ಗಡಿಯಲ್ಲಿ ನಿಲ್ಲದ ಪಾಕ್ ಸೈನಿಕರ ಅಟ್ಟಹಾಸ; ಶಾಲೆ, ಜನವಸತಿ ಪ್ರದೇಶದ ಮೇಲೆ ದಾಳಿ
Team Udayavani, Sep 14, 2019, 2:45 PM IST
ಪೂಂಚ್/ರಜೌರಿ: ಕಣಿವೆ ರಾಜ್ಯದಲ್ಲಿ ಶಾಂತಿಯನ್ನು ಕದಡಬೇಕೆಂಬ ಹಠಕ್ಕೆ ಬಿದ್ದಿರುವ ಪಾಕಿಸ್ತಾನಿ ಸೇನೆ ಜಮ್ಮು-ಕಾಶ್ಮೀರದ ಗಡಿಭಾಗದಲ್ಲಿ ಕದನ ವಿರಾಮ ಉಲ್ಲಂಘಿಸಿ ನಡೆಸುತ್ತಿರುವ ದಾಳಿಯನ್ನು ಶನಿವಾರವೂ ಮುಂದುವರಿಸಿದೆ.
ಪೂಂಚ್ ಜಿಲ್ಲೆಯ ಮಾಂಧೇರ್ ಮತ್ತು ಬಾಲಕೋಟ್ ಸೆಕ್ಟರ್ ಮತ್ತು ಭೀಮ್ ಭೇರ್ ಗಾಲಿ ಮತ್ತು ಮಂಜಾನ್ ಕೋಟ್ ಸೆಕ್ಟರ್ ಸಮೀಪ ಪಾಕಿಸ್ತಾನ ಸೇನೆ ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.
ಗಡಿನಿಯಂತ್ರಣ ರೇಖೆ ಬಳಿ ಇಂದು ಬೆಳಗ್ಗೆಯಿಂದ ಜನವಸತಿ ಪ್ರದೇಶ ಮತ್ತು ಶಾಲೆಗಳನ್ನು ಗುರಿಯಾಗಿರಿಸಿಕೊಂಡು ಪಾಕ್ ಸೇನೆ ಮೋರ್ಟಾರ್ ದಾಳಿ ನಡೆಸುತ್ತಿದೆ. ಏತನ್ಮಧ್ಯೆ ಭಾರತೀಯ ಸೇನೆ ಪ್ರತಿದಾಳಿ ನಡೆಸುವ ಮೂಲಕ ತಕ್ಕ ಉತ್ತರ ನೀಡಿರುವುದಾಗಿ ವರದಿ ವಿವರಿಸಿದೆ.
ಕಳೆದ ಎರಡು ದಿನಗಳ ಕಾಲ ಪಾಕ್ ಸೇನೆ ಕದನ ವಿರಾಮ ಉಲ್ಲಂಘಿಸಿ ದಾಳಿ ನಡೆಸಿದ್ದಕ್ಕೆ ಪ್ರತಿಯಾಗಿ ಭಾರತೀಯ ಸೇನೆ ನಡೆಸಿದ ದಾಳಿಯಲ್ಲಿ ಇಬ್ಬರು ಪಾಕ್ ಸೈನಿಕರು ಬಲಿಯಾಗಿದ್ದರು. ಸೆಪ್ಟೆಂಬರ್ 13ರಂದು ಪಾಕ್ ಸೈನಿಕರು ಬಿಳಿ ಬಾವುಟ ಪ್ರದರ್ಶಿಸುವ ಮೂಲಕ ಭಾರತೀಯ ಸೇನೆಗೆ ಶರಣಾಗಿ ಇಬ್ಬರ ಶವಗಳನ್ನು ತೆಗೆದುಕೊಂಡು ಹೋಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
MUST WATCH
ಹೊಸ ಸೇರ್ಪಡೆ
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ