ಭಾರತ ದಾಳಿ ನಡೆಸುವುದು ಎಂಬ ಭೀತಿಯಿಂದ ಅಭಿನಂದನ್ ವರ್ಧಮಾನ್ ಬಿಡುಗಡೆ ಮಾಡಿದ್ದ ಪಾಕ್!
ಭಾರತದ ದಾಳಿಗೆ ನಡುಗಿದ್ದ ಪಾಕ್ ವಿದೇಶಾಂಗ ಸಚಿವ, ಸೇನಾ ಮುಖ್ಯಸ್ಥ!
Team Udayavani, Oct 29, 2020, 8:43 AM IST
ಹೊಸದಿಲ್ಲಿ: ಪ್ರತಿಯೊಬ್ಬ ಭಾರತೀಯರಿಗೂ ಕಳೆದ ವರ್ಷದ ನಡೆದ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ ಪ್ರಕರಣ ನೆನಪಿರಬಹುದು. ವೈಮಾನಿಕ ದಾಳಿಯ ವೇಳೆ ಪಾಕಿಸ್ಥಾನ ಭೂ ಭಾಗ ಸೇರಿದ್ದ ಅಭಿನಂದನ್ ವರ್ಧಮಾನ್ ರನ್ನು ಪಾಕಿಸ್ಥಾನ 60 ಗಂಟೆಗಳ ಒಳಗೆ ಭಾರತಕ್ಕೆ ಮರಳಿ ಕಳುಹಿಸಿತ್ತು. ಆದರೆ ವಿಂಗ್ ಕಮಾಂಡರ್ ಬಿಡುಗಡೆಯ ಹಿಂದಿನ ಕಥೆ ಈಗ ಬಯಲಾಗಿದೆ.
ಒಂದು ವೇಳೆ ಪಾಕಿಸ್ಥಾನ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ ರನ್ನು ಬಿಡುಗಡೆ ಮಾಡದೇ ಇದ್ದರೆ ಭಾರತವು ಅದರ ಮೇಲೆ ದಾಳಿ ನಡೆಸಬಹುದು ಎಂಬ ಭೀತಿಯಿಂದ ಅವರನ್ನು ಬಿಡುಗಡೆ ಮಾಡಲಾಗಿತ್ತು ಎಂದು ಪಿಎಂಎಲ್-ಎನ್ ನಾಯಕ ಅಯಾಝ್ ಸಾದಿಕ್ ಹೇಳಿಕೊಂಡಿದ್ದಾರೆ.
ಪಾಕ್ ಸಂಸತ್ತಿನಲ್ಲಿ ಬುಧವಾರ ನಡೆದ ಚರ್ಚೆಯಲ್ಲಿ ಇಮ್ರಾನ್ ಖಾನ್ ಸರ್ಕಾರವನ್ನು ತರಾಟೆಗೆ ತೆಗೆದು ಕೊಂಡ ಪಿಎಂಎಲ್-ಎನ್ ನಾಯಕ ಅಯಾಝ್ ಸಾದಿಕ್, “ವರ್ಧಮಾನ್ ಅವರನ್ನು ಕಸ್ಟಡಿಗೆ ಪಡೆದ ನಂತರ ಉನ್ನತ ಮಟ್ಟದ ಸಭೆ ನಡೆಸಲಾಗಿತ್ತು. ಶಾ ಮಹಮೂದ್ ಖುರೇಷಿ ಸಭೆಯಲ್ಲಿದ್ದರು. ಇಮ್ರಾನ್ ಖಾನ್ ಹಾಜರಾಗಲು ನಿರಾಕರಿಸಿದ್ದರು. ನನಗಿನ್ನೂ ನೆನಪಿದೆ. ಸೇನಾ ಮುಖ್ಯಸ್ಥ ಜನರಲ್ ಬಜ್ವಾ ಕೋಣೆಗೆ ಬಂದರು, ಅವರ ಕಾಲುಗಳು ನಡುಗುತ್ತಿದ್ದವು, ಬೆವರುತ್ತಿದ್ದರು. ಆಗ ವಿದೇಶಾಂಗ ಸಚಿವ ಶಾ ಮಹಮೂದ್ ಖುರೇಷಿ ಅವರು, ನಾವು ಅಭಿನಂದನ್ ವರ್ಧಮಾನ್ ರನ್ನು ಬಿಡುಗಡೆ ಮಾಡದೆ ಇದ್ದರೆ, ರಾತ್ರಿ 9 ಗಂಟೆಗೆ ಭಾರತವು ಪಾಕಿಸ್ತಾನದ ಮೇಲೆ ದಾಳಿ ನಡೆಸಲಿದೆ, ಅವರನ್ನು ಬಿಟ್ಟು ಬಿಡಿ ಎಂದಿದ್ದರು” ಎಂದು ಹೇಳಿದ್ದಾರೆ.
ಅಭಿನಂದನ್ ಸೇರಿದಂತೆ ಎಲ್ಲಾ ವಿಷಯಗಳಲ್ಲಿ ಪ್ರತಿಪಕ್ಷಗಳು ಸರ್ಕಾರವನ್ನು ಬೆಂಬಲಿಸಿವೆ. ಆದರೆ ” ಮತ್ತಷ್ಟು ಬೆಂಬಲಿಸಲು ಸಾಧ್ಯವಾಗುವುದಿಲ್ಲ” ಎಂದು ಸಾದಿಕ್ ಹೇಳಿದ್ದಾರೆ ಎಂದು ದುನ್ಯಾ ನ್ಯೂಸ್ ವರದಿ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್