ದೇಶದಲ್ಲಿ ಟೆರರ್ ಅಟ್ಯಾಕ್ ಆದಾಗಲೆಲ್ಲಾ ಪಾಕ್ ಗೆ ನಡುಕ: IAF ಮುಖ್ಯಸ್ಥ ಭದೌರಿಯಾ ಹೇಳಿಕೆ
ದೇಶಕ್ಕಾಗಿ ವಾಯುಪಡೆಯ ಸೇವೆ 24x7 ಲಭ್ಯವಿರುತ್ತದೆ – ಈ ಕುರಿತಾಗಿ ಯಾರಿಗೂ ಸಂಶಯ ಬೇಡ
Team Udayavani, May 20, 2020, 4:11 PM IST
ಹೊಸದಿಲ್ಲಿ: ಪಾಕಿಸ್ಥಾನ ಗಡಿಯಾಚೆ ನಡೆಸುತ್ತಿರುವ ಉಗ್ರ ಚಟುವಟಿಕೆಗಳ ಮೇಲೆ ಭಾರತೀಯ ವಾಯು ಪಡೆ ಮತ್ತೊಮ್ಮೆ ಎಚ್ಚರಿಕೆಯ ಗಂಟೆ ಮೊಳಗಿಸಿದೆ.
ಪಾಕ್ ಆಕ್ರಮಿತ ಕಾಶ್ಮೀರದಲ್ಲಿನ ಗಡಿ ನಿಯಂತ್ರಣ ರೇಖೆ ಬಳಿ ಕಂಡುಬರುವ ಉಗ್ರಗಾಮಿಗಳ ಶಿಬಿರ ಅಥವಾ ಯಾವುದೇ ಲಾಂಚ್ಪ್ಯಾಡ್ಗಳನ್ನು ಧ್ವಂಸಗೊಳಿಸಲು ಐಎಎಫ್ ಸಿದ್ಧವಿದೆ ಎಂದು ವಾಯುಪಡೆಯ ಮುಖ್ಯಸ್ಥ ರಾಕೇಶ್ ಕುಮಾರ್ ಸಿಂಗ್ ಭದೌರಿಯಾ ಹೇಳಿದ್ದಾರೆ.
ಸಂದರ್ಶನದಲ್ಲಿ ಮಾತನಾಡಿದ ಅವರು, ಭಾರತದ ನೆಲದಲ್ಲಿ ಭಯೋತ್ಪಾದಕ ದಾಳಿ ನಡೆದಾಗಲೆಲ್ಲಾ ಪಾಕಿಸ್ತಾನಕ್ಕೆ ಚಿಂತೆಯಾಗುವಂತೆ ನಾವು ಮಾಡಿದ್ದೇವೆ ಮತ್ತು ಈ ಚಿಂತೆ ಮುಂಬರುವ ದಿನಗಳಲ್ಲೂ ಆ ದೇಶಕ್ಕಿರಬೇಕು.
ಮತ್ತು ಭವಿಷ್ಯದಲ್ಲಿ ಈ ರೀತಿಯ ಚಿಂತೆ ಕಡಿಮೆಯಾಗಬೇಕಾದರೆ ಪಾಕಿಸ್ತಾನ ಭಯೋತ್ಪಾದನೆಗೆ ಕುಮ್ಮಕ್ಕು ಕೊಡುವುದನ್ನು ಬಿಡುವುದು ಅನಿವಾರ್ಯ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಸರಕಾರದ ನಿರ್ದೇಶನಗಳಿಗನುಗುಣವಾಗಿ ಯಾವುದೇ ಸಂದರ್ಭದಲ್ಲಿ ಕಾರ್ಯಾಚರಣೆ ನಡೆಸಲು ನಮ್ಮ ವಾಯುಪಡೆ ಸಶಕ್ತವಾಗಿದೆ ಎಂದು ಭದೌರಿಯಾ ಅವರು ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ ನುಡಿದರು. ದೇಶಕ್ಕಾಗಿ ವಾಯುಪಡೆಯ ಸೇವೆ 24×7 ಲಭ್ಯವಿರುತ್ತದೆ ಈ ಕುರಿತಾಗಿ ಯಾರಿಗೂ ಸಂಶಯ ಬೇಡ ಎಂಬುದು ವಾಯುಪಡೆಯ ಮುಖ್ಯಸ್ಥರ ಖಚಿತ ಧ್ವನಿಯಾಗಿದೆ.
ಭಾರತೀಯ ವಾಯುಪಡೆ ನಡೆಸಿದ ಬಾಲಾಕೋಟ್ ವಾಯು ದಾಳಿಯ ಮೂಲಕ ನಾವು ಪಾಕಿಸ್ಥಾನಕ್ಕೆ ಸ್ಪಷ್ಟ ಸಂದೇಶವನ್ನು ರವಾನಿಸಿದ್ದೇವೆ ಹಾಗೂ ಗಡಿಯಾಚೆಗಿನ ಮೂಲಭೂತ ಸೌಕರ್ಯಗಳನ್ನು ಉಗ್ರ ಪೋಷಣೆಗೆ ಬಳಸಿಕೊಂಡಲ್ಲಿ ಇದೇ ರೀತಿಯ ಪರಿಣಾಮವನ್ನು ಎದುರಿಸಬೇಕಾಗುತ್ತದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಇತ್ತೀಚೆಗೆ ಹೇಳಿರುವುದುನ್ನು ಇಲ್ಲಿ ಗಮನಿಸಬಹುದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ