ಮಿತಿ ಮೀರಿದ ಮಿಡತೆ ಹಾವಳಿ ; ಏಳು ರಾಜ್ಯಗಳಿಗೆ ವ್ಯಾಪಿಸಿದ ಹಾನಿಕಾರಕ ಕೀಟಗಳು


Team Udayavani, May 29, 2020, 6:26 AM IST

ಮಿತಿ ಮೀರಿದ ಮಿಡತೆ ಹಾವಳಿ ; ಏಳು ರಾಜ್ಯಗಳಿಗೆ ವ್ಯಾಪಿಸಿದ ಹಾನಿಕಾರಕ ಕೀಟಗಳು

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಹೊಸದಿಲ್ಲಿ: ಪಾಕಿಸ್ಥಾನದಿಂದ ದಂಡೆತ್ತಿ ಬಂದಿರುವ ಮಿಡತೆಗಳ ಹಿಂಡು ದಿನೇ ದಿನೆ ಒಂದೊಂದೇ ರಾಜ್ಯ ಪ್ರವೇಶಿಸುತ್ತಿದೆ.

ಪ್ರಸ್ತುತ ಏಳು ರಾಜ್ಯಗಳಲ್ಲಿ ತನ್ನ ಹಾವಳಿ ಆರಂಭಿಸಿದೆ. 20 ಜಿಲ್ಲೆಗಳ 303 ಪ್ರದೇಶಗಳಲ್ಲಿ ಒಟ್ಟು 47,000 ಹೆಕ್ಟೇರ್‌ ಕೃಷಿ ಭೂಮಿಯಲ್ಲಿನ ಬೆಳೆಗೆ ಮಿಡತೆಗಳು ಮುತ್ತಿಗೆ ಹಾಕಿದೆ.

ಪರಿಸ್ಥಿತಿಯ ಗಂಭೀರತೆ ಅರಿತ ಕೇಂದ್ರ ಸರಕಾರ ಕೀಟಗಳ ನಿಯಂತ್ರಣಕ್ಕೆ ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳುತ್ತಿದೆ.

ಮಹಾರಾಷ್ಟ್ರ, ರಾಜಸ್ಥಾನ, ಗುಜರಾತ್‌, ಮಧ್ಯಪ್ರದೇಶ, ಹರ್ಯಾಣ ರಾಜ್ಯಗಳಲ್ಲಿದ್ದ ಮಿಡತೆಗಳು ಗುರುವಾರ ಬೆಳಗಾಗುವ ವೇಳೆಗೆ ಉತ್ತರಪ್ರದೇಶ ಮತ್ತು ಪಂಜಾಬ್‌ ಗಡಿಯನ್ನೂ ಪ್ರವೇಶಿಸಿವೆ. ಹೀಗಾಗಿ ಪಂಜಾಬ್‌ನಲ್ಲಿ ಕಟ್ಟೆಚ್ಚರ ವಹಿಸುವಂತೆ ಸೂಚಿಸಲಾಗಿದೆ.

ರಾಜಸ್ಥಾನದ 20 ಜಿಲ್ಲೆಗಳು, ಮಧ್ಯಪ್ರದೇಶದ ಒಂಭತ್ತು, ಮಹಾರಾಷ್ಟ್ರ, ಗುಜರಾತ್‌ನಲ್ಲಿ ತಲಾ ಎರಡು ಹಾಗೂ ಉತ್ತರಪ್ರದೇಶ, ಪಂಜಾಬ್‌ನ ತಲಾ ಒಂದು ಜಿಲ್ಲೆಯಲ್ಲಿ ಮಿಡತೆ ಗಳ ಹಿಂಡು ಕಾಣಿಸಿಕೊಂಡಿದೆ ಎಂದು ಕೃಷಿ ಸಚಿವಾಲಯ ತಿಳಿಸಿದೆ.

ವಿಮಾನ, ಡ್ರೋನ್‌ ಬಳಕೆ: ಈ ನಡುವೆ ಮಿಡತೆಗಳ ಹಾವಳಿಯಿಂದಾಗಿ ದೇಶದ ಆಹಾರ ಭದ್ರತೆಗೆ ಅಪಾಯ ಎದುರಾಗಿರುವ ಹಿನ್ನೆಲೆಯಲ್ಲಿ, ಮಿಡತೆಗಳ ವಿರುದ್ಧ ಕಾರ್ಯಾಚರಣೆ ನಡೆಸಲು, ರಿಮೋಟ್‌ನಿಂದ ನಿಯಂತ್ರಿಸಬಹುದಾದ ತನ್ನ ಏರ್‌ಕ್ರಾಫ್ಟ್‌ಗಳನ್ನು ಬಳಸಲು ನಾಗರಿಕ ವಿಮಾನಯಾನ ಸಚಿವಾಲಯ ಷರತ್ತುಬದ್ಧ ಅನುಮತಿ ನೀಡಿದೆ. ಇದರೊಂದಿಗೆ ಡ್ರೋನ್‌ಗಳನ್ನು ಬಳಸಿ ಮಿಡತೆಗಳ ಮೇಲೆ ಕೀಟನಾಶಕ ಸಿಂಪಡಿಸಲು ಎರಡು ಸಂಸ್ಥೆಗಳ ಜತೆ ಒಪ್ಪಂದ ಅಂತಿಮಗೊಂಡಿದೆ ಎಂದು ಕೃಷಿ ಸಚಿವಾಲಯ ತಿಳಿಸಿದೆ.

ಕೃಷಿಕರ ನೆರವಿಗೆ ನಿಂತ ಸರಕಾರ: ಒಂದೆಡೆ ಕೋವಿಡ್ ಸೋಂಕಿನ ವಿರುದ್ಧ ನಿರಂತರವಾಗಿ ಹೋರಾಡುತ್ತಿರುವ ಕೇಂದ್ರ ಸರಕಾರ, ಇದೀಗ ಮಿಡತೆಗಳ ಹಾವಳಿಯಿಂದ ಕಂಗೆಟ್ಟಿರುವ ಏಳು ರಾಜ್ಯಗಳ ಕೃಷಿಕರ ನೆರವಿಗೆ ಧಾವಿಸಿದೆ. ಮಿಡತೆಗಳ ಮೇಲೆ ರಾಸಾಯನಿಕ ಸಿಂಪಡಿಸಲು 60 ಹೆಚ್ಚುವರಿ ಸುಧಾರಿತ ಸ್ಪ್ರೇಯರ್‌ಗಳನ್ನು ಯುನೈಟೆಡ್‌ ಕಿಂಗ್ಡಮ್‌ನಿಂದ ತರಿಸಿಕೊಳ್ಳಲು ಕೇಂದ್ರ ಕೃಷಿ ಸಚಿವಾಲಯ ಸಮ್ಮತಿಸಿದೆ.

ಇದರೊಂದಿಗೆ ಮಿಡತೆಗಳ ಪರಿಣಾಮಕಾರಿ ನಿಯಂತ್ರಣಕ್ಕಾಗಿ ಕೀಟನಾಶಕ ಸಿಂಪಡಿಸಲು 89 ಅಗ್ನಿಶಾಮಕ ವಾಹನಗಳು, 120 ಸರ್ವೆ ವಾಹನಗಳು, ರಾಸಾಯನಿಕ ಸಿಂಪಡಣೆ ಸಾಧನಗಳನ್ನು ಒಳಗೊಂಡ 47 ನಿಯಂತ್ರಕ ವಾಹನಗಳು ಮತ್ತು ಸ್ಪ್ರೇಯರ್‌ಗಳನ್ನು ಅಳವಡಿಸಿರುವ 810 ಟ್ರ್ಯಾಕ್ಟರ್‌ಗಳನ್ನು ವಿವಿಧ ರಾಜ್ಯಗಳಲ್ಲಿ ಈಗಾಗಲೇ ನಿಯೋಜಿಸಲಾಗಿದೆ. ಕೃಷಿ ಸಚಿವ ನರೇಂದ್ರ ಸಿಂಗ್‌ ತೋಮರ್‌ ನೇತೃತ್ವದಲ್ಲಿ ಈ ಎಲ್ಲ ಚಟುವಟಿಕೆಗಳು ನಡೆಯುತ್ತಿವೆ.

ಟಾಪ್ ನ್ಯೂಸ್

1ewewwewqqewqeqe

India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್‌ ಹೇಳಿಕೆಗೆ ಆಕ್ರೋಶ

IMD

North Karnataka; ಹಲವು ಜಿಲ್ಲೆಗಳಲ್ಲಿ ಎರಡು ದಿನ ಉಷ್ಣ ಅಲೆ ಸಾಧ್ಯತೆ

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1ewewwewqqewqeqe

India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್‌ ಹೇಳಿಕೆಗೆ ಆಕ್ರೋಶ

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

1-aaa

Ex-IPS officer ಸಂಜೀವ್ ಭಟ್‌ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1ewewwewqqewqeqe

India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್‌ ಹೇಳಿಕೆಗೆ ಆಕ್ರೋಶ

IMD

North Karnataka; ಹಲವು ಜಿಲ್ಲೆಗಳಲ್ಲಿ ಎರಡು ದಿನ ಉಷ್ಣ ಅಲೆ ಸಾಧ್ಯತೆ

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.