
ಪರಿಹಾರ ಕಾರ್ಯಾಚರಣೆಗಾಗಿ ಟರ್ಕಿಗೆ ತೆರಳಿದ್ದ ಭಾರತದ ವಿಮಾನಕ್ಕೆ ದಾರಿ ನಿರಾಕರಿಸಿದ ಪಾಕ್!
Team Udayavani, Feb 7, 2023, 6:05 PM IST

ಹೊಸದಿಲ್ಲಿ: ಪರಿಹಾರ ಕಾರ್ಯಾಚರಣೆಗಾಗಿ ಟರ್ಕಿಗೆ ಪ್ರಯಾಣಿಸುತ್ತಿದ್ದ ಭಾರತೀಯ ವಾಯುಪಡೆಯ ವಿಮಾನಕ್ಕೆ ಪಾಕಿಸ್ತಾನ ತನ್ನ ವಾಯುಪ್ರದೇಶದ ಪ್ರವೇಶವನ್ನು ನಿರಾಕರಿಸಿದೆ.
ಟರ್ಕಿ ಮತ್ತು ಸಿರಿಯಾದಲ್ಲಿ ಭೀಕರ ಭೂಕಂಪನವಾಗಿದ್ದು, ಭಾರತವು ಸಹಾಯಹಸ್ತ ಚಾಚಿದೆ. ಪರಿಹಾರ ಕಾರ್ಯಾಚರಣೆಯಲ್ಲಿ ಟರ್ಕಿಗೆ ಸಹಾಯ ಮಾಡಲು, ಎನ್ ಡಿಆರ್ ಎಫ್ (ಭಾರತೀಯ ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ) ತಂಡಗಳೊಂದಿಗೆ ವೈದ್ಯಕೀಯ ಸಹಾಯ ಕಳುಹಿಸುತ್ತಿದೆ.
ಇದಕ್ಕಾಗಿ ಭಾರತವು ತನ್ನ ಅತಿದೊಡ್ಡ ಸರಕು ವಿಮಾನ ಬೋಯಿಂಗ್ ನಿರ್ಮಿತ C-17 ಗ್ಲೋಬ್ಮಾಸ್ಟರನ್ನು ಸೇವೆಗಾಗಿ ನಿಯೋಜಿಸಿದೆ. ಮೊದಲ ವಿಮಾನ ಆಧುನಿಕ ಡ್ರಿಲ್ಲಿಂಗ್ ಉಪಕರಣಗಳು, ವೈದ್ಯರು ಮತ್ತು ತರಬೇತಿ ಹೊಂದಿನ ನಾಯಿಗಳೊಂದಿಗೆ ಅದಾನ ವಿಮಾನ ನಿಲ್ದಾಣದಲ್ಲಿ ಇಳಿಯಿತು.
ಇದನ್ನೂ ಓದಿ:ಕೊರಟಗೆರೆ ತಾಲೂಕಿನಲ್ಲಿ ದಾಖಲೆ ಬೆಲೆಗೆ ಮಾರಾಟವಾದ ವೀಳ್ಯದೆಲೆ
ಸಿಎನ್ಎನ್ ನ್ಯೂಸ್-18 ವರದಿಯ ಪ್ರಕಾರ, ಪಾಕಿಸ್ತಾನವು ತನ್ನ ವಾಯುಪ್ರದೇಶವನ್ನು ಬಳಸಲು ಅನುಮತಿ ನಿರಾಕರಿಸಿದ ಕಾರಣ ಭಾರತೀಯ ವಾಯುಪಡೆ ವಿಮಾನವು ಬೇರೆ ಮಾರ್ಗವನ್ನು ತೆಗೆದುಕೊಳ್ಳಬೇಕಾಯಿತು.
ಟರ್ಕಿಯಲ್ಲಿ ಎರಡು ದಿನಗಳಲ್ಲಿ ಐದು ಭೂಕಂಪನಗಳು ಸಂಭವಿಸಿದ್ದು, ಇದರ ಪರಿಣಾಮವಾಗಿ 4,800 ಕ್ಕೂ ಹೆಚ್ಚು ಸಾವುಗಳು ಸಂಭವಿಸಿದವು. ಹತ್ತಾರು ಸಾವಿರಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಸಾವಿರಾರು ಮಂದಿ ಶಿಥಿಲಗೊಂಡ ಕಟ್ಟಡಗಳ ಅವಶೇಷಗಳಡಿಯಲ್ಲಿ ಸಿಲುಕಿಕೊಂಡಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಾಮನವಮಿ: ದೇವಾಲಯದ ಬಾವಿಯ ಸಿಮೆಂಟ್ ಹಾಸು ಕುಸಿದು 13 ಭಕ್ತರ ಮೃತ್ಯು

ಹೆತ್ತವರನ್ನೇ ಹತ್ಯೆಗೈದಿದ್ದ 15ರ ಬಾಲಕಿ ಖಾಕಿ ಬಲೆಗೆ

ರಾಜಕೀಯ ವಿವಾದ; ಮೊಸರು ಪ್ಯಾಕೆಟ್ಗಳ ಮೇಲೆ ಪ್ರಾದೇಶಿಕ ಹೆಸರು!

ಜೋಸ್ ಆಲುಕ್ಕಾಸ್ನ ಪ್ಯಾನ್ ಇಂಡಿಯಾ ಬ್ರಾಂಡ್ ಅಂಬಾಸಿಡರ್ ಆಗಿ ಆರ್. ಮಾಧವನ್ ಆಯ್ಕೆ

ರಾಮನವಮಿ 2023: ಬಾವಿ ಮೇಲಿನ ಸಿಮೆಂಟ್ ಹಾಸು ಕುಸಿತ; ಬಾವಿಯೊಳಗೆ ಬಿದ್ದ 25 ಭಕ್ತರು…
MUST WATCH
ಹೊಸ ಸೇರ್ಪಡೆ

ರಾಮನವಮಿ: ದೇವಾಲಯದ ಬಾವಿಯ ಸಿಮೆಂಟ್ ಹಾಸು ಕುಸಿದು 13 ಭಕ್ತರ ಮೃತ್ಯು

ಸ್ವಿಗ್ಗಿ ಸಮೀಕ್ಷೆಯಲ್ಲಿ ಏನಿದೆ…ಇಡ್ಲಿ ಇಂದಿಗೂ ಜನಪ್ರಿಯ ಎಂಬುದಕ್ಕೆ ಈ ವ್ಯಕ್ತಿಯೇ ಸಾಕ್ಷಿ!

ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿಗೆ ಸಂಕಷ್ಟ; ಬಂಧಿಸುವಂತೆ ಕೋರ್ಟ್ ಆದೇಶ

ರಚನೆಯಾಗಿ ಎಂಟು ವರ್ಷಕ್ಕೇ ಸೋಂದಾ ಗ್ರಾಪಂಗೆ ಒಲಿದ ಗಾಂಧಿ ಗ್ರಾಮ ಪುರಸ್ಕಾರ

ಮರಳಿ ಕಾಂಗ್ರೆಸ್ ಸೇರ್ಪಡೆಯಾದ ಮಾಜಿ ಸಚಿವ ಗುಬ್ಬಿ ಶ್ರೀನಿವಾಸ್