Ban: ಎಕ್ಸ್ ಮೇಲೆ ನಿರ್ಬಂಧ ಹೇರಿದ ಪಾಕಿಸ್ಥಾನ
ರಾಷ್ಟ್ರೀಯ ಭದ್ರತೆ, ಸಾರ್ವಜನಿಕ ಸುವ್ಯವಸ್ಥೆ ಮತ್ತು ದೇಶದ ಸಮಗ್ರತೆಯ ಹಿತದೃಷ್ಟಿ...
Team Udayavani, Apr 17, 2024, 9:38 PM IST
ಹೊಸದಿಲ್ಲಿ: ಪಾಕಿಸ್ಥಾನದಲ್ಲಿ ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ ‘ಎಕ್ಸ್’ ನಿಷೇದಿಸುವುದರ ಗುರಿಯನ್ನು ಹೊಂದಿರುವುದಾಗಿ ಆಂತರಿಕ ಸಚಿವಾಲಯ ಇಸ್ಲಾಮಾಬಾದ್ ಹೈಕೋರ್ಟ್ಗೆ (ಐಎಚ್ಸಿ) ಮಾಹಿತಿ ನೀಡಿದೆ ಎಂದು ಡಾನ್ ವರದಿ ಮಾಡಿದೆ.
ನಿಷೇಧವನ್ನು ಪ್ರಶ್ನಿಸಿ ಪತ್ರಕರ್ತ ಎಹ್ತಿಶಾಮ್ ಅಬ್ಬಾಸಿ ಸಲ್ಲಿಸಿದ ಅರ್ಜಿಗೆ ಪ್ರತಿಕ್ರಿಯೆಯಾಗಿ ಸಚಿವಾಲಯವನ್ನು ಪ್ರತಿನಿಧಿಸುವ ಆಂತರಿಕ ಕಾರ್ಯದರ್ಶಿ ಖುರ್ರಾಮ್ ಅಘಾ ಅವರು ಹೈಕೋರ್ಟ್ಗೆ ವರದಿಯನ್ನು ಸಲ್ಲಿಸಿದ್ದಾರೆ.
ಫೆಬ್ರವರಿ 8 ರ ಸಾರ್ವತ್ರಿಕ ಚುನಾವಣೆಯಲ್ಲಿ ರಿಗ್ಗಿಂಗ್ ಕುರಿತು ಪಾಕಿಸ್ಥಾನದ ಮುಖ್ಯ ಚುನಾವಣ ಆಯುಕ್ತ ಮತ್ತು ಮುಖ್ಯ ನ್ಯಾಯಾಧೀಶರ ವಿರುದ್ಧ ರಾವಲ್ಪಿಂಡಿಯ ಮಾಜಿ ಕಮಿಷನರ್ ಲಿಯಾಕತ್ ಚಟ್ಟಾ ಅವರು ಮಾಡಿದ ಆರೋಪದ ನಂತರ ಫೆಬ್ರವರಿ 17 ರಿಂದ ಪಾಕಿಸ್ಥಾನದಲ್ಲಿ ಎಕ್ಸ್ ಪ್ರವೇಶವನ್ನು ನಿರ್ಬಂಧಿಸಲಾಗಿದೆ.
ಎಕ್ಸ್ ಕಾನೂನುಬದ್ಧ ನಿರ್ದೇಶನಗಳನ್ನು ಅನುಸರಿಸಲು ವಿಫಲವಾಗಿದೆ ಮತ್ತು ದುರುಪಯೋಗದ ಬಗ್ಗೆ ಕಳವಳಗಳನ್ನು ಪರಿಹರಿಸಲು ನಿಷೇಧ ಹೇರಲು ಕಾರಣವಾಯಿತು.ಗುಪ್ತಚರ ಮತ್ತು ಭದ್ರತಾ ಏಜೆನ್ಸಿಗಳ ವರದಿಗಳನ್ನು ಪರಿಗಣಿಸಿ ರಾಷ್ಟ್ರೀಯ ಭದ್ರತೆ, ಸಾರ್ವಜನಿಕ ಸುವ್ಯವಸ್ಥೆ ಮತ್ತು ದೇಶದ ಸಮಗ್ರತೆಯ ಹಿತದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಆಂತರಿಕ ಸಚಿವಾಲಯದ ವರದಿ ಹೇಳಿದೆ.
ಹಕ್ಕುಗಳ ಹೋರಾಟ ಸಂಸ್ಥೆಗಳು, ಪತ್ರಕರ್ತರ ಸಂಘಟನೆಗಳು ಮತ್ತು ಇಂಟರ್ನೆಟ್ ಸೇವಾ ಪೂರೈಕೆದಾರರು ಸಾಮಾಜಿಕ ಮಾಧ್ಯಮ ತಡೆ ವಿಧಿಸಿರುವುದನ್ನು ಖಂಡಿಸಿದ್ದಾರೆ. ಸಾಮಾಜಿಕ ಮಾಧ್ಯಮ ವೇದಿಕೆಗಳ ಮೇಲಿನ ನಿರ್ಬಂಧಗಳನ್ನು ತೆಗೆದುಹಾಕುವಂತೆ ಯುನೈಟೆಡ್ ಸ್ಟೇಟ್ಸ್ ಪಾಕಿಸ್ಥಾನಕ್ಕೆ ಕರೆ ನೀಡಿದೆ.
ಜಗತ್ತು ನಗುವುದು
ಈ ಕ್ರಮವನ್ನು ಸಿಂಧ್ ಪ್ರಾಂತದ ಹೈಕೋರ್ಟ್ ಟೀಕಿಸಿದೆ. “ಇಂಥ ಕ್ರಮದ ಮೂಲಕ ಏನನ್ನು ಸಾಧಿಸಲು ಹೊರಟಿದ್ದೀರಿ?ಈ ರೀತಿಯ ಕ್ರಮದಿಂದ ಪಾಕಿಸ್ಥಾನವನ್ನು ನೋಡಿ ಜಗತ್ತು ನಗಲಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದೆ. ಮಾಜಿ ಪ್ರಧಾನಿ ಇಮ್ರಾನ್ ಖಾನ್ ಬಂಧನ ಬಳಿಕ ಎಕ್ಸ್ ಸೇರಿದಂತೆ ಸಾಮಾಜಿಕ ಜಾಲತಾಣಗಳ ಮೇಲೆ ಫೆಬ್ರವರಿಯಲ್ಲಿ ನಿಷೇಧ ಹೇರಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಜಗತ್ತಿಗಿಂತ ಮೊದಲು ಪಾಕ್ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್ ದಾಳಿ ಬಗ್ಗೆ ಪ್ರಧಾನಿ
Encounter: ಛತ್ತೀಸ್ಗಢದಲ್ಲಿ ಎನ್ಕೌಂಟರ್… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ
MUST WATCH
ಹೊಸ ಸೇರ್ಪಡೆ
Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !
ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ
ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ
Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ
ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು