ಗಡಿಯಲ್ಲಿ ಪಾಕ್ ಗುಂಡಿನ ಮಳೆ:ಒಂದೇ ಕುಟುಂಬದ ಐವರು ಬಲಿ
Team Udayavani, Mar 18, 2018, 10:47 AM IST
ಶ್ರೀನಗರ: ಗಡಿಯಲ್ಲಿ ಕದನ ವಿರಾಮ ಉಲ್ಲಂಘನೆ ಮಾಡಿ ಗುಂಡಿನ ದಾಳಿ ನಡೆಸುವುದನ್ನು ಪಾಕಿಸ್ಥಾನ ಮುಂದುವರಿಸಿದ್ದು , ಬಾಲ್ಕೋಟ್ ಸೆಕ್ಟರ್ನಲ್ಲಿ ಭಾನುವಾರ ಬೆಳಗ್ಗೆ ಭಾರೀ ದಾಳಿ ನಡೆಸಿದ್ದು ಒಂದೇ ಕುಟುಂಬದ ಐವರು ಭಾರತೀಯ ನಾಗರಿಕರು ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಪಾಕ್ ದಾಳಿಯಲ್ಲಿ ಒಂದೇ ಕುಟುಂಬದ ಐವರು ಸಾವನ್ನಪ್ಪಿರುವುದನ್ನು ಜಮ್ಮು ಮತ್ತು ಕಾಶ್ಮೀರ ಡಿಜಿಪಿ ಎಸ್ಪಿ ವಾಯಿದ್ ಅವರು ಧೃತ ಪಡಿಸಿದ್ದಾರೆ.
ಮೃತರು ದೇವತಾ ವಿಹಾರ್ ಗ್ರಾಮದ ಚೌಧರಿ ಮಹಮದ್ ರಮ್ಜಾನ್ , ಆತನ ಪತ್ನಿ ಮತ್ತು ಮೂವರು ಮಕ್ಕಳು, ಇನ್ನಿಬ್ಬರು ಮಕ್ಕಳು ಗಾಯಾಳುಗಳು ಎಂದು ತಿಳಿದು ಬಂದಿದೆ.
ಮೋರ್ಟಾರ್ ಶೆಟ್ ಮತ್ತು ಗುಂಡಿನ ದಾಳಿ ನಡೆಸಲಾಗಿದೆ ಎಂದು ಸೇನಾ ಮೂಲಗಳು ತಿಳಿಸಿವೆ.
ಪಾಕ್ ದಾಳಿಗೆ ಭಾರತೀಯ ಸೈನಿಕರು ತಕ್ಕ ಉತ್ತರ ನೀಡಿದ್ದು , ಭಾರೀ ಪ್ರಮಾಣದಲ್ಲಿ ಪ್ರತಿ ದಾಳಿ ನಡೆಸುವ ಸಿದ್ಧತೆ ನಡೆಸಿದ್ದಾರೆ ಎಂದು ವರದಿಯಾಗಿದೆ.
ಪಾಕ್ ವಿದೇಶಾಂಗ ಸಚಿವ ಖ್ವಾಜಾ ಮಹಮದ್ ಆಸಿಫ್ ಗಡಿಯಲ್ಲಿ ಗುಂಡಿನ ದಾಳಿ ನಡೆಯುತ್ತಿರುವ ಹಿನ್ನಲೆಯಲ್ಲಿ ನಾವು ಭಾರತದೊಂದಿಗೆ ಸಂಬಂಧವನ್ನು ಉತ್ತಮ ಪಡಿಸಮು ಇಚ್ಛಿಸುವುದಿಲ್ಲ ಎಂದು 3 ದಿನಗಳ ಒಳಗೆ ಪಾಕ್ ಭಾರೀ ದಾಳಿ ನಡೆಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?