಂತರದ ಪ್ರಸ್ತಾವನೆಯನ್ನು ಭಾರತ ಸರ್ಕಾರ, ಪಾಕಿಸ್ತಾನ ಸರ್ಕಾರಕ್ಕೆ ಕಳುಹಿಸಿತ್ತು.
ಆದರೆ, ಪ್ರಸ್ತಾವನೆಯನ್ನು ತಿರಸ್ಕರಿಸಿದ ಪಾಕಿಸ್ತಾನ ಸರ್ಕಾರ, ಖಮಾರ್ನನ್ನು ತನ್ನ ಪ್ರಜೆಯೇ ಅಲ್ಲವೆಂದು ಹೇಳಿತು. ಹಾಗಾಗಿ, ಆತನನ್ನು ಉತ್ತರ ದೆಹಲಿ ಜಿಲ್ಲೆಯ ಲಾಂಪುರದಲ್ಲಿರುವ ಬಂಧನ ಗೃಹಕ್ಕೆ ಕಳುಹಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ